ನಮ್ಮಮ್ಮ ಸೂಪರ್ಸ್ಟಾರ್‌ ಸಮನ್ವಿ ಇನ್ನಿಲ್ಲ..

ರಸ್ತೆ ಅಪಘಾತದಲ್ಲಿ ಬಾಲಕಿ ಸಮನ್ವಿ ಸಾವು: ರಿಯಾಲಿಟಿ ಶೋ ತೀರ್ಪುಗಾರರಾದ ತಾರಾ ಅನುರಾಧ, ಸೃಜನ್ ಲೋಕೇಶ್ ಕಂಬನಿ

ನಗರದ ಕೋಣನಕುಂಟೆ ಬಳಿ ಟಿಪ್ಪರ್ ಡಿಕ್ಕಿ ಹೊಡೆದು ಮೃತಪಟ್ಟ ಕನ್ನಡ ಮನರಂಜನಾ ವಾಹಿನಿಯ ರಿಯಾಲಿಟಿ ಶೋದ ಸ್ಪರ್ಧಿಯಾಗಿದ್ದ ಆರು ವರ್ಷದ ಬಾಲಕಿ ಸಮನ್ವಿಯ ಸಾವು ಎಲ್ಲರನ್ನೂ ಶೋಕಸಾಗರದಲ್ಲಿ ಮುಳುಗಿಸಿದೆ. 

Samanvi with Amrutha Naidu

ಬೆಂಗಳೂರು: ನಗರದ ಕೋಣನಕುಂಟೆ ಬಳಿ ಟಿಪ್ಪರ್ ಡಿಕ್ಕಿ ಹೊಡೆದು ಮೃತಪಟ್ಟ ಕನ್ನಡ ಮನರಂಜನಾ ವಾಹಿನಿಯ ರಿಯಾಲಿಟಿ ಶೋದ ಸ್ಪರ್ಧಿಯಾಗಿದ್ದ ಆರು ವರ್ಷದ ಬಾಲಕಿ ಸಮನ್ವಿಯ ಸಾವು ಎಲ್ಲರನ್ನೂ ಶೋಕಸಾಗರದಲ್ಲಿ ಮುಳುಗಿಸಿದೆ. 

ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನ ಸ್ಪರ್ಧಿಯಾಗಿದ್ದ ಹರಿಕಥಾ ಕಲಾವಿದ ಗುರುರಾಜ್ ನಾಯ್ಡು ಮಗಳು ಅಮೃತಾ ನಾಯ್ಡು ಮತ್ತು ಮೊಮ್ಮಗಳು ಸಮನ್ವಿ ನಿನ್ನೆ ಸಾಯಂಕಾಲ ಶಾಪಿಂಗ್ ಮುಗಿಸಿ ಸ್ಕೂಟರ್ ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಸಮನ್ವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ತಾಯಿ ಅಮೃತಾ ನಾಯ್ಡು ಸಣ್ಣಪುಟ್ಟ ಗಾಯಗೊಂಡು ಚಿಕಿತ್ಸೆ ಪಡೆದು ಇಂದು ಮನೆಗೆ ವಾಪಸ್ಸಾಗಿದ್ದಾರೆ.

ಘಟನೆಯ ಸುದ್ದಿ ಕೇಳಿದ ಹಿರಿಯ ನಟಿ ರಿಯಾಲಿಟಿ ಶೋ ತೀರ್ಪುಗಾರ್ತಿ ತಾರಾ ಅನುರಾಧ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.ವಿಧಿ ಕ್ರೂರ ಎಂದು ಒಂದೊಂದು ಅನಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ಬರೀ ಸಾವು-ನೋವು, ಕಷ್ಟಗಳನ್ನೇ ಅನುಭವಿಸುತ್ತಿದ್ದೇವೆ, ಕೇಳುತ್ತಿದ್ದೇವೆ. ನನಗೆ ನಂಬಲೂ ಆಗುತ್ತಿಲ್ಲ, ಅಮೃತಾನನ್ನು ನೋಡಿ ಸಮಾಧಾನ ಹೇಳಬೇಕಿದೆ. ಗುರುರಾಜ್ ನಾಯ್ಡು ಅವರ ಮಗಳು ಅಮೃತಾ ಅವರು ನಮ್ಮ ರಿಯಾಲಿಟಿ ಶೋಗೆ ಬಂದಾಗ ನಿಜಕ್ಕೂ ಖುಷಿಯಾಗಿತ್ತು. ಹಿರಿಯ ಹರಿಕಥಾ ವಿದ್ವಾಂಸರ ಮಗಳು ಹರಿಕಥೆ ಮಾಡುವುದನ್ನು ನಾನು ಸಾಕಷ್ಟು ಬಾರಿ ನೋಡಿದ್ದೆ. ಇಂದು ಅವರಿಗೆ ಹಾಗಾಗಿದ್ದು ನಿಜಕ್ಕೂ ನೋವಾಗುತ್ತಿದೆ, ಯಾವ ತಂದೆ-ತಾಯಿಗೂ ಈ ಪರಿಸ್ಥಿತಿ ಬರಬಾರದು ಎಂದು ಪ್ರತಿಕ್ರಿಯಿಸಿದ್ದಾರೆ.

‘ದೇವರು ನಿಜವಾಗಿಯೂ ದೇವರಾ? ಅಥವಾ ದೇವರು ಇದ್ದಾನಾ? ಇಲ್ಲ, ದೇವರನ್ನ ನಂಬಲೇಬೇಕಾ? ಈ ಪ್ರಶ್ನೆಗಳು ಆಗಾಗ ಮೂಡಿ ಬರುತ್ತಿವೆ. ಇವತ್ತು ಈ ಘಟನೆಯ ನಂತರ ನಿಜವಾಗಲೂ ದೇವರು ಇದ್ದಾನೋ ಇಲ್ಲವೋ ಅನ್ನೋ ಪ್ರಶ್ನೆ ಮನಸ್ಸಿಗೆ ತುಂಬಾ ಗಾಢವಾಗಿ ಕಾಡುತ್ತಿದೆ. ಅಪ್ಪು ಅವರ ನಿಧನ ಬಳಿಕ ದೇವರು ಇದ್ದಾರೆಯೇ ಇಲ್ಲವೇ ಎಂದು ಸಂಶಯ ಬಂದಿತ್ತು. ಇಂದು ಮತ್ತೆ ಅದೇ ಭಾವ ಕಾಡುತ್ತಿದೆ. ಪುಟ್ಟ ಕಂದ ಸಮನ್ವಿ ಮಿಸ್ ಯೂ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಸೃಜನ್​ ಲೋಕೇಶ್​ ಪೋಸ್ಟ್​ ಮಾಡಿದ್ದಾರೆ.

ನನಗೆ ಮೊದಲೇ ಹೆಣ್ಣು ಮಗುವಿಲ್ಲ ಎಂಬ ಕೊರಗು ಇದೆ, ಇಂತಹ ಮುದ್ದು ಮುದ್ದಾದ ಪುಟ್ಟ ಹೆಣ್ಣು ಮಕ್ಕಳನ್ನು ನೋಡಿದಾಗ ನಿಜಕ್ಕೂ ಖುಷಿಯಾಗುತ್ತಿತ್ತು, ಜಗತ್ತನ್ನು ಇನ್ನೂ ನೋಡದ ಈ ಮಗು ಇಂದು ಇಲ್ಲ ಎಂದು ಹೇಳಲು ನಿಜಕ್ಕೂ ನೋವಾಗುತ್ತಿದೆ ಎಂದು ಸೃಜನ್ ಲೋಕೇಶ್ ಪ್ರತಿಕ್ರಿಯಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *