ಉ.ಪ್ರ.- ಬಿ.ಜೆ.ಪಿ.ಯಿಂದ ಸಮಾಜವಾದಿಗೆ ವಲಸೆ,ಬಿ.ಜೆ.ಪಿ. ಹಿಂದುಳಿದವರು,ದಲಿತರ ವಿರೋಧಿ ಎಂದ ಪರಿತ್ಯಕ್ತರು

ಉತ್ತರ ಪ್ರದೇಶ: ಸ್ವಾಮಿ ಪ್ರಸಾದ್ ಮೌರ್ಯ ಸೇರಿದಂತೆ ಹಲವು ಬಿಜೆಪಿ ಬಂಡಾಯ ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ!

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪಕ್ಷಾಂತರ ಪರ್ವ ಕೂಡ ಜೋರಾಗಿದ್ದು, ಈ ಹಿಂದೆ ಬಿಜೆಪಿ ಪಕ್ಷವನ್ನು ತ್ಯಜಿಸಿದ್ದ ಸಚಿವರು ಇದೀಗ ತಮ್ಮ ಅನುಯಾಯಿಗಳೊಂದಿಗೆ ಅಧಿಕೃತವಾಗಿ ಇಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Swami Prasad Maurya joins Samajwadi Party

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪಕ್ಷಾಂತರ ಪರ್ವ ಕೂಡ ಜೋರಾಗಿದ್ದು, ಈ ಹಿಂದೆ ಬಿಜೆಪಿ ಪಕ್ಷವನ್ನು ತ್ಯಜಿಸಿದ್ದ ಸಚಿವರು ಇದೀಗ ತಮ್ಮ ಅನುಯಾಯಿಗಳೊಂದಿಗೆ ಅಧಿಕೃತವಾಗಿ ಇಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಮಾಜಿ ಸಚಿವ ಹಾಗೂ ರಾಜ್ಯದ ಪ್ರಮುಖ ಓಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹಾಗೂ ಮತ್ತೊಬ್ಬ ಬಂಡಾಯ ಸಚಿವ ಧರಂ ಸಿಂಗ್ ಸೈನಿ ಅವರೊಂದಿಗೆ ಸಮಾಜವಾದಿ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು. ಅಲ್ಲದೆ ಐವರು ಬಿಜೆಪಿ ಶಾಸಕರು ಮತ್ತು ಅಪ್ನಾ ದಳ (ಸೋನೆಲಾಲ್) ಶಾಸಕ ಅಮರ್ ಸಿಂಗ್ ಚೌಧರಿ ಕೂಡ ಅಖಿಲೇಶ್ ಯಾದವ್ ಸಮ್ಮುಖದಲ್ಲಿ ಎಸ್‌ಪಿಗೆ ಸೇರ್ಪಡೆಗೊಂಡರು.

ಭಗವತಿ ಸಾಗರ್ (ಕಾನ್ಪುರದ ಬಿಲ್ಹೌರ್), ರೋಷನ್‌ಲಾಲ್ ವರ್ಮಾ (ಶಹಜಹಾನ್‌ಪುರದ ತಿಲ್ಹಾರ್), ವಿನಯ್ ಶಾಕ್ಯಾ (ಔರೈಯಾದ ಬಿಧುನಾ), ಬ್ರಿಜೇಶ್ ಪ್ರಜಾಪತಿ (ಬಹ್ರೈಚ್‌ನಲ್ಲಿ ತಿಂಡವಾರಿ) ಮತ್ತು ಮುಖೇಶ್ ವರ್ಮಾ (ಫಿರೋಜಾಬಾದ್‌ನ ಶಿಕೋಹಾಬಾದ್) ಎಸ್‌ಪಿಗೆ ಸೇರ್ಪಡೆಯಾದ ಐವರು ಬಿಜೆಪಿ ಶಾಸಕರಾಗಿದ್ದಾರೆ.

ಚೌಧರಿ ಶೋಹರತ್‌ಗಢದ ಶಾಸಕರಾಗಿದ್ದು, ಇಲ್ಲಿನ ಕಚೇರಿಯಲ್ಲಿ ಅವರಿಗೆ ಎಸ್‌ಪಿ ಸದಸ್ಯತ್ವ ನೀಡಲಾಯಿತು. ರಾಜ್ಯ ಕಾರ್ಮಿಕ ಸಚಿವರಾಗಿದ್ದ ಮೌರ್ಯ ಅವರ ರಾಜೀನಾಮೆ ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿಗೆ ಭಾರಿ ಆಘಾತವನ್ನುಂಟು ಮಾಡಿದೆ. 

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳ ಚುನಾವಣೆ ನಡೆಯಲಿದೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *