appu news 1-ಪುನೀತ್‌ (ಅಪ್ಪು) ಕೊನೆಯ ಸಿನೇಮಾದಲ್ಲಿ ನಟಿಸಿದ ಪ್ರಸಿದ್ಧ ಸಹೋದರರ್ಯಾರು ಗೊತ್ತೆ?

ಪವರ್ ಸ್ಟಾರ್ ಪುನೀತ್ ಅಗಲುವಿಕೆ ನೋವಲ್ಲಿ ಚಿತ್ರೀಕರಣ ಮುಗಿಸಿದ ‘ಜೇಮ್ಸ್’ ತಂಡ: ವಿಶೇಷ ಪಾತ್ರದಲ್ಲಿ ಶಿವಣ್ಣ, ರಾಘಣ್ಣ!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ ಹೊಂದುವ ಸಂದರ್ಭದಲ್ಲಿ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದು ಕೊನೆಯ ಹಂತ ತಲುಪಿತ್ತು. ಇದು ಪುನೀತ್ ಅಭಿನಯದ ಕೊನೆಯ ಚಿತ್ರ ಕೂಡ ಹೌದು.

Puneet Rajkumar in James

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ ಹೊಂದುವ ಸಂದರ್ಭದಲ್ಲಿ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದು ಕೊನೆಯ ಹಂತ ತಲುಪಿತ್ತು. ಇದು ಪುನೀತ್ ಅಭಿನಯದ ಕೊನೆಯ ಚಿತ್ರ ಕೂಡ ಹೌದು.

ಇದೀಗ ಚಿತ್ರತಂಡ ಅವರ ಅಗಲುವಿಕೆಯ ನೋವಿನಲ್ಲಿ ಚಿತ್ರೀಕರಣ ಮುಗಿಸಿದೆ. ಚೇತನ್ ಕುಮಾರ್ ನಿರ್ದೇಶನದ ಕಿಶೋರ್ ಪತಿಕೊಂಡ ನಿರ್ಮಾಣದ ಈ ಚಿತ್ರದಲ್ಲಿ ಅವರ ಅಣ್ಣಂದಿರಾದ ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ತಮ್ಮನಿಗೆ ಗೌರವ ಸೂಚಿಸಿದ್ದಾರೆ, ಅಲ್ಲದೆ ಭಾವನಾತ್ಮಕತೆಯನ್ನು ತೋರಿಸಿದ್ದಾರೆ.

ಪುನೀತ್ ಭೌತಿಕವಾಗಿ ಅಗಲಿದರೂ ಭಾವನಾತ್ಮಕವಾಗಿ ಎಲ್ಲರ ಹೃದಯದಲ್ಲಿದ್ದಾರೆ ಎಂದು ತೋರಿಸುವ ರೀತಿಯಲ್ಲಿ ಅವರ ಫೋಟೋದ ಮುಂದೆ ಚಿತ್ರತಂಡದವರೆಲ್ಲರೂ ಸೇರಿ ಚಿತ್ರೀಕರಣದ ಕೊನೆಯ ದಿನ ಕುಂಬಳ ಕಾಯಿ ಒಡೆದು ನಮನ ಸಲ್ಲಿಸಿ ಫೋಟೋ ತೆಗೆಸಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್ (Puneeth Rajkumar)​  ಮೂರು ತಿಂಗಳಾಗುತ್ತಾ ಬಂದರೂ ಅವರ ನೆನಪು ಅಭಿಮಾನಗಳ ಮನದಲ್ಲಿ ಕಡಿಮೆಯಾಗುತ್ತಿಲ್ಲ. ಅಪ್ಪು ನಿಧನದ ಸುದ್ದಿಯನ್ನು ಇಂದಿಗೂ ಯಾರೂ ನಂಬಲು ಸಾಧ್ಯವಾಗುತ್ತಿಲ್ಲ. ಪುನೀತ್ ಅವರನ್ನು ನೋಡಲು ಇಂದಿಗೂ ಸಮಾಧಿ ಬಳಿ ಪ್ರತಿ ದಿನ ಸಾವಿರ ಸಾವಿರ ಮಂದಿ ಬರುತ್ತಲೇ ಇದ್ದಾರೆ. 

ಜೇಮ್ಸ್ ಚಿತ್ರದ ಕೊನೆಯ ದಿನದ ಶೂಟಿಂಗ್‌ ಸೆಟ್‌ನಲ್ಲಿ ಶಿವರಾಜ್‌ಕುಮಾರ್ , ರಾಘವೇಂದ್ರ ರಾಜ್‌ಕುಮಾರ್, ರಾಘಣ್ಣ ಪುತ್ರ ಯುವ ರಾಜ್‌ಕುಮಾರ್, ರಾಮ್‌ಕುಮಾರ್ ಪುತ್ರ ಧೀರೇನ್ ಹಾಗೂ ಡಾ. ರಾಜ್ ಕುಟುಂಬದ ಕೆಲ ಆಪ್ತರು ಕೊನೆಯ ದಿನದ ಶೂಟಿಂಗ್ ಸೆಟ್‌ನಲ್ಲಿ ಇದ್ದರು. 

ಚಿತ್ರದಲ್ಲಿ ಪುನೀತ್ ಅವರ ಧ್ವನಿಯ ಡಬ್ಬಿಂಗ್ ಕೆಲಸ ಆಗಬೇಕಿದೆ. ನಟ ಡಾ. ಶಿವರಾಜ್ ಕುಮಾರ್ (Shivarajkumar)​ ಅವರಿಂದ ಅಪ್ಪುಗೆ ಕಂಠದಾನ ಮಾಡಲು ಚಿತ್ರ ತಂಡ ಚಿಂತನೆ ನಡೆಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್​ ರಾಜ್​ಕುಮಾರ್​ ಹುಟ್ಟುಹಬ್ಬದ ದಿನವೇ (ಮಾ.17) ‘ಜೇಮ್ಸ್​’ ಬಿಡುಗಡೆಯಾಗುವ ಸಾಧ್ಯತೆಯಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ...

ಶಾಲೆಗೆ ಹೋಗದ ರಾಜ!

ಅಕ್ಷರ ಕಲಿಯದೇ ಆಕಾಶದೆತ್ತರಕ್ಕೆ ಬೆಳೆದ ಅಪರೂಪದ ನಟ ಅನರ್ಘ್ಯ ರತ್ನ. ಮತ್ತೇ ಶಾಲೆಗೆ ಮುಖ ತೋರಿಸಲೇ ಇಲ್ಲ.

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ ಅಂದರೆ ಎಲ್ಲರ ಭಿತ್ತಿಯ ಚಿತ್ರ… ಅವಳಿ ನಗರ ಹುಬ್ಬಳ್ಳಿ – ಧಾರವಾಡದಲ್ಲಿ ಉತ್ತರ ಕರ್ನಾಟಕ ಅಂದರೆ…. ಅದು ಪಾಪು, ಚಂಪಾ… ಪಾವಟೆ, ನಂತರದ ದೊಡ್ಡ ಹೆಸರು. ಅಧಿಕಾರ ಇಲ್ಲದೆ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *