appu news 1-ಪುನೀತ್‌ (ಅಪ್ಪು) ಕೊನೆಯ ಸಿನೇಮಾದಲ್ಲಿ ನಟಿಸಿದ ಪ್ರಸಿದ್ಧ ಸಹೋದರರ್ಯಾರು ಗೊತ್ತೆ?

ಪವರ್ ಸ್ಟಾರ್ ಪುನೀತ್ ಅಗಲುವಿಕೆ ನೋವಲ್ಲಿ ಚಿತ್ರೀಕರಣ ಮುಗಿಸಿದ ‘ಜೇಮ್ಸ್’ ತಂಡ: ವಿಶೇಷ ಪಾತ್ರದಲ್ಲಿ ಶಿವಣ್ಣ, ರಾಘಣ್ಣ!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ ಹೊಂದುವ ಸಂದರ್ಭದಲ್ಲಿ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದು ಕೊನೆಯ ಹಂತ ತಲುಪಿತ್ತು. ಇದು ಪುನೀತ್ ಅಭಿನಯದ ಕೊನೆಯ ಚಿತ್ರ ಕೂಡ ಹೌದು.

Puneet Rajkumar in James

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ ಹೊಂದುವ ಸಂದರ್ಭದಲ್ಲಿ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದು ಕೊನೆಯ ಹಂತ ತಲುಪಿತ್ತು. ಇದು ಪುನೀತ್ ಅಭಿನಯದ ಕೊನೆಯ ಚಿತ್ರ ಕೂಡ ಹೌದು.

ಇದೀಗ ಚಿತ್ರತಂಡ ಅವರ ಅಗಲುವಿಕೆಯ ನೋವಿನಲ್ಲಿ ಚಿತ್ರೀಕರಣ ಮುಗಿಸಿದೆ. ಚೇತನ್ ಕುಮಾರ್ ನಿರ್ದೇಶನದ ಕಿಶೋರ್ ಪತಿಕೊಂಡ ನಿರ್ಮಾಣದ ಈ ಚಿತ್ರದಲ್ಲಿ ಅವರ ಅಣ್ಣಂದಿರಾದ ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ತಮ್ಮನಿಗೆ ಗೌರವ ಸೂಚಿಸಿದ್ದಾರೆ, ಅಲ್ಲದೆ ಭಾವನಾತ್ಮಕತೆಯನ್ನು ತೋರಿಸಿದ್ದಾರೆ.

ಪುನೀತ್ ಭೌತಿಕವಾಗಿ ಅಗಲಿದರೂ ಭಾವನಾತ್ಮಕವಾಗಿ ಎಲ್ಲರ ಹೃದಯದಲ್ಲಿದ್ದಾರೆ ಎಂದು ತೋರಿಸುವ ರೀತಿಯಲ್ಲಿ ಅವರ ಫೋಟೋದ ಮುಂದೆ ಚಿತ್ರತಂಡದವರೆಲ್ಲರೂ ಸೇರಿ ಚಿತ್ರೀಕರಣದ ಕೊನೆಯ ದಿನ ಕುಂಬಳ ಕಾಯಿ ಒಡೆದು ನಮನ ಸಲ್ಲಿಸಿ ಫೋಟೋ ತೆಗೆಸಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್ (Puneeth Rajkumar)​  ಮೂರು ತಿಂಗಳಾಗುತ್ತಾ ಬಂದರೂ ಅವರ ನೆನಪು ಅಭಿಮಾನಗಳ ಮನದಲ್ಲಿ ಕಡಿಮೆಯಾಗುತ್ತಿಲ್ಲ. ಅಪ್ಪು ನಿಧನದ ಸುದ್ದಿಯನ್ನು ಇಂದಿಗೂ ಯಾರೂ ನಂಬಲು ಸಾಧ್ಯವಾಗುತ್ತಿಲ್ಲ. ಪುನೀತ್ ಅವರನ್ನು ನೋಡಲು ಇಂದಿಗೂ ಸಮಾಧಿ ಬಳಿ ಪ್ರತಿ ದಿನ ಸಾವಿರ ಸಾವಿರ ಮಂದಿ ಬರುತ್ತಲೇ ಇದ್ದಾರೆ. 

ಜೇಮ್ಸ್ ಚಿತ್ರದ ಕೊನೆಯ ದಿನದ ಶೂಟಿಂಗ್‌ ಸೆಟ್‌ನಲ್ಲಿ ಶಿವರಾಜ್‌ಕುಮಾರ್ , ರಾಘವೇಂದ್ರ ರಾಜ್‌ಕುಮಾರ್, ರಾಘಣ್ಣ ಪುತ್ರ ಯುವ ರಾಜ್‌ಕುಮಾರ್, ರಾಮ್‌ಕುಮಾರ್ ಪುತ್ರ ಧೀರೇನ್ ಹಾಗೂ ಡಾ. ರಾಜ್ ಕುಟುಂಬದ ಕೆಲ ಆಪ್ತರು ಕೊನೆಯ ದಿನದ ಶೂಟಿಂಗ್ ಸೆಟ್‌ನಲ್ಲಿ ಇದ್ದರು. 

ಚಿತ್ರದಲ್ಲಿ ಪುನೀತ್ ಅವರ ಧ್ವನಿಯ ಡಬ್ಬಿಂಗ್ ಕೆಲಸ ಆಗಬೇಕಿದೆ. ನಟ ಡಾ. ಶಿವರಾಜ್ ಕುಮಾರ್ (Shivarajkumar)​ ಅವರಿಂದ ಅಪ್ಪುಗೆ ಕಂಠದಾನ ಮಾಡಲು ಚಿತ್ರ ತಂಡ ಚಿಂತನೆ ನಡೆಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್​ ರಾಜ್​ಕುಮಾರ್​ ಹುಟ್ಟುಹಬ್ಬದ ದಿನವೇ (ಮಾ.17) ‘ಜೇಮ್ಸ್​’ ಬಿಡುಗಡೆಯಾಗುವ ಸಾಧ್ಯತೆಯಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *