ಕಾರವಾರ ಬಂದರಿನಲ್ಲಿದ್ದ ಕಬ್ಬಿಣದ ಅದಿರು ಹರಾಜಿಗೆ ನ್ಯಾಯಾಲಯ ಅನುಮತಿ

ಕಾರವಾರದ ಬೈತಕೋಲ್ ಬಂದರಿನಲ್ಲಿ ದಾಸ್ತಾನು ಮಾಡಿರುವ ಅಕ್ರಮ ಕಬ್ಬಿಣದ ಅದಿರಿನ್ನು ಲೈವ್ ಬಿಡ್ ನಡೆಸುವಂತೆ ನ್ಯಾಯಾಲಯವು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

File photo

ಕಾರವಾರ: ಕಾರವಾರದ ಬೈತಕೋಲ್ ಬಂದರಿನಲ್ಲಿ ದಾಸ್ತಾನು ಮಾಡಿರುವ ಅಕ್ರಮ ಕಬ್ಬಿಣದ ಅದಿರಿನ್ನು ಲೈವ್ ಬಿಡ್ ನಡೆಸುವಂತೆ ನ್ಯಾಯಾಲಯವು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. 

ಕಾರವಾರ ಜೆಎಂಎಫ್‌ಸಿ ನ್ಯಾಯಾಲಯವು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಹರಾಜಿಗೆ ಸಮಯ ನಿಗದಿಪಡಿಸಿದೆ. ಈ ಮೂಲಕ ದಶಕಗಳಿಂದ ಗಾಳಿ ಮಳೆಗೆ ಕೊಚ್ಚಿ ಸಮುದ್ರಪಾಲಾಗುತ್ತಿದ್ದ ಅದಿರಿಗೆ ಕೊನೆಗೂ ಮುಕ್ತಿ ಸಿಕ್ಕಂತಾಗಿದೆ.

ಅಕ್ರಮ ಗಣಿಗಾರಿಕೆಯಲ್ಲಿನ ನೂರಾರು ಮೆಟ್ರಿಕ್ ಟನ್ ಅದಿರನ್ನ ಕರಾವಳಿಯ ಕಾರವಾರ ಮತ್ತು ಬೇಲೇಕೇರಿ ಬಂದರಿನ ಮೂಲಕ ವಿದೇಶಕ್ಕೆ ಸಾಗಿಸುತ್ತಿದ್ದಾಗ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದರು.

ಅಂದಿನಿಂದ ಕಬ್ಬಿಣದ ಅದಿರು ಕಾರವಾರ ಹಾಗೂ ಬೇಲೇಕೇರಿ ಬಂದರು ಪ್ರದೇಶದಲ್ಲೇ ಉಳಿದುಕೊಂಡಿದ್ದು ಗಾಳಿ, ಮಳೆಗೆ ಇಲ್ಲಿನ ಸಮುದ್ರ ಸೇರುವಂತಾಗಿತ್ತು. ಬರೋಬ್ಬರಿ 12 ವರ್ಷಗಳ ಬಳಿಕ ಜೆಎಂಎಫ್‌ಸಿ ನ್ಯಾಯಾಲಯ ಕಾರವಾರ ಬಂದರಿನಲ್ಲಿ ದಾಸ್ತಾನಿರುವ  ಅದಿರನ್ನ ಹರಾಜು ಹಾಕಲು ಕಳೆದ ವರ್ಷ 2021ರಲ್ಲಿ ಆದೇಶ ನೀಡಿತ್ತು. ಅದರಂತೆ ಸೂಕ್ತ ಪರಿಶೀಲನೆ ನಡೆಸಿ ಅಗತ್ಯ ಸಿದ್ಧತೆಗಳನ್ನ ಮಾಡಿಕೊಂಡ ಜಿಲ್ಲಾಡಳಿತ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಇದೀಗ ಅದಿರಿನ ಹರಾಜಿಗೆ ಲೈವ್ ಟೆಂಡರನ್ನು ಕರೆದಿದೆ.

ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಬಂದರು ಪ್ರದೇಶದಲ್ಲಿರುವ ಕಬ್ಬಿಣ ಅದಿರನ್ನು ಸಾಗಾಟ ಮಾಡುವಾಗ ಸಿಸಿಕ್ಯಾಮೆರಾ ಹಾಗೂ ಸಾಗಾಟ ಲಾರಿಗಳಿಗೆ ಜಿಪಿಎಸ್ ಅಳವಡಿಕೆಯಂತಹ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇನ್ನು ಅಕ್ರಮ ಅದಿರು ಸಾಗಾಟದ ಆರೋಪದ ಮೇಲೆ 2010ರ ಮಾರ್ಚ್‌ನಲ್ಲಿ ದಾಳಿ ನಡೆಸಿದ್ದ ಅರಣ್ಯ ಅಧಿಕಾರಿಗಳು, ಕಾರವಾರದ ಬೈತಖೋಲ್ ಬಂದರಿನಲ್ಲಿ 50 ಸಾವಿರಕ್ಕೂ ಅಧಿಕ ಮೆಟ್ರಿಕ್‌ ಟನ್ ಹಾಗೂ ಬೇಲೇಕೇರಿ ಬಂದರಿನಲ್ಲಿ 8 ಲಕ್ಷಕ್ಕೂ ಅಧಿಕ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನ ಜಪ್ತಿಪಡಿಸಿಕೊಂಡಿದ್ದರು. 

ಕಾರವಾರ ಬಂದರಿನಲ್ಲಿ ಸಂಗ್ರಹಿಸಿಟ್ಟಿದ್ದ 50 ಸಾವಿರಕ್ಕೂ ಅಧಿಕ ಮೆಟ್ರಿಕ್ ಟನ್ ಅದಿರಿನಲ್ಲಿ ಅರ್ಧದಷ್ಟು ಕಳುವಾಗಿದ್ದಲ್ಲದೇ, ಬಹುಪಾಲು ಮಳೆಯಲ್ಲಿ ಕೊಚ್ಚಿಹೋಗಿದೆ. ಹರಾಜಿಗಾಗಿ ಅಧಿಕಾರಿಗಳು ನಡೆಸಿದ ಮೌಲ್ಯಮಾಪನದಲ್ಲಿ ಕೇವಲ 30 ಸಾವಿರ ಮೆಟ್ರಿಕ್ ಟನ್ ಅದಿರು ಲೆಕ್ಕಕ್ಕೆ ಸಿಕ್ಕಿದ್ದು, ನ್ಯಾಯಾಲಯದಿಂದ ಅನುಮತಿ ಪಡೆದು ಈಗ ಹರಾಜು ಹಾಕಲಾಗುತ್ತಿದೆ. 

ಸದ್ಯ ಕಾರವಾರ ಬಂದರಿನಲ್ಲಿದ್ದ ಅದಿರಿನ ಹರಾಜಿಗೆ ಮಾತ್ರ ನ್ಯಾಯಾಲಯ ಅನುಮತಿ ನೀಡಿದ್ದು, ಬೇಲೇಕೇರಿ ಬಂದರಿನಲ್ಲಿನ ಅದಿರಿನ ಹರಾಜಿಗೆ ಅನುಮತಿ ನೀಡಿಲ್ಲ. ಈಗಾಗಲೇ ಬೇಲೇಕೇರಿ ಬಂದರಿನಲ್ಲಿನ ಅದಿರು ಪ್ರತಿವರ್ಷ ಮಳೆಯ ನೀರಿನೊಂದಿಗೆ ಹರಿದು ಸಮುದ್ರ ಸೇರುತ್ತಿದ್ದು ಅಲ್ಲಿನ ಜಲಚರಗಳಿಗೆ ಹಾನಿಯುಂಟು ಮಾಡುತ್ತಿದೆ. ಅಲ್ಲದೇ ಇದರಿಂದ ಮೀನುಗಾರರು ಸಹ ನಷ್ಟ ಅನುಭವಿಸುವಂತಾಗಿದ್ದು, ಬೇಲೇಕೇರಿ ಬಂದರಿನಲ್ಲಿನ ಅದಿರಿನ ಸ್ಥಳಾಂತರಕ್ಕಾದರೂ ಕ್ರಮ ಕೈಗೊಳ್ಳಬೇಕು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. 

2010ರಲ್ಲಿ ಜಪ್ತಿ ಆದ 1.15 ಲಕ್ಷ ಮೆಟ್ರಿಕ್‌ ಟನ್‌ ಅದಿರನ್ನು ಕಾರವಾರ ಬಂದರಿನಲ್ಲಿ ದಾಸ್ತಾನು ಇಡಲಾಗಿತ್ತು. ಈ ಅದಿರನ್ನು ಒಂದು ತಿಂಗಳೊಳಗೆ ಹರಾಡು ಮಾಡಲಾಗುತ್ತಿದೆ. 

ಬಂದರಿನ ಮೇಲೆ ದಾಳಿ ನಡೆಸಿದ್ದ ಐಎಫ್‌ಎಸ್ ಅಧಿಕಾರಿ ಆರ್ ಗೋಕುಲ್ ಅವರು, ಕಬ್ಬಿಣದ ಅದಿರನ್ನು ವಶಪಡಿಸಿಕೊಂಡಿದ್ದರು. ಬಳಿಕ ಅಂದಿನ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರಿಗೆ ಈ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದರು. ನಂತರ ಸಂತೋಷ್ ಹೆಗ್ಡೆಯವರು ಅಕ್ರಮ ಗಣಿಗಾರಿಕೆ ಕುರಿತ ತಮ್ಮ ವರದಿಯಲ್ಲಿ ಈ ಕುರಿತು ಮಾಹಿತಿ ಸೇರಿಸಿದ್ದರು.

ಈ ಪ್ರಕರಣದ ತನಿಖೆಯು ದೇಶಾದ್ಯಂತ ಗಣಿಗಾರಿಕೆ ಮತ್ತು ಕಬ್ಬಿಣದ ಅದಿರು ಸಾಗಣೆಯನ್ನು ನಿಷೇಧಿಸುವಂತೆ ಸುಪ್ರೀಂಕೋರ್ಟ್ ಆದೇಶಕ್ಕೂ ಕಾರಣವಾಗಿತ್ತು

ತಜ್ಞರ ಪ್ರಕಾರ, 2010 ರಲ್ಲಿ ವಶಪಡಿಸಿಕೊಂಡ ಅದಿರು ಪ್ರತಿ ಮೆಟ್ರಿಕ್ ಟನ್‌ಗೆ 5,000 ರೂ.ಗಳಷ್ಟಿತ್ತು ಎಂದು ತಿಳಿಸಿದ್ದಾರೆ. ಇದೇ ಮೊತ್ತ ಈಗಲೂ ಇದ್ದಿದ್ದರೆ ಒಟ್ಟು ವಶಪಡಿಸಿಕೊಂಡಿರುವ ಅದಿರಿನ ಮೌಲ್ಯ ರೂ.16 ಕೋಟಿ ಆಗಿರುತ್ತಿತ್ತು. ಆದರೆ, ಕಬ್ಬಿಣದ ಅದಿರಿನ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇದರ ಮೌಲ್ಯ ರೂ.4.8 ಕೋಟಿ ಆಗಿದೆ. 

ಬೇಲೆಕೇರಿಯಲ್ಲಿರುವ ಕಬ್ಬಿಣದ ಅದಿರಿನ ಮೌಲ್ಯ 120 ಕೋಟಿ ರೂಪಾಯಿಗಳಾಗಿದ್ದು, ಹಳೆಯ ಬೆಲೆಯೇ ಅನ್ವಯವಾಗುತ್ತಿದ್ದರೆ ಇದರ ಮೌಲ್ಯ 400 ಕೋಟಿ ರೂಪಾಯಿಗಳಾಗಿರುತ್ತಿತ್ತು ಎಂದು ತಿಳಿದುಬಂದಿದೆ.  (ಕಪ್ರಡಾ))

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *