ದೂದ್ ಸಾಗರ್ ಬಳಿ ಹಳಿ ತಪ್ಪಿದ ಅಮರಾವತಿ ಎಕ್ಸ್ ಪ್ರೆಸ್; ಪ್ರಯಾಣಿಕರು, ರೈಲ್ವೇ ಸಿಬ್ಬಂದಿ ಅಪಾಯದಿಂದ ಪಾರು!

ಹೌರಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ ಪ್ರೆಸ್ ರೈಲು ಗೋವಾದ ದೂದ್ ಸಾಗರ ಬಳಿ ಹಳಿ ತಪ್ಪಿದ್ದು, ಪ್ರಯಾಣಿಕರು, ರೈಲ್ವೇ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

train-derails

ಬೆಳಗಾವಿ: ಹೌರಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ ಪ್ರೆಸ್ ರೈಲು ಗೋವಾದ ದೂದ್ ಸಾಗರ ಬಳಿ ಹಳಿ ತಪ್ಪಿದ್ದು, ಪ್ರಯಾಣಿಕರು, ರೈಲ್ವೇ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ವಾಸ್ಕೋ-ಡ-ಗಾಮಾ-ಹೌರಾ ಅಮರಾವತಿ ಎಕ್ಸ್‌ಪ್ರೆಸ್‌ನ ಪ್ರಮುಖ ಇಂಜಿನ್‌ನ ಮುಂಭಾಗದ ಜೋಡಿ ಚಕ್ರಗಳು ಮಂಗಳವಾರ ಬೆಳಿಗ್ಗೆ ದೂಧಸಾಗರ ಮತ್ತು ಕಾರಂಜೋಲ್ ನಡುವೆ ಹಳಿತಪ್ಪಿವೆ. ಮೂಲಗಳ ಪ್ರಕಾರ ರೈಲು ಬೆಳಗ್ಗೆ 6.30ಕ್ಕೆ ವಾಸ್ಕೋ-ಡ-ಗಾಮಾದಿಂದ ಹೊರಟು  8.50ಕ್ಕೆ ದೂಧಸಾಗರ್‌ ದಾಟಿತ್ತು. ಈ ವೇಳೆ ರೈಲಿನ ಎಂಜಿನ ಮುಂಭಾಗದ ಎರಡು ಗಾಲಿಗಳು ಹಳಿ ತಪ್ಪಿವೆ. ಅದೃಷ್ಟವಶಾತ್ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

https://imasdk.googleapis.com/js/core/bridge3.495.1_en.html#goog_2095313018

ಯಾವುದೇ ರೀತಿಯ ಸಾವುನೋವು ಅಥವಾ ಗಾಯಗಳ ಬಗ್ಗೆ ಇದುವರೆಗೆ ವರದಿಯಾಗಿಲ್ಲ. “ರೈಲಿನ ಸಂಪೂರ್ಣ ರೇಕ್ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಅಪಘಾತ ಪರಿಹಾರ ರೈಲು (ಎಆರ್ ಟಿ) ಬೆಂಬಲದೊಂದಿಗೆ ಇದನ್ನು ಸರಿ ಮಾಡಲಾಗಿದೆ. ಹಿರಿಯ ಅಧಿಕಾರಿಗಳು ಪರಿಸ್ಥಿತಿಯನ್ನು  ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ,” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲಿನ ಇಂಜಿನ್ ನಲ್ಲಾದ ಸಮಸ್ಯೆಯಿಂದಾಗಿ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಪಟನಾದಿಂದ ಗುವಾಹಟಿಗೆ ಹೊರಟಿದ್ದ ಬಿಕನೇರ್ ಎಕ್ಸ್ ಪ್ರೆಸ್ ಅಪಘಾತಕ್ಕೀಡಾಗಿ 9 ಮಂದಿ ಸಾವಿಗೀಡಾಗಿದ್ದರು. ಆ ಘಟನೆ ಮರೆಯುವ ಮುನ್ನವೇ ಮತ್ತೊಂದು ಘಟನೆ ಸಂಭವಿಸಿರುವುದು  ಆತಂಕಕ್ಕೆ ಕಾರಣವಾಗಿದೆ.

ರೈಲು ಹಳಿ ತಪ್ಪಿದ ತಕ್ಷಣ ಎಆರ್ ಟಿ ಮತ್ತು ವೈದ್ಯಕೀಯ ಸಲಕರಣೆಗಳ ವ್ಯಾನ್ ಕ್ಯಾಸಲ್ ರಾಕ್ ನಿಂದ ಬೆಳಗ್ಗೆ 9.45ಕ್ಕೆ ಹೊರಟು 10.35ಕ್ಕೆ ಸ್ಥಳಕ್ಕೆ ತಲುಪಿದೆ ಎಂದು ರೈಲ್ವೇಸ್ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಹುಬ್ಬಳಿಯ ಡಿಆರ್ ಎಂ ಅರವಿಂದ್ ಮಾಳಖೇಡೆ ಹಾಗೂ ಹಿರಿಯ  ಅಧಿಕಾರಿಗಳ ವಿಭಾಗೀಯ ತಂಡ ಬೆಳಗ್ಗೆ 9.50ಕ್ಕೆ ಸ್ವಯಂ ಚಾಲಿತ ಎಆರ್ ಟಿಯ ಮೂಲಕ ಹುಬ್ಬಳ್ಳಿಯಿಂದ ತೆರಳಿ ಸ್ಥಳಕ್ಕೆ ಧಾವಿಸಿದ್ದಾರೆ. ರೈಲು ಅವಗಢದಿಂದ ಆಘಾತಕ್ಕೆ ಈಡಾಗಿದ್ದ ಎಲ್ಲಾ ಪ್ರಯಾಣಿಕರಿಗೆ ನೀರು ಮತ್ತು ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಪಶ್ಚಿಮ ಬಂಗಾಳದಲ್ಲಿ ನಡೆದ ರೈಲು ಅಫಘಾತದ ಬಳಿಕ ಸ್ಥಳಕ್ಕೆ ಧಾವಿಸಿದ್ದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಇಂಜಿನ್ ನ ಬಿಡಿಭಾಗಗಳನ್ನು ಬೇರೆ ಬೇರೆ ಮಾಡಿ ತನಿಖೆಗೆ ಒಳಪಡಿಸಿದ ಬಳಿಕವೇ ಇಂಜಿನ್ ನ ಯಾವ ಭಾಗದಲ್ಲಿ ಸಮಸ್ಯೆಯಾಗಿದೆ ಎನ್ನುವುದನ್ನು ತಿಳಿಯಲು ಸಾಧ್ಯ ಎಂದು  ಹೇಳಿದ್ದರು. ಅದೇ ವೇಳೆ ಆಸ್ಪತ್ರೆಗೆ ದಾಖಲಾಗಿದ್ದ 45ಕ್ಕೂ ಅಧಿಕ ಪ್ರಯಾಣಿಕರನ್ನು ಅವರು ಭೇಟಿ ಮಾಡಿ ಸಾಂತ್ವನ ಹೇಳಿದ್ದರು.

ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ನೇತೃತ್ವದ ಹಿರಿಯ ಅಧಿಕಾರಿಗಳು, ಹೆಚ್ಚುವರಿ ಜನರಲ್ ಮ್ಯಾನೇಜರ್ ಪಿ ಕೆ ಮಿಶ್ರಾ, ಎಸ್‌ಪಿಎಸ್ ಗುಪ್ತಾ, ಪ್ರಧಾನ ಮುಖ್ಯ ಎಂಜಿನಿಯರ್, ಅಲೋಕ್ ತಿವಾರಿ, ಪ್ರಧಾನ ಮುಖ್ಯ ಸುರಕ್ಷತಾ ಅಧಿಕಾರಿ ಮತ್ತು ಇಲಾಖೆಗಳ ಪ್ರಧಾನ ಮುಖ್ಯಸ್ಥರು  ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *