ತಿಮಿಂಗ.ಮಿಣಿಂಗಾ…ಟಿಷ್ಯಾ ನಂತರ ಬುಡಕಟ್ಟುಗಳ ಹೊಸ ಸಿದ್ಧಿ!

ಉನ್ನತ ಕ್ರೀಡಾಪಟುತ್ವ ರೂಪಿಸಲು ಉತ್ತರ ಕನ್ನಡದ ಸಿದ್ದಿ ಸಮುದಾಯದ ಯುವಕರಿಗೆ ಕ್ರೀಡಾ ಇಲಾಖೆ ತರಬೇತಿ!

ಅತ್ಯುತ್ತಮ ಕ್ರೀಡಾಪಟುವಾಗಲು ಬೆಂಗಳೂರಿನಲ್ಲಿ ಉತ್ತರ ಕನ್ನಡದ ಸಿದ್ದಿ ಸಮುದಾಯದ 52 ಯುವಕರಿಗೆ ತರಬೇತಿ ನೀಡಲಾಗುತ್ತಿದೆ. ಮಂಗಳವಾರದಿಂದ ಆರಂಭವಾಗಲಿರುವ ತರಬೇತಿಯ ಹೊರತಾಗಿ ಅವರ ನಿತ್ಯದ ಶಿಕ್ಷಣವನ್ನು ಕ್ರೀಡಾ ಇಲಾಖೆ ನೋಡಿಕೊಳ್ಳಲಿದೆ.

Youngsters_of_Siddi_community_at_a_training_session1

ಬೆಂಗಳೂರು: ಅತ್ಯುತ್ತಮ ಕ್ರೀಡಾಪಟುವಾಗಲು ಬೆಂಗಳೂರಿನಲ್ಲಿ ಉತ್ತರ ಕನ್ನಡದ ಸಿದ್ದಿ ಸಮುದಾಯದ 52 ಯುವಕರಿಗೆ ತರಬೇತಿ ನೀಡಲಾಗುತ್ತಿದೆ. ಮಂಗಳವಾರದಿಂದ ಆರಂಭವಾಗಲಿರುವ ತರಬೇತಿಯ ಹೊರತಾಗಿ ಅವರ ನಿತ್ಯದ ಶಿಕ್ಷಣವನ್ನು ಕ್ರೀಡಾ ಇಲಾಖೆ ನೋಡಿಕೊಳ್ಳಲಿದೆ.

ಈ ಯುವಕರಲ್ಲಿ ದಸ್ತ್ ಗೀರ್ ಸಿದ್ದಿ ಕೂಡಾ ಒಬ್ಬರು.  ಕಾರವಾರ ಸಮೀಪದ  ಗುಂಜಾವತಿ ಗ್ರಾಮದ ದಸ್ತಗೀರ್ ಅಬ್ದುಲ್ ಸಿದ್ದಿ ಹತ್ತನೇ ತರಗತಿ ಓದುತ್ತಿದ್ದಾಗಲೇ ಸೇನೆಗೆ ಸೇರುವ ಕನಸು ಕಂಡಿದ್ದರು.  ಪಡೆಗಳಿಗೆ ಆಯ್ಕೆಯಾಗಲು ವೇಗವಾಗಿ ಓಡಬೇಕು ಎಂದು ಯಾರೋ ಆತನಿಗೆ ಹೇಳಿದ್ರು. ಆದರೆ, ಅವರ ಹಳ್ಳಿಯ ಬಳಿ ಸರಿಯಾದ ಅಥ್ಲೆಟಿಕ್ ಟ್ರ್ಯಾಕ್ ಅಥವಾ ಮೈದಾನವಿಲ್ಲದ ಕಾರಣ, ತಮ್ಮ ಮನೆಯ ಸಮೀಪವಿರುವ ಕೆಲವು ಪೊದೆಗಳನ್ನು ತೆರವುಗೊಳಿಸಿ ಅಭ್ಯಾಸವನ್ನು ಪ್ರಾರಂಭಿಸಿದರು. ಕಾರವಾರದಲ್ಲಿ ಪ್ರಥಮ ಪಿಯು ಸೇರಿದಾಗಲೇ ಆತ ಅಥ್ಲೆಟಿಕ್ ಮೈದಾನಗಳನ್ನು ನೋಡಿದ್ದು, ಅಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದರು.

ಸಿದ್ದಿ ಸಮುದಾಯವ ಮೂಲತಃ ಆಗ್ನೇಯ ಆಫ್ರಿಕಾದವರು ಮತ್ತು ಶತಮಾನಗಳಿಂದ ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ನೆಲೆಸಿದ್ದಾರೆ. ಅನೇಕ ಯುವಕರು ಮೊದಲ ತಲೆಮಾರಿನವರಾಗಿ ಶಾಲೆಗೆ ಹೋಗುತ್ತಿದ್ದರೆ, ಅವರ ಪೋಷಕರು ದಿನಗೂಲಿಗಳಾಗಿ ಕೆಲಸ ಮಾಡುವುದನ್ನು ಮುಂದುವರೆಸಿದ್ದಾರೆ. ಕಾಲೇಜ್ ಅವಧಿ ಮುಗಿದ ನಂತರ ತರಬೇತುದಾರ ಪ್ರಕಾಶ್ ರೇವಣಕರ್ ಕೆಲ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ, ಕಾಲೇಜ್ ಮೈದಾನದಲ್ಲಿಯೇ ಓಡಿಸುತ್ತಿದ್ದರು. 

ಸುಮಾರು ಒಂದು ತಿಂಗಳ ಕಾಲ ಅಲ್ಲಿಯೇ ನಿಂತುಕೊಂಡು ತರಬೇತಿ ನೋಡುತ್ತಿದ್ದ ನನ್ನ ನ್ನು ನೋಡಿದ ತರಬೇತುದಾರರು ಒಂದು ದಿನ ನನ್ನ ಬಳಿಗೆ ಬಂದು ಕೇಳಿದಾಗ,  ನನಗೆ ಓಟದಲ್ಲಿ ಆಸಕ್ತಿ ಇರುವುದನ್ನು ತಿಳಿದು ತಂಡಕ್ಕೆ ಸೇರಿಸಿಕೊಂಡಿದ್ದಾಗಿ ದಸ್ತಗೀರ್ ಹೇಳಿದರು.

Image

ಪ್ರತಿಭಾವಂತ ಸಿದ್ದಿ ಹುಡುಗ ಹುಡುಗಿಯರನ್ನು ಗುರುತಿಸಲು ಇಲಾಖೆ ಆಯೋಜಿಸಿದ್ದ ಶಿಬಿರಕ್ಕೆ ಬಂದಿಳಿದಾಗ ದಸ್ತಗೀರ್ , ಕ್ರೀಡಾ ವೇದಿಕೆಗಾಗಿ ಹುಡುಕುತ್ತಿದ್ದರು, ಇಲಾಖೆಯು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ 18 ವರ್ಷದೊಳಗಿನ 500 ಸಿದ್ದಿ ಸಮುದಾಯದ ಮಕ್ಕಳಿಗೆ 18 ವಿವಿಧ ಪರೀಕ್ಷೆಗಳನ್ನು ನಡೆಸಿತು. ಈ ಪೈಕಿ 100 ಮಂದಿ ಆಯ್ಕೆಯಾಗಿ, ನವೆಂಬರ್ ನಲ್ಲಿ ಒಂದು ತಿಂಗಳ ಕಾಲ ತರಬೇತಿ ನೀಡಲಾಗಿದೆ. ಇವರಲ್ಲಿ ಆಯ್ದ 52 ಮಂದಿಯನ್ನು ಬಾಕಿಂಗ್ಸ್, ಈಜು, ಅಥ್ಲೆಟಿಕ್ಸ್ ಮತ್ತಿತರ ಕ್ರೀಡೆಗಳಿಗೆ ತರಬೇತಿ ನೀಡಲು ಆಯ್ಕೆ ಮಾಡಲಾಗಿದೆ.

ಹೀಗೆ ಆಯ್ಕೆಗೊಂಡವರು ಬೆಂಗಳೂರಿನ ಚಿಕ್ಕಜಾಲ ಬಳಿಕ ಜಯಪ್ರಕಾಶ್ ನಾರಾಯಣ್ ರಾಷ್ಟ್ರೀಯ ಯುವ ತರಬೇತಿ ಕೇಂದ್ರದಲ್ಲಿ ತಂಗಿದ್ದಾರೆ. ಅವರ ಸದೃಢ ದೇಹಕ್ಕಾಗಿ ವಿಶೇಷ ಡಯಟ್ ವೊಂದನ್ನು ಕ್ರೀಡಾ ಇಲಾಖೆ ವ್ಯವಸ್ಥೆ ಮಾಡಿದೆ. ಅವರಿಗೆ ಬೆಳಗ್ಗೆ ಉಪಹಾರದೊಂದಿಗೆ ಎರಡು ಮೊಟ್ಟೆ ಮತ್ತು ಎರಡು ಬಾಳೆಹಣ್ಣು ನೀಡಲಾಗುತ್ತದೆ. ಮಧ್ಯಾಹ್ನದ ಊಟಕ್ಕೆ ಚಪಾತಿ, ಅನ್ನ, ಸಬ್ಜಿ ಮತ್ತು ಹಣ್ಣುಗಳನ್ನು ಕೊಡಲಾಗುತ್ತಿದೆ. ರಾತ್ರಿ ಊಟಕ್ಕೆ ಚಿಕ್ಕನ್ ಮತ್ತಿತರ ಪೌಷ್ಠಿಕಾಂಶ ಯುಕ್ತ ಆಹಾರ ಇರುತ್ತದೆ.

ನಾನು ನಮ್ಮ ಹಳ್ಳಿಯಲ್ಲಿದ್ದಾಗ ಇಂತಹ ಮಾಂಸಾಹಾರಿ ಊಟವನ್ನೇ ಮಾಡಿರಲಿಲ್ಲ , ಬೆಂಗಳೂರಿನಲ್ಲಿ ಇಂತಹ ಸ್ಥಳ ಸಿಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಇಲ್ಲಿ ನಮ್ಮ ಕನಸು ನನಸು ಮಾಡಿಕೊಳ್ಳಬಹುದು ಎಂದು ಬಾಕ್ಸಿಂಗ್ ಕಡೆಗೆ ಗಮನ ಹರಿಸಿರುವ   ಉಗ್ಗಿನಕೆರೆ ಗ್ರಾಮದ ಜೋಸೆಫ್ ಬಸ್ತ್ಯ ಸಿದ್ದಿ ಹೇಳಿದರು. ನಾನು ಈಜುವುದನ್ನು ಇಷ್ಟಪಡುತ್ತೇನೆ ಮತ್ತು 30 ಸೆಕೆಂಡುಗಳ ಕಾಲ ನನ್ನ ಉಸಿರನ್ನು ಹಿಡಿದಿಟ್ಟುಕೊಳ್ಳಬಲ್ಲೆ ಎಂದು ದಿನೇಶ್ ಶಂಕರ್ ಸಿದ್ದಿ ತಿಳಿಸಿದರು. 

ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ಸಿದ್ದಿ ಸಮುದಾಯ ನಿರ್ಲಕ್ಷ್ಯಕ್ಕೊಳಗಾಗಿದ್ದು, ಹಿಂದುಳಿದ ಗ್ರಾಮೀಣ ಪ್ರದೇಶದಲ್ಲಿಯೇ ವಾಸಿಸುತ್ತಿದೆ. ಅವರಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆಲ್ಲುವ ಸಾಮರ್ಥ್ಯವಿದೆ ಎಂದು ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *