ಕಾರವಾರ ಬಂದರಿನಲ್ಲಿದ್ದ ಕಬ್ಬಿಣದ ಅದಿರು ಹರಾಜಿಗೆ ನ್ಯಾಯಾಲಯ ಅನುಮತಿ

ಕಾರವಾರದ ಬೈತಕೋಲ್ ಬಂದರಿನಲ್ಲಿ ದಾಸ್ತಾನು ಮಾಡಿರುವ ಅಕ್ರಮ ಕಬ್ಬಿಣದ ಅದಿರಿನ್ನು ಲೈವ್ ಬಿಡ್ ನಡೆಸುವಂತೆ ನ್ಯಾಯಾಲಯವು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

File photo

ಕಾರವಾರ: ಕಾರವಾರದ ಬೈತಕೋಲ್ ಬಂದರಿನಲ್ಲಿ ದಾಸ್ತಾನು ಮಾಡಿರುವ ಅಕ್ರಮ ಕಬ್ಬಿಣದ ಅದಿರಿನ್ನು ಲೈವ್ ಬಿಡ್ ನಡೆಸುವಂತೆ ನ್ಯಾಯಾಲಯವು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. 

ಕಾರವಾರ ಜೆಎಂಎಫ್‌ಸಿ ನ್ಯಾಯಾಲಯವು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಹರಾಜಿಗೆ ಸಮಯ ನಿಗದಿಪಡಿಸಿದೆ. ಈ ಮೂಲಕ ದಶಕಗಳಿಂದ ಗಾಳಿ ಮಳೆಗೆ ಕೊಚ್ಚಿ ಸಮುದ್ರಪಾಲಾಗುತ್ತಿದ್ದ ಅದಿರಿಗೆ ಕೊನೆಗೂ ಮುಕ್ತಿ ಸಿಕ್ಕಂತಾಗಿದೆ.

ಅಕ್ರಮ ಗಣಿಗಾರಿಕೆಯಲ್ಲಿನ ನೂರಾರು ಮೆಟ್ರಿಕ್ ಟನ್ ಅದಿರನ್ನ ಕರಾವಳಿಯ ಕಾರವಾರ ಮತ್ತು ಬೇಲೇಕೇರಿ ಬಂದರಿನ ಮೂಲಕ ವಿದೇಶಕ್ಕೆ ಸಾಗಿಸುತ್ತಿದ್ದಾಗ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದರು.

ಅಂದಿನಿಂದ ಕಬ್ಬಿಣದ ಅದಿರು ಕಾರವಾರ ಹಾಗೂ ಬೇಲೇಕೇರಿ ಬಂದರು ಪ್ರದೇಶದಲ್ಲೇ ಉಳಿದುಕೊಂಡಿದ್ದು ಗಾಳಿ, ಮಳೆಗೆ ಇಲ್ಲಿನ ಸಮುದ್ರ ಸೇರುವಂತಾಗಿತ್ತು. ಬರೋಬ್ಬರಿ 12 ವರ್ಷಗಳ ಬಳಿಕ ಜೆಎಂಎಫ್‌ಸಿ ನ್ಯಾಯಾಲಯ ಕಾರವಾರ ಬಂದರಿನಲ್ಲಿ ದಾಸ್ತಾನಿರುವ  ಅದಿರನ್ನ ಹರಾಜು ಹಾಕಲು ಕಳೆದ ವರ್ಷ 2021ರಲ್ಲಿ ಆದೇಶ ನೀಡಿತ್ತು. ಅದರಂತೆ ಸೂಕ್ತ ಪರಿಶೀಲನೆ ನಡೆಸಿ ಅಗತ್ಯ ಸಿದ್ಧತೆಗಳನ್ನ ಮಾಡಿಕೊಂಡ ಜಿಲ್ಲಾಡಳಿತ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಇದೀಗ ಅದಿರಿನ ಹರಾಜಿಗೆ ಲೈವ್ ಟೆಂಡರನ್ನು ಕರೆದಿದೆ.

ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಬಂದರು ಪ್ರದೇಶದಲ್ಲಿರುವ ಕಬ್ಬಿಣ ಅದಿರನ್ನು ಸಾಗಾಟ ಮಾಡುವಾಗ ಸಿಸಿಕ್ಯಾಮೆರಾ ಹಾಗೂ ಸಾಗಾಟ ಲಾರಿಗಳಿಗೆ ಜಿಪಿಎಸ್ ಅಳವಡಿಕೆಯಂತಹ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇನ್ನು ಅಕ್ರಮ ಅದಿರು ಸಾಗಾಟದ ಆರೋಪದ ಮೇಲೆ 2010ರ ಮಾರ್ಚ್‌ನಲ್ಲಿ ದಾಳಿ ನಡೆಸಿದ್ದ ಅರಣ್ಯ ಅಧಿಕಾರಿಗಳು, ಕಾರವಾರದ ಬೈತಖೋಲ್ ಬಂದರಿನಲ್ಲಿ 50 ಸಾವಿರಕ್ಕೂ ಅಧಿಕ ಮೆಟ್ರಿಕ್‌ ಟನ್ ಹಾಗೂ ಬೇಲೇಕೇರಿ ಬಂದರಿನಲ್ಲಿ 8 ಲಕ್ಷಕ್ಕೂ ಅಧಿಕ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನ ಜಪ್ತಿಪಡಿಸಿಕೊಂಡಿದ್ದರು. 

ಕಾರವಾರ ಬಂದರಿನಲ್ಲಿ ಸಂಗ್ರಹಿಸಿಟ್ಟಿದ್ದ 50 ಸಾವಿರಕ್ಕೂ ಅಧಿಕ ಮೆಟ್ರಿಕ್ ಟನ್ ಅದಿರಿನಲ್ಲಿ ಅರ್ಧದಷ್ಟು ಕಳುವಾಗಿದ್ದಲ್ಲದೇ, ಬಹುಪಾಲು ಮಳೆಯಲ್ಲಿ ಕೊಚ್ಚಿಹೋಗಿದೆ. ಹರಾಜಿಗಾಗಿ ಅಧಿಕಾರಿಗಳು ನಡೆಸಿದ ಮೌಲ್ಯಮಾಪನದಲ್ಲಿ ಕೇವಲ 30 ಸಾವಿರ ಮೆಟ್ರಿಕ್ ಟನ್ ಅದಿರು ಲೆಕ್ಕಕ್ಕೆ ಸಿಕ್ಕಿದ್ದು, ನ್ಯಾಯಾಲಯದಿಂದ ಅನುಮತಿ ಪಡೆದು ಈಗ ಹರಾಜು ಹಾಕಲಾಗುತ್ತಿದೆ. 

ಸದ್ಯ ಕಾರವಾರ ಬಂದರಿನಲ್ಲಿದ್ದ ಅದಿರಿನ ಹರಾಜಿಗೆ ಮಾತ್ರ ನ್ಯಾಯಾಲಯ ಅನುಮತಿ ನೀಡಿದ್ದು, ಬೇಲೇಕೇರಿ ಬಂದರಿನಲ್ಲಿನ ಅದಿರಿನ ಹರಾಜಿಗೆ ಅನುಮತಿ ನೀಡಿಲ್ಲ. ಈಗಾಗಲೇ ಬೇಲೇಕೇರಿ ಬಂದರಿನಲ್ಲಿನ ಅದಿರು ಪ್ರತಿವರ್ಷ ಮಳೆಯ ನೀರಿನೊಂದಿಗೆ ಹರಿದು ಸಮುದ್ರ ಸೇರುತ್ತಿದ್ದು ಅಲ್ಲಿನ ಜಲಚರಗಳಿಗೆ ಹಾನಿಯುಂಟು ಮಾಡುತ್ತಿದೆ. ಅಲ್ಲದೇ ಇದರಿಂದ ಮೀನುಗಾರರು ಸಹ ನಷ್ಟ ಅನುಭವಿಸುವಂತಾಗಿದ್ದು, ಬೇಲೇಕೇರಿ ಬಂದರಿನಲ್ಲಿನ ಅದಿರಿನ ಸ್ಥಳಾಂತರಕ್ಕಾದರೂ ಕ್ರಮ ಕೈಗೊಳ್ಳಬೇಕು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. 

2010ರಲ್ಲಿ ಜಪ್ತಿ ಆದ 1.15 ಲಕ್ಷ ಮೆಟ್ರಿಕ್‌ ಟನ್‌ ಅದಿರನ್ನು ಕಾರವಾರ ಬಂದರಿನಲ್ಲಿ ದಾಸ್ತಾನು ಇಡಲಾಗಿತ್ತು. ಈ ಅದಿರನ್ನು ಒಂದು ತಿಂಗಳೊಳಗೆ ಹರಾಡು ಮಾಡಲಾಗುತ್ತಿದೆ. 

ಬಂದರಿನ ಮೇಲೆ ದಾಳಿ ನಡೆಸಿದ್ದ ಐಎಫ್‌ಎಸ್ ಅಧಿಕಾರಿ ಆರ್ ಗೋಕುಲ್ ಅವರು, ಕಬ್ಬಿಣದ ಅದಿರನ್ನು ವಶಪಡಿಸಿಕೊಂಡಿದ್ದರು. ಬಳಿಕ ಅಂದಿನ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರಿಗೆ ಈ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದರು. ನಂತರ ಸಂತೋಷ್ ಹೆಗ್ಡೆಯವರು ಅಕ್ರಮ ಗಣಿಗಾರಿಕೆ ಕುರಿತ ತಮ್ಮ ವರದಿಯಲ್ಲಿ ಈ ಕುರಿತು ಮಾಹಿತಿ ಸೇರಿಸಿದ್ದರು.

ಈ ಪ್ರಕರಣದ ತನಿಖೆಯು ದೇಶಾದ್ಯಂತ ಗಣಿಗಾರಿಕೆ ಮತ್ತು ಕಬ್ಬಿಣದ ಅದಿರು ಸಾಗಣೆಯನ್ನು ನಿಷೇಧಿಸುವಂತೆ ಸುಪ್ರೀಂಕೋರ್ಟ್ ಆದೇಶಕ್ಕೂ ಕಾರಣವಾಗಿತ್ತು

ತಜ್ಞರ ಪ್ರಕಾರ, 2010 ರಲ್ಲಿ ವಶಪಡಿಸಿಕೊಂಡ ಅದಿರು ಪ್ರತಿ ಮೆಟ್ರಿಕ್ ಟನ್‌ಗೆ 5,000 ರೂ.ಗಳಷ್ಟಿತ್ತು ಎಂದು ತಿಳಿಸಿದ್ದಾರೆ. ಇದೇ ಮೊತ್ತ ಈಗಲೂ ಇದ್ದಿದ್ದರೆ ಒಟ್ಟು ವಶಪಡಿಸಿಕೊಂಡಿರುವ ಅದಿರಿನ ಮೌಲ್ಯ ರೂ.16 ಕೋಟಿ ಆಗಿರುತ್ತಿತ್ತು. ಆದರೆ, ಕಬ್ಬಿಣದ ಅದಿರಿನ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇದರ ಮೌಲ್ಯ ರೂ.4.8 ಕೋಟಿ ಆಗಿದೆ. 

ಬೇಲೆಕೇರಿಯಲ್ಲಿರುವ ಕಬ್ಬಿಣದ ಅದಿರಿನ ಮೌಲ್ಯ 120 ಕೋಟಿ ರೂಪಾಯಿಗಳಾಗಿದ್ದು, ಹಳೆಯ ಬೆಲೆಯೇ ಅನ್ವಯವಾಗುತ್ತಿದ್ದರೆ ಇದರ ಮೌಲ್ಯ 400 ಕೋಟಿ ರೂಪಾಯಿಗಳಾಗಿರುತ್ತಿತ್ತು ಎಂದು ತಿಳಿದುಬಂದಿದೆ.  (ಕಪ್ರಡಾ))

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *