ಬಿ.ಜೆ.ಪಿ. ಧೂಳೀಪಟ.. ಹೀಗೆಂದ ಸ್ವಾಮೀಜಿ ಯಾರು ಗೊತ್ತಾ?

2023ರ ಚುನಾವಣೆಯಲ್ಲಿ ದೇವಿ ಶಾಪದಿಂದ ಬಿಜೆಪಿ ಪಕ್ಷ ಧೂಳೀಪಟ ಆಗಲಿದೆ : ಕಲ್ಲಿನಾಥ ಸ್ವಾಮೀಜಿ ಭವಿಷ್ಯ

ಧರ್ಮದ ಆಧಾರದ ಮೇಲೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಎಲ್ಲರೂ ಅವರನ್ನ ನಂಬಿ ವೋಟ್ ಹಾಕಿದ್ದಾರೆ. ಆದರೆ, ಹಿಂದೂಗಳ ದೇವಸ್ಥಾನಗಳನ್ನ ಕೆಡವಿದ್ದು ನಮಗೆ ನೋವಾಗಿದೆ. ನೂರಕ್ಕೆ ನೂರಾವೊಂದು ಪರ್ಸೆಂಟ್ ಹಿಂದೂಗಳ ಶಾಪ ಅವರಿಗೆ ತಟ್ಟುತ್ತೆ ಎಂದರು..

ಬಾಗಲಕೋಟೆ : 2023ರಲ್ಲಿ ದೇವಿ ಶಾಪದಿಂದ ಬಿಜೆಪಿ ಧೂಳೀಪಟ ಆಗಲಿದೆ. ದೇವರ ಹಾಗೂ ರೈತರ ಶಾಪದಿಂದ ಬಿಜೆಪಿ ಹೋಗುವ ಕಾಲ ಬರಬಹುದು ಎಂದು ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಅವರು ಬಾದಾಮಿ ಶ್ರೀ ಬನಶಂಕರಿ ಜಾತ್ರೆ ನಂತರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಬಾದಾಮಿ ಶ್ರೀ ಬನಶಂಕರಿ ದೇವಿ ಜಾತ್ರೆ ಶತಮಾನದ ಇತಿಹಾಸ ಹೊಂದಿದೆ. ಭಾರತ ದೇಶ ನಂಬಿಕೆ ಮೇಲೆ, ಧಾರ್ಮಿಕ ಭಾವನೆ ಮೇಲೆ ಪರಂಪರೆಯನ್ನ ಹೊಂದಿರುವ ರಾಷ್ಟ್ರವಾಗಿದೆ.

ಎರಡು ವರ್ಷಗಳಿಂದ ಕೋವಿಡ್ ನೆಪ ಹೇಳಿ, ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರ ಧಾರ್ಮಿಕ ಕಾರ್ಯಕ್ರಮಗಳು ಮತ್ತು ರೈತರ ಮೇಲೆ ಶೋಚನೀಯ ಪರಿಸ್ಥಿತಿ ನಡೆಸಿದೆ ಎಂದು ಆರೋಪಿಸಿದರು.

ಕೊಲ್ಹಾರದ ಶ್ರೀ ದಿಗಂಬರೇಶ್ವರ ಮಠದ ಕಲ್ಲಿನಾಥ ಸ್ವಾಮೀಜಿ ಮಾತನಾಡಿರುವುದು..

ಕಾನೂನು ಕಟ್ಟಳೆ ಮಾಡಿ ರೈತರನ್ನ ಮತ್ತು ಧಾರ್ಮಿಕ ಕಾರ್ಯಕ್ರಮವನ್ನ ತುಳಿಯುತ್ತಿದ್ದಾರೆ. ಧಾರ್ಮಿಕ ಆಚರಣೆ ಮಾಡಿ ದೇವಿ ಹತ್ರ ಕೇಳಿದ್ರೆ, ಸಂಪೂರ್ಣ ಕೋವಿಡ್ ನಿಯಂತ್ರಣ ಮಾಡುವ ಶಕ್ತಿ ದೇವಿಯಲ್ಲಿದೆ. ಬನಶಂಕರಿ ಜಾತ್ರೆಯಲ್ಲಿ ಭಕ್ತರನ್ನ ಹೊಡೆಯುವುದನ್ನು ನೋಡಿದರೆ, ದೇವಿ ಶಾಪದಿಂದ 2023ರ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ ಆಗಲಿದೆ.

ಧರ್ಮದ ಆಧಾರದ ಮೇಲೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಎಲ್ಲರೂ ಅವರನ್ನ ನಂಬಿ ವೋಟ್ ಹಾಕಿದ್ದಾರೆ. ಆದರೆ, ಹಿಂದೂಗಳ ದೇವಸ್ಥಾನಗಳನ್ನ ಕೆಡವಿದ್ದು ನಮಗೆ ನೋವಾಗಿದೆ. ನೂರಕ್ಕೆ ನೂರಾವೊಂದು ಪರ್ಸೆಂಟ್ ಹಿಂದೂಗಳ ಶಾಪ ಅವರಿಗೆ ತಟ್ಟುತ್ತೆ ಎಂದರು.

ದೇವರನ್ನ ವಿರೋಧ ಮಾಡಿದವರು ಇವತ್ತಿನವರೆಗೂ ಬೆಳೆದಿಲ್ಲ. ಭಾರತ ದೇಶ ಧರ್ಮದ ತಳಹದಿಯ ಮೇಲೆ ನಿಂತಿದೆ. ಕಳೆದ ಬಾರಿ ಕೋವಿಡ್​ನಲ್ಲಿ ಕೆರಕಲಮಟ್ಟಿ ಮತ್ತು ಬೆಳಗಾವಿಗೆ ಅಮಿತ್ ಶಾ ಬಂದು ಹೋಗಿದ್ದರು. ನಿಮ್ಮ ರಾಷ್ಟ್ರೀಯ ಅಧ್ಯಕ್ಷರು ಕೇಂದ್ರ ಗೃಹ ಮಂತ್ರಿಗಳು ಬಂದಾಗ ಲಕ್ಷ ಗಟ್ಟಲೆ ಜನ ಬಂದ್ರೆ ಕೊರೊನಾ ಬರೋದಿಲ್ಲವೇ ಎಂದು ಅವರು ಪ್ರಶ್ನೆ ಮಾಡಿದರು.

ಆದರೆ, ಬನಶಂಕರಿ ಜಾತ್ರೆಯಲ್ಲಿ ಜನ ಬಂದ್ರೆ ಕೊರೊನಾ ಬರುತ್ತೆ ಎಂದು ಭಕ್ತರ ಮೇಲೆ ಶೋಷಣೆ ಮಾಡೋದು ನೋವಾಗಿದೆ. ಈ ಬಾರಿಯೂ ಲಾಕ್​ಡೌನ್​​ ಮಾಡಿದ್ರೆ ಅದರ ಪರಿಸ್ಥಿತಿ ಸಿಎಂ ಬೊಮ್ಮಾಯಿಯವರಿಗೆ ತಟ್ಟುತ್ತದೆ ಎಂದರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *