ಉ.ಕ.ಸಾವಿರಕ್ಕೇರಿದ ಕರೋನಾ ಸೋಂಕಿತರ ಸಂಖ್ಯೆ,೬೦೦ ಕ್ಕೂ ಹೆಚ್ಚು ಜನರು ಗುಣಮುಖ

Thumbnail image

ಉತ್ತರ ಕನ್ನಡದಲ್ಲಿ 900ರ ಗಡಿ ತಲುಪಿದ ಕೊರೊನಾ..

ಉತ್ತರಕನ್ನಡ ಜಿಲ್ಲೆಯಲ್ಲಿ ಇದುವರೆಗೆ 25 ಶಿಕ್ಷಣ ಸಂಸ್ಥೆಗಳನ್ನ ಕ್ಲಸ್ಟರ್ ಆಗಿ ಘೋಷಿಸಿ ಬಂದ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮಾಹಿತಿ ನೀಡಿದ್ದಾರೆ.

ಕಾರವಾರ(ಉತ್ತರಕನ್ನಡ): ಉತ್ತರಕನ್ನಡದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಇಂದು 900ಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳು ವರದಿಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮಾಹಿತಿ ನೀಡಿದ್ದಾರೆ

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸುದ್ದಿಗೋಷ್ಠಿ

ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ 600 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಇಂದು ಅದಕ್ಕಿಂತಲೂ ಹೆಚ್ಚಿನ ಪ್ರಕರಣಗಳು ದೃಢವಾಗುವ ಸಾಧ್ಯತೆಗಳಿದ್ದು, ಅದರಲ್ಲಿ ನೌಕಾನೆಲೆ ಹಾಗು ಮೆಡಿಕಲ್ ಕಾಲೇಜು ಸೇರಿ ಕಾರವಾರದಲ್ಲೇ ಹೆಚ್ಚಿನ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 25 ಶಿಕ್ಷಣ ಸಂಸ್ಥೆಗಳನ್ನ ಕ್ಲಸ್ಟರ್ ಆಗಿ ಘೋಷಿಸಿ ಬಂದ್ ಮಾಡಲಾಗಿದೆ ಎಂದರು.

5 ಪಾಸಿಟಿವ್ ಪ್ರಕರಣ ಪತ್ತೆಯಾದ ಶಾಲೆಗಳನ್ನೇ ಕ್ಲಸ್ಟರ್ ಎಂದು ಪರಿಗಣಿಸಲಾಗುತ್ತಿದೆ. ಅದರಂತೆ ಇಂದು ದಾಂಡೇಲಿ 4, ಹೊನ್ನಾವರ 3 ಹಾಗು ಯಲ್ಲಾಪುರ, ಶಿರಸಿ, ಕುಮಟಾದಲ್ಲಿ ತಲಾ ಒಂದು ಸೇರಿ ಮತ್ತೆ 10 ಶಾಲೆಗಳನ್ನ ಬಂದ್ ಮಾಡಲು ಆದೇಶಿಸಲಾಗಿದೆ ಎಂದು ಹೇಳಿದರು.

ಇನ್ನು ದಾಂಡೇಲಿ ನಗರದ 8 ಶಾಲೆಗಳಲ್ಲಿ ಕ್ಲಸ್ಟರ್ ನಿರ್ಮಾಣ ಹಿನ್ನಲೆ ಜನವರಿ 21 ರಿಂದ 26ರ ವರೆಗೆ ನಗರದ 1 ರಿಂದ 8ನೇ ತರಗತಿಗಳಿಗೆ ರಜೆ ಘೋಷಿಸಲಾಗಿದೆ. ನಗರದ 9, 10ನೇ ತರಗತಿಗಳು, ಪಿಯುಸಿ ಹಾಗೂ ಪದವಿ ತರಗತಿಗಳನ್ನ 50 ಶೇಕಡಾ ಭರ್ತಿಯೊಂದಿಗೆ ನಡೆಸಲು ಸೂಚನೆ ನೀಡಲಾಗಿದೆ.

ಈಗಾಗಲೇ ಕಾರವಾರದಲ್ಲಿ 20 ಸೇರಿ ಜಿಲ್ಲೆಯಾದ್ಯಂತ 39 ಮೈಕ್ರೋ ಕಂಟೈನ್‌ಮೆಂಟ್ ಝೋನ್‌ಗಳನ್ನ ಗುರುತಿಸಲಾಗಿದೆ. ಅಲ್ಲದೇ, ಜಿಲ್ಲೆಯಲ್ಲಿ ಸದ್ಯ ಪತ್ತೆಯಾಗಿರುವ ಪಾಸಿಟಿವ್ ಪ್ರಕರಣಗಳ ಪೈಕಿ ಸದ್ಯ 18 ವರ್ಷದೊಳಗಿನ 554 ಹಾಗೂ 18 ವರ್ಷ ಮೇಲ್ಪಟ್ಟ 508 ಮಂದಿ ವಿದ್ಯಾರ್ಥಿಗಳು ಸೋಂಕಿತರಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

Thumbnail image

ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಕೋವಿಡ್‌ ಸೋಂಕು ಹೆಚ್ಚಳ ; ಕ್ರೀಡಾಕೂಟಕ್ಕೆ ಭಾರಿ ವಿರೋಧ

ಕೊರೊನಾ ಮಾರ್ಗಸೂಚಿ ಹಿನ್ನೆಲೆ ಜಿಲ್ಲೆಯಲ್ಲಿ ಜಾತ್ರೆಗಳಿಗೆ ಸಾಕಷ್ಟು ನಿರ್ಬಂಧ ವಿಧಿಸಲಾಗಿದೆ. ಆದ್ರೆ, ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ಅನುಮತಿ ನೀಡಿರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಕೊರೊನಾ ಪ್ರಕರಣಗಳು ಹೆಚ್ಚಿರುವ ಕಾರವಾರದಲ್ಲೇ ಕ್ರೀಡಾಕೂಟ ನಡೆಯುತ್ತಿದೆ..

ಕಾರವಾರ : ಕೊರೊನಾ ಮೊದಲನೇಯ ಅಲೆಯಲ್ಲಿ ರಾಜ್ಯದಲ್ಲೇ ಕೊರೊನಾ ಹಾಟ್‌ಸ್ಪಾಟ್ ಆಗಿ ಗುರುತಿಸಿಕೊಂಡಿದ್ದ ಜಿಲ್ಲೆ ಉತ್ತರಕನ್ನಡ. ಆದರೆ, ಎರಡನೇ ಅಲೆಯಲ್ಲಿ ಜಿಲ್ಲಾಡಳಿತದ ಸೂಕ್ತ ನಿರ್ವಹಣೆಯಿಂದಾಗಿ ಕೊರೊನಾ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿತ್ತು. ಆದರೆ, ಈ ಬಾರಿ ಹೆಚ್ಚಿನ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ

ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಕೋವಿಡ್‌ ಸೋಂಕು ಹೆಚ್ಚಳ ; ಕ್ರೀಡಾಕೂಟಕ್ಕೆ ಭಾರಿ ವಿರೋಧ

ನಿತ್ಯ ಇನ್ನೂರಕ್ಕೂ ಅಧಿಕ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿವೆ. ಸದ್ಯ ಜಿಲ್ಲೆಯ ಸಕ್ರಿಯ ಸೋಂಕಿತರ ಸಂಖ್ಯೆ 1,719ಕ್ಕೆ ಏರಿಕೆಯಾಗಿದೆ. ಜಿಲ್ಲೆಯಾದ್ಯಂತ 14 ಕಡೆಗಳಲ್ಲಿ ಕೋವಿಡ್ ಕ್ಲಸ್ಟರ್ ನಿರ್ಮಾಣವಾಗಿದೆ. ಕಾರವಾರದಲ್ಲಿ 2 ಹಾಗೂ ಹೊನ್ನಾವರದಲ್ಲಿ 3 ಕಡೆಗಳಲ್ಲಿ ಪತ್ತೆಯಾಗಿದೆ.

ಜಿಲ್ಲೆಯಲ್ಲಿ 18 ವರ್ಷದೊಳಗಿನ 349 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ 13 ರಿಂದ 18 ವರ್ಷದೊಳಗಿನವರೇ 244 ವಿದ್ಯಾರ್ಥಿಗಳಿದ್ದಾರೆ. ಅದರಲ್ಲೂ ಕಾರವಾರ ಹಾಗೂ ಹೊನ್ನಾವರ ತಾಲೂಕುಗಳ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಒಂದು ವಾರ ನಗರ ಪ್ರದೇಶದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳನ್ನ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

‘ಆಸ್ಪತ್ರೆಗೆ ದಾಖಲಾಗುವ ಸೋಂಕಿತರ ಸಂಖ್ಯೆ ಕಡಿಮೆ’

ಜಿಲ್ಲೆಯ ಕೊರೊನಾ ಪಾಸಿಟಿವಿಟಿ ದರ ಶೇ.8.89 ಇದೆ. ಕಾರವಾರ ತಾಲೂಕಿನಲ್ಲೇ ಅತಿ ಹೆಚ್ಚು ಅಂದ್ರೆ ಶೇ.14ರಷ್ಟಿದೆ. ಉಳಿದಂತೆ ಹೊನ್ನಾವರದಲ್ಲಿ ಶೇ.5.5 ಇದ್ರೆ, ಕುಮಟಾ ತಾಲೂಕಿನಲ್ಲಿ ಶೇ.5.3 ಪಾಸಿಟಿವಿಟಿ ದರ ಇದೆ. ಉಳಿದ ತಾಲೂಕುಗಳಲ್ಲಿ ಶೇ.5ಕ್ಕಿಂತ ಕಡಿಮೆಯಿದೆ. ವಿದ್ಯಾರ್ಥಿಗಳಿಗೆ ಕೊರೊನಾ ವ್ಯಾಕ್ಸಿನ್ ನೀಡುವ ಪ್ರಕ್ರಿಯೆ ವೇಗವಾಗಿ ನಡೆಯುತ್ತಿದೆ. ಈಗಾಗಲೇ ಶೇ.80ರಷ್ಟು ಲಸಿಕೆ ನೀಡಿಕೆ ಪೂರ್ಣವಾಗಿದೆ. ಹೀಗಾಗಿ, ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದ್ದರೂ ಸಹ ಆಸ್ಪತ್ರೆಗೆ ದಾಖಲಾಗುವ ಸ್ಥಿತಿ ಇಲ್ಲ ಅಂತಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕೊರೊನಾ ಮಾರ್ಗಸೂಚಿ ಹಿನ್ನೆಲೆ ಜಿಲ್ಲೆಯಲ್ಲಿ ಜಾತ್ರೆಗಳಿಗೆ ಸಾಕಷ್ಟು ನಿರ್ಬಂಧ ವಿಧಿಸಲಾಗಿದೆ. ಆದ್ರೆ, ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ಅನುಮತಿ ನೀಡಿರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಕೊರೊನಾ ಪ್ರಕರಣಗಳು ಹೆಚ್ಚಿರುವ ಕಾರವಾರದಲ್ಲೇ ಕ್ರೀಡಾಕೂಟ ನಡೆಯುತ್ತಿದೆ. ಸಾಕಷ್ಟು ವಿದ್ಯಾರ್ಥಿಗಳು ಸಮರ್ಪಕವಾಗಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವಿಲ್ಲದೆ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. ಆದರೂ ಸಹ ಅವರಿಗೆ ಯಾಕೆ ನಿರ್ಬಂಧವಿಲ್ಲ ಅಂತಾ ಸಾರ್ವಜನಿಕರು ಪ್ರಶ್ನಿಸಿದ್ದಾರೆ.

(etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *