ಜನರ ಗಮನ ಸೆಳೆಯುತ್ತಿದೆ ಮೇಕೆದಾಟು ಪಾದಯಾತ್ರೆ

Thumbnail image

ಕಾಂಗ್ರೆಸ್​ನ ಮಹತ್ವಾಕಾಂಕ್ಷಿ ಮೇಕೆದಾಟು ಪಾದಯಾತ್ರೆ ಮುಂದುವರೆದಿದ್ದು, ಜನಪ್ರಿಯತೆ ಪಡೆದುಕೊಳ್ಳುತ್ತಿದೆ.

ರಾಮನಗರ: ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ಎರಡನೇ ದಿನ ಪೂರೈಸಿದ್ದು, ದಿನ ಕಳೆದಂತೆ ಪಾದಯಾತ್ರೆಗೆ ವಿವಿಧ ಆಯಾಮಗಳಲ್ಲಿ ಜನಪ್ರಿಯತೆ ದೊರೆಯುತ್ತಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಯಿತು. ಪಾದಯಾತ್ರೆಯಲ್ಲಿ ಭಾಗವಹಿಸಿರುವ ನಾಯಕರು ಮತ್ತು ಚಿತ್ರರಂಗದ ಪ್ರಮುಖರ ವಿರುದ್ಧ ನಿಯಮ ಉಲ್ಲಂಘನೆ ಹಿನ್ನೆಲೆ ಎಫ್ಐಆರ್ ದಾಖಲಾಗಿದೆ.

ಇನ್ನು ಕಾಂಗ್ರೆಸ್ ನಾಯಕರು ಒಟ್ಟಾಗಿ ಪಾದಯಾತ್ರೆಯಲ್ಲಿ ಭಾಗಿಯಾಗದೇ ಬಿಡಿ ಬಿಡಿಯಾಗಿ ತೆರಳಿದ್ದರು ಎಂಬ ಅಪವಾದ ಕೂಡ ಕೇಳಿ ಬಂದಿದೆ. ಮಧ್ಯಾಹ್ನದವರೆಗೆ ಪಾದಯಾತ್ರೆಯಲ್ಲಿ ಭಾಗಿಯಾದ ಸಿದ್ದರಾಮಯ್ಯ ಅನಾರೋಗ್ಯದ ಕಾರಣ ನೀಡಿ ವಾಪಸ್ ಬೆಂಗಳೂರಿಗೆ ತೆರಳಿದ್ದರು. ಈ ಎಲ್ಲ ಕಾರಣಗಳು ಮೊದಲ ದಿನದ ಪಾದಯಾತ್ರೆಯ ಯಶಸ್ಸನ್ನು ಮಂಕಾಗಿಸಿತ್ತು. ದಿನ ಪೂರೈಸಿದ ಮೇಕೆದಾಟು ಪಾದಯಾತ್ರೆ

ಆದರೆ, ಎರಡನೇ ದಿನ ಎಲ್ಲವೂ ಅತ್ಯಂತ ವ್ಯವಸ್ಥಿತವಾಗಿ ನಡೆಯುವ ಮೂಲಕ ಕಾಂಗ್ರೆಸ್ ನಾಯಕರು ಕರೆ ಕೊಟ್ಟಿರುವ ಪಾದಯಾತ್ರೆ ಕೇವಲ ರಾಜಕೀಯ ಆಶಯ ಈಡೇರಿಕೆಗೆ ಮಾತ್ರವಲ್ಲದೇ ಬೇರೆ ಬೇರೆ ವಿಧದಲ್ಲೂ ಜನಪ್ರಿಯತೆ ಗಳಿಸಿಕೊಳ್ಳಲಿದೆ ಎಂಬ ಸೂಚನೆ ಲಭಿಸಿತು.

ಮರಳೇಗವಿ ಮಠಕ್ಕೆ ಭೇಟಿ:

ನಿನ್ನೆ ಬೆಳಗ್ಗೆ ಪಾದಯಾತ್ರೆ ನಡೆಯುವ ಮಾರ್ಗದಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕನಕಪುರದ ಮರಳೇಗವಿ ಮಠಕ್ಕೆ ಭೇಟಿ ನೀಡಿ, ಡಾ. ಮುಮ್ಮಡಿ ಶಿವರುದ್ರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಪಾದಯಾತ್ರೆ ಯಶಸ್ಸಿಗೆ ಶ್ರೀಗಳು ಆಶೀರ್ವದಿಸಿದರು.

ವಿದ್ಯಾರ್ಥಿಗಳಿಗೆ ನೀರಿನ ಮಹತ್ವ ತಿಳಿಹೇಳಿದ ಡಿಕೆಶಿ..

ದೊಡ್ಡಾಲಹಳ್ಳಿ ಸಮೀಪದ ಕೃಷ್ಣಯ್ಯನದೊಡ್ಡಿಯಲ್ಲಿ ಶಾಲಾ ಮಕ್ಕಳು ಡಿಕೆ ಶಿವಕುಮಾರ್ ಅವರ ಜೊತೆ ಹೆಜ್ಜೆ ಹಾಕಿ ಗಮನ ಸೆಳೆದರು. ಮಕ್ಕಳ ಜೊತೆ ಕೆಲ ಕಾಲ ಸಮಯ ಕಳೆದ ಡಿಕೆ ಶಿವಕುಮಾರ್ ಅವರ ಜೊತೆ ಉಭಯಕುಶಲೋಪರಿ ನಡೆಸಿದರು.

ಪಾದಯಾತ್ರೆ ಸಂದರ್ಭದಲ್ಲಿ ಒಂದಿಷ್ಟು ವಿಶ್ರಾಂತಿಯನ್ನು ಸಹ ಈ ಮೂಲಕ ಪಡೆದ ಡಿಕೆ ಶಿವಕುಮಾರ್, ಮಕ್ಕಳ ಜೊತೆ ಬೆರೆತು ಅವರೊಂದಿಗೆ ವಿವಿಧ ವಿಚಾರಗಳ ಮಾಹಿತಿ ವಿನಿಮಯ ಮಾಡಿಕೊಂಡರು. ಕುಡಿಯುವ ನೀರಿನ ಮಹತ್ವವನ್ನು ಮಕ್ಕಳಿಗೆ ತಿಳಿ ಹೇಳಿದರು.

ಪರಿಸರ ರಕ್ಷಣೆ ಸಂದೇಶ:

ನಿನ್ನೆ ಬೆಳಗ್ಗೆ ಪಾದಯಾತ್ರೆ ಆರಂಭವಾದ ಸಂಗಮ ಸ್ಥಳದಿಂದ ಸಂಜೆವರೆಗಗೂ ರಸ್ತೆ ಉದ್ದಕ್ಕೂ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಪರಿಸರ ರಕ್ಷಣೆ ಸಂದೇಶ ಸಾರಿದರು. ಕಾಂಗ್ರೆಸ್ ಕಾರ್ಯಕರ್ತರು ಸಂಗಮದಿಂದ ದೊಡ್ಡ ಆಲಹಳ್ಳಿವರೆಗೂ ರಸ್ತೆ ಉದ್ದಕ್ಕೂ ಬಿದ್ದಿದ್ದ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯವನ್ನು ಸಂಗ್ರಹಿಸಿದ್ದಾರೆ.

ಎರಡು ಬಿಂದಿಗೆ ನೀರು ಹೊತ್ತ ಹುಸೇನ್:

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಎ. ಹುಸೇನ್ ಅವರು ಮೇಕೆದಾಟು ಪಾದಯಾತ್ರೆ ನಿಮಿತ್ತ ಸಂಗಮದಿಂದ ಬೆಂಗಳೂರಿಗೆ ಎರಡು ಬಿಂದಿಗೆಗಳಲ್ಲಿ ಕಾವೇರಿ ನೀರು ತರುತ್ತಿದ್ದಾರೆ. ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಅವರು ಒಂದು ಉದ್ದನೆಯ ಬೆತ್ತದ ಕೋಲಿಗೆ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್ ಬಿಂದಿಗೆಗಳನ್ನು ಕಟ್ಟಿಕೊಂಡು, ಅದರಲ್ಲಿ ಸಂಗಮ ಸ್ಥಳದಿಂದ ತುಂಬಿಸಿಕೊಂಡ ಕಾವೇರಿ ನೀರನ್ನು ತೆಗೆದುಕೊಂಡು ಬರುತ್ತಿದ್ದಾರೆ.

ಪಾದಯಾತ್ರೆಯಲ್ಲಿ ನಿರಂತರ ಎರಡು ಬಿಂದಿಗೆಗಳನ್ನು ಹೊತ್ತುಕೊಂಡು ಆಗಮಿಸುತ್ತಿರುವ ಇವರು ಹತ್ತು ದಿನದ ಪಾದಯಾತ್ರೆ ಉದ್ದಕ್ಕೂ ಈ ಬಿಂದಿಗೆಗಳನ್ನು ಹೊತ್ತುಕೊಂಡು ಸಾಗುವುದಾಗಿ ತಿಳಿಸಿದ್ದು, ಅಂತಿಮವಾಗಿ ಬೆಂಗಳೂರಿಗೆ ಆಗಮಿಸಿದ ನಂತರ ಅದನ್ನು ಏನು ಮಾಡಬೇಕೆಂದು ಪಕ್ಷ ನಿರ್ಧರಿಸಲಿದೆ ಎಂದು ತಿಳಿಸಿದ್ದಾರೆ.

ಎರಡನೇ ದಿನದ ಪಾದಯಾತ್ರೆಯಲ್ಲಿ ಹಲವು ವಿಶೇಷತೆಗಳು ಜನರ ಗಮನ ಸೆಳೆದವು. ಇನ್ನೂ ಇಂದಿನ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಸಹ ಭಾಗವಹಿಸಲಿದ್ದಾರೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *