ಜನರ ಗಮನ ಸೆಳೆಯುತ್ತಿದೆ ಮೇಕೆದಾಟು ಪಾದಯಾತ್ರೆ

Thumbnail image

ಕಾಂಗ್ರೆಸ್​ನ ಮಹತ್ವಾಕಾಂಕ್ಷಿ ಮೇಕೆದಾಟು ಪಾದಯಾತ್ರೆ ಮುಂದುವರೆದಿದ್ದು, ಜನಪ್ರಿಯತೆ ಪಡೆದುಕೊಳ್ಳುತ್ತಿದೆ.

ರಾಮನಗರ: ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ಎರಡನೇ ದಿನ ಪೂರೈಸಿದ್ದು, ದಿನ ಕಳೆದಂತೆ ಪಾದಯಾತ್ರೆಗೆ ವಿವಿಧ ಆಯಾಮಗಳಲ್ಲಿ ಜನಪ್ರಿಯತೆ ದೊರೆಯುತ್ತಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಯಿತು. ಪಾದಯಾತ್ರೆಯಲ್ಲಿ ಭಾಗವಹಿಸಿರುವ ನಾಯಕರು ಮತ್ತು ಚಿತ್ರರಂಗದ ಪ್ರಮುಖರ ವಿರುದ್ಧ ನಿಯಮ ಉಲ್ಲಂಘನೆ ಹಿನ್ನೆಲೆ ಎಫ್ಐಆರ್ ದಾಖಲಾಗಿದೆ.

ಇನ್ನು ಕಾಂಗ್ರೆಸ್ ನಾಯಕರು ಒಟ್ಟಾಗಿ ಪಾದಯಾತ್ರೆಯಲ್ಲಿ ಭಾಗಿಯಾಗದೇ ಬಿಡಿ ಬಿಡಿಯಾಗಿ ತೆರಳಿದ್ದರು ಎಂಬ ಅಪವಾದ ಕೂಡ ಕೇಳಿ ಬಂದಿದೆ. ಮಧ್ಯಾಹ್ನದವರೆಗೆ ಪಾದಯಾತ್ರೆಯಲ್ಲಿ ಭಾಗಿಯಾದ ಸಿದ್ದರಾಮಯ್ಯ ಅನಾರೋಗ್ಯದ ಕಾರಣ ನೀಡಿ ವಾಪಸ್ ಬೆಂಗಳೂರಿಗೆ ತೆರಳಿದ್ದರು. ಈ ಎಲ್ಲ ಕಾರಣಗಳು ಮೊದಲ ದಿನದ ಪಾದಯಾತ್ರೆಯ ಯಶಸ್ಸನ್ನು ಮಂಕಾಗಿಸಿತ್ತು. ದಿನ ಪೂರೈಸಿದ ಮೇಕೆದಾಟು ಪಾದಯಾತ್ರೆ

ಆದರೆ, ಎರಡನೇ ದಿನ ಎಲ್ಲವೂ ಅತ್ಯಂತ ವ್ಯವಸ್ಥಿತವಾಗಿ ನಡೆಯುವ ಮೂಲಕ ಕಾಂಗ್ರೆಸ್ ನಾಯಕರು ಕರೆ ಕೊಟ್ಟಿರುವ ಪಾದಯಾತ್ರೆ ಕೇವಲ ರಾಜಕೀಯ ಆಶಯ ಈಡೇರಿಕೆಗೆ ಮಾತ್ರವಲ್ಲದೇ ಬೇರೆ ಬೇರೆ ವಿಧದಲ್ಲೂ ಜನಪ್ರಿಯತೆ ಗಳಿಸಿಕೊಳ್ಳಲಿದೆ ಎಂಬ ಸೂಚನೆ ಲಭಿಸಿತು.

ಮರಳೇಗವಿ ಮಠಕ್ಕೆ ಭೇಟಿ:

ನಿನ್ನೆ ಬೆಳಗ್ಗೆ ಪಾದಯಾತ್ರೆ ನಡೆಯುವ ಮಾರ್ಗದಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕನಕಪುರದ ಮರಳೇಗವಿ ಮಠಕ್ಕೆ ಭೇಟಿ ನೀಡಿ, ಡಾ. ಮುಮ್ಮಡಿ ಶಿವರುದ್ರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಪಾದಯಾತ್ರೆ ಯಶಸ್ಸಿಗೆ ಶ್ರೀಗಳು ಆಶೀರ್ವದಿಸಿದರು.

ವಿದ್ಯಾರ್ಥಿಗಳಿಗೆ ನೀರಿನ ಮಹತ್ವ ತಿಳಿಹೇಳಿದ ಡಿಕೆಶಿ..

ದೊಡ್ಡಾಲಹಳ್ಳಿ ಸಮೀಪದ ಕೃಷ್ಣಯ್ಯನದೊಡ್ಡಿಯಲ್ಲಿ ಶಾಲಾ ಮಕ್ಕಳು ಡಿಕೆ ಶಿವಕುಮಾರ್ ಅವರ ಜೊತೆ ಹೆಜ್ಜೆ ಹಾಕಿ ಗಮನ ಸೆಳೆದರು. ಮಕ್ಕಳ ಜೊತೆ ಕೆಲ ಕಾಲ ಸಮಯ ಕಳೆದ ಡಿಕೆ ಶಿವಕುಮಾರ್ ಅವರ ಜೊತೆ ಉಭಯಕುಶಲೋಪರಿ ನಡೆಸಿದರು.

ಪಾದಯಾತ್ರೆ ಸಂದರ್ಭದಲ್ಲಿ ಒಂದಿಷ್ಟು ವಿಶ್ರಾಂತಿಯನ್ನು ಸಹ ಈ ಮೂಲಕ ಪಡೆದ ಡಿಕೆ ಶಿವಕುಮಾರ್, ಮಕ್ಕಳ ಜೊತೆ ಬೆರೆತು ಅವರೊಂದಿಗೆ ವಿವಿಧ ವಿಚಾರಗಳ ಮಾಹಿತಿ ವಿನಿಮಯ ಮಾಡಿಕೊಂಡರು. ಕುಡಿಯುವ ನೀರಿನ ಮಹತ್ವವನ್ನು ಮಕ್ಕಳಿಗೆ ತಿಳಿ ಹೇಳಿದರು.

ಪರಿಸರ ರಕ್ಷಣೆ ಸಂದೇಶ:

ನಿನ್ನೆ ಬೆಳಗ್ಗೆ ಪಾದಯಾತ್ರೆ ಆರಂಭವಾದ ಸಂಗಮ ಸ್ಥಳದಿಂದ ಸಂಜೆವರೆಗಗೂ ರಸ್ತೆ ಉದ್ದಕ್ಕೂ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಪರಿಸರ ರಕ್ಷಣೆ ಸಂದೇಶ ಸಾರಿದರು. ಕಾಂಗ್ರೆಸ್ ಕಾರ್ಯಕರ್ತರು ಸಂಗಮದಿಂದ ದೊಡ್ಡ ಆಲಹಳ್ಳಿವರೆಗೂ ರಸ್ತೆ ಉದ್ದಕ್ಕೂ ಬಿದ್ದಿದ್ದ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯವನ್ನು ಸಂಗ್ರಹಿಸಿದ್ದಾರೆ.

ಎರಡು ಬಿಂದಿಗೆ ನೀರು ಹೊತ್ತ ಹುಸೇನ್:

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಎ. ಹುಸೇನ್ ಅವರು ಮೇಕೆದಾಟು ಪಾದಯಾತ್ರೆ ನಿಮಿತ್ತ ಸಂಗಮದಿಂದ ಬೆಂಗಳೂರಿಗೆ ಎರಡು ಬಿಂದಿಗೆಗಳಲ್ಲಿ ಕಾವೇರಿ ನೀರು ತರುತ್ತಿದ್ದಾರೆ. ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಅವರು ಒಂದು ಉದ್ದನೆಯ ಬೆತ್ತದ ಕೋಲಿಗೆ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್ ಬಿಂದಿಗೆಗಳನ್ನು ಕಟ್ಟಿಕೊಂಡು, ಅದರಲ್ಲಿ ಸಂಗಮ ಸ್ಥಳದಿಂದ ತುಂಬಿಸಿಕೊಂಡ ಕಾವೇರಿ ನೀರನ್ನು ತೆಗೆದುಕೊಂಡು ಬರುತ್ತಿದ್ದಾರೆ.

ಪಾದಯಾತ್ರೆಯಲ್ಲಿ ನಿರಂತರ ಎರಡು ಬಿಂದಿಗೆಗಳನ್ನು ಹೊತ್ತುಕೊಂಡು ಆಗಮಿಸುತ್ತಿರುವ ಇವರು ಹತ್ತು ದಿನದ ಪಾದಯಾತ್ರೆ ಉದ್ದಕ್ಕೂ ಈ ಬಿಂದಿಗೆಗಳನ್ನು ಹೊತ್ತುಕೊಂಡು ಸಾಗುವುದಾಗಿ ತಿಳಿಸಿದ್ದು, ಅಂತಿಮವಾಗಿ ಬೆಂಗಳೂರಿಗೆ ಆಗಮಿಸಿದ ನಂತರ ಅದನ್ನು ಏನು ಮಾಡಬೇಕೆಂದು ಪಕ್ಷ ನಿರ್ಧರಿಸಲಿದೆ ಎಂದು ತಿಳಿಸಿದ್ದಾರೆ.

ಎರಡನೇ ದಿನದ ಪಾದಯಾತ್ರೆಯಲ್ಲಿ ಹಲವು ವಿಶೇಷತೆಗಳು ಜನರ ಗಮನ ಸೆಳೆದವು. ಇನ್ನೂ ಇಂದಿನ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಸಹ ಭಾಗವಹಿಸಲಿದ್ದಾರೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *