ಕಾರವಾರ ಬಂದರಿನಲ್ಲಿದ್ದ ಕಬ್ಬಿಣದ ಅದಿರು ಹರಾಜಿಗೆ ನ್ಯಾಯಾಲಯ ಅನುಮತಿ

ಕಾರವಾರದ ಬೈತಕೋಲ್ ಬಂದರಿನಲ್ಲಿ ದಾಸ್ತಾನು ಮಾಡಿರುವ ಅಕ್ರಮ ಕಬ್ಬಿಣದ ಅದಿರಿನ್ನು ಲೈವ್ ಬಿಡ್ ನಡೆಸುವಂತೆ ನ್ಯಾಯಾಲಯವು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

File photo

ಕಾರವಾರ: ಕಾರವಾರದ ಬೈತಕೋಲ್ ಬಂದರಿನಲ್ಲಿ ದಾಸ್ತಾನು ಮಾಡಿರುವ ಅಕ್ರಮ ಕಬ್ಬಿಣದ ಅದಿರಿನ್ನು ಲೈವ್ ಬಿಡ್ ನಡೆಸುವಂತೆ ನ್ಯಾಯಾಲಯವು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. 

ಕಾರವಾರ ಜೆಎಂಎಫ್‌ಸಿ ನ್ಯಾಯಾಲಯವು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಹರಾಜಿಗೆ ಸಮಯ ನಿಗದಿಪಡಿಸಿದೆ. ಈ ಮೂಲಕ ದಶಕಗಳಿಂದ ಗಾಳಿ ಮಳೆಗೆ ಕೊಚ್ಚಿ ಸಮುದ್ರಪಾಲಾಗುತ್ತಿದ್ದ ಅದಿರಿಗೆ ಕೊನೆಗೂ ಮುಕ್ತಿ ಸಿಕ್ಕಂತಾಗಿದೆ.

ಅಕ್ರಮ ಗಣಿಗಾರಿಕೆಯಲ್ಲಿನ ನೂರಾರು ಮೆಟ್ರಿಕ್ ಟನ್ ಅದಿರನ್ನ ಕರಾವಳಿಯ ಕಾರವಾರ ಮತ್ತು ಬೇಲೇಕೇರಿ ಬಂದರಿನ ಮೂಲಕ ವಿದೇಶಕ್ಕೆ ಸಾಗಿಸುತ್ತಿದ್ದಾಗ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದರು.

ಅಂದಿನಿಂದ ಕಬ್ಬಿಣದ ಅದಿರು ಕಾರವಾರ ಹಾಗೂ ಬೇಲೇಕೇರಿ ಬಂದರು ಪ್ರದೇಶದಲ್ಲೇ ಉಳಿದುಕೊಂಡಿದ್ದು ಗಾಳಿ, ಮಳೆಗೆ ಇಲ್ಲಿನ ಸಮುದ್ರ ಸೇರುವಂತಾಗಿತ್ತು. ಬರೋಬ್ಬರಿ 12 ವರ್ಷಗಳ ಬಳಿಕ ಜೆಎಂಎಫ್‌ಸಿ ನ್ಯಾಯಾಲಯ ಕಾರವಾರ ಬಂದರಿನಲ್ಲಿ ದಾಸ್ತಾನಿರುವ  ಅದಿರನ್ನ ಹರಾಜು ಹಾಕಲು ಕಳೆದ ವರ್ಷ 2021ರಲ್ಲಿ ಆದೇಶ ನೀಡಿತ್ತು. ಅದರಂತೆ ಸೂಕ್ತ ಪರಿಶೀಲನೆ ನಡೆಸಿ ಅಗತ್ಯ ಸಿದ್ಧತೆಗಳನ್ನ ಮಾಡಿಕೊಂಡ ಜಿಲ್ಲಾಡಳಿತ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಇದೀಗ ಅದಿರಿನ ಹರಾಜಿಗೆ ಲೈವ್ ಟೆಂಡರನ್ನು ಕರೆದಿದೆ.

ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಬಂದರು ಪ್ರದೇಶದಲ್ಲಿರುವ ಕಬ್ಬಿಣ ಅದಿರನ್ನು ಸಾಗಾಟ ಮಾಡುವಾಗ ಸಿಸಿಕ್ಯಾಮೆರಾ ಹಾಗೂ ಸಾಗಾಟ ಲಾರಿಗಳಿಗೆ ಜಿಪಿಎಸ್ ಅಳವಡಿಕೆಯಂತಹ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇನ್ನು ಅಕ್ರಮ ಅದಿರು ಸಾಗಾಟದ ಆರೋಪದ ಮೇಲೆ 2010ರ ಮಾರ್ಚ್‌ನಲ್ಲಿ ದಾಳಿ ನಡೆಸಿದ್ದ ಅರಣ್ಯ ಅಧಿಕಾರಿಗಳು, ಕಾರವಾರದ ಬೈತಖೋಲ್ ಬಂದರಿನಲ್ಲಿ 50 ಸಾವಿರಕ್ಕೂ ಅಧಿಕ ಮೆಟ್ರಿಕ್‌ ಟನ್ ಹಾಗೂ ಬೇಲೇಕೇರಿ ಬಂದರಿನಲ್ಲಿ 8 ಲಕ್ಷಕ್ಕೂ ಅಧಿಕ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನ ಜಪ್ತಿಪಡಿಸಿಕೊಂಡಿದ್ದರು. 

ಕಾರವಾರ ಬಂದರಿನಲ್ಲಿ ಸಂಗ್ರಹಿಸಿಟ್ಟಿದ್ದ 50 ಸಾವಿರಕ್ಕೂ ಅಧಿಕ ಮೆಟ್ರಿಕ್ ಟನ್ ಅದಿರಿನಲ್ಲಿ ಅರ್ಧದಷ್ಟು ಕಳುವಾಗಿದ್ದಲ್ಲದೇ, ಬಹುಪಾಲು ಮಳೆಯಲ್ಲಿ ಕೊಚ್ಚಿಹೋಗಿದೆ. ಹರಾಜಿಗಾಗಿ ಅಧಿಕಾರಿಗಳು ನಡೆಸಿದ ಮೌಲ್ಯಮಾಪನದಲ್ಲಿ ಕೇವಲ 30 ಸಾವಿರ ಮೆಟ್ರಿಕ್ ಟನ್ ಅದಿರು ಲೆಕ್ಕಕ್ಕೆ ಸಿಕ್ಕಿದ್ದು, ನ್ಯಾಯಾಲಯದಿಂದ ಅನುಮತಿ ಪಡೆದು ಈಗ ಹರಾಜು ಹಾಕಲಾಗುತ್ತಿದೆ. 

ಸದ್ಯ ಕಾರವಾರ ಬಂದರಿನಲ್ಲಿದ್ದ ಅದಿರಿನ ಹರಾಜಿಗೆ ಮಾತ್ರ ನ್ಯಾಯಾಲಯ ಅನುಮತಿ ನೀಡಿದ್ದು, ಬೇಲೇಕೇರಿ ಬಂದರಿನಲ್ಲಿನ ಅದಿರಿನ ಹರಾಜಿಗೆ ಅನುಮತಿ ನೀಡಿಲ್ಲ. ಈಗಾಗಲೇ ಬೇಲೇಕೇರಿ ಬಂದರಿನಲ್ಲಿನ ಅದಿರು ಪ್ರತಿವರ್ಷ ಮಳೆಯ ನೀರಿನೊಂದಿಗೆ ಹರಿದು ಸಮುದ್ರ ಸೇರುತ್ತಿದ್ದು ಅಲ್ಲಿನ ಜಲಚರಗಳಿಗೆ ಹಾನಿಯುಂಟು ಮಾಡುತ್ತಿದೆ. ಅಲ್ಲದೇ ಇದರಿಂದ ಮೀನುಗಾರರು ಸಹ ನಷ್ಟ ಅನುಭವಿಸುವಂತಾಗಿದ್ದು, ಬೇಲೇಕೇರಿ ಬಂದರಿನಲ್ಲಿನ ಅದಿರಿನ ಸ್ಥಳಾಂತರಕ್ಕಾದರೂ ಕ್ರಮ ಕೈಗೊಳ್ಳಬೇಕು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. 

2010ರಲ್ಲಿ ಜಪ್ತಿ ಆದ 1.15 ಲಕ್ಷ ಮೆಟ್ರಿಕ್‌ ಟನ್‌ ಅದಿರನ್ನು ಕಾರವಾರ ಬಂದರಿನಲ್ಲಿ ದಾಸ್ತಾನು ಇಡಲಾಗಿತ್ತು. ಈ ಅದಿರನ್ನು ಒಂದು ತಿಂಗಳೊಳಗೆ ಹರಾಡು ಮಾಡಲಾಗುತ್ತಿದೆ. 

ಬಂದರಿನ ಮೇಲೆ ದಾಳಿ ನಡೆಸಿದ್ದ ಐಎಫ್‌ಎಸ್ ಅಧಿಕಾರಿ ಆರ್ ಗೋಕುಲ್ ಅವರು, ಕಬ್ಬಿಣದ ಅದಿರನ್ನು ವಶಪಡಿಸಿಕೊಂಡಿದ್ದರು. ಬಳಿಕ ಅಂದಿನ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರಿಗೆ ಈ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದರು. ನಂತರ ಸಂತೋಷ್ ಹೆಗ್ಡೆಯವರು ಅಕ್ರಮ ಗಣಿಗಾರಿಕೆ ಕುರಿತ ತಮ್ಮ ವರದಿಯಲ್ಲಿ ಈ ಕುರಿತು ಮಾಹಿತಿ ಸೇರಿಸಿದ್ದರು.

ಈ ಪ್ರಕರಣದ ತನಿಖೆಯು ದೇಶಾದ್ಯಂತ ಗಣಿಗಾರಿಕೆ ಮತ್ತು ಕಬ್ಬಿಣದ ಅದಿರು ಸಾಗಣೆಯನ್ನು ನಿಷೇಧಿಸುವಂತೆ ಸುಪ್ರೀಂಕೋರ್ಟ್ ಆದೇಶಕ್ಕೂ ಕಾರಣವಾಗಿತ್ತು

ತಜ್ಞರ ಪ್ರಕಾರ, 2010 ರಲ್ಲಿ ವಶಪಡಿಸಿಕೊಂಡ ಅದಿರು ಪ್ರತಿ ಮೆಟ್ರಿಕ್ ಟನ್‌ಗೆ 5,000 ರೂ.ಗಳಷ್ಟಿತ್ತು ಎಂದು ತಿಳಿಸಿದ್ದಾರೆ. ಇದೇ ಮೊತ್ತ ಈಗಲೂ ಇದ್ದಿದ್ದರೆ ಒಟ್ಟು ವಶಪಡಿಸಿಕೊಂಡಿರುವ ಅದಿರಿನ ಮೌಲ್ಯ ರೂ.16 ಕೋಟಿ ಆಗಿರುತ್ತಿತ್ತು. ಆದರೆ, ಕಬ್ಬಿಣದ ಅದಿರಿನ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇದರ ಮೌಲ್ಯ ರೂ.4.8 ಕೋಟಿ ಆಗಿದೆ. 

ಬೇಲೆಕೇರಿಯಲ್ಲಿರುವ ಕಬ್ಬಿಣದ ಅದಿರಿನ ಮೌಲ್ಯ 120 ಕೋಟಿ ರೂಪಾಯಿಗಳಾಗಿದ್ದು, ಹಳೆಯ ಬೆಲೆಯೇ ಅನ್ವಯವಾಗುತ್ತಿದ್ದರೆ ಇದರ ಮೌಲ್ಯ 400 ಕೋಟಿ ರೂಪಾಯಿಗಳಾಗಿರುತ್ತಿತ್ತು ಎಂದು ತಿಳಿದುಬಂದಿದೆ.  (ಕಪ್ರಡಾ))

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *