appu news 1-ಪುನೀತ್‌ (ಅಪ್ಪು) ಕೊನೆಯ ಸಿನೇಮಾದಲ್ಲಿ ನಟಿಸಿದ ಪ್ರಸಿದ್ಧ ಸಹೋದರರ್ಯಾರು ಗೊತ್ತೆ?

ಪವರ್ ಸ್ಟಾರ್ ಪುನೀತ್ ಅಗಲುವಿಕೆ ನೋವಲ್ಲಿ ಚಿತ್ರೀಕರಣ ಮುಗಿಸಿದ ‘ಜೇಮ್ಸ್’ ತಂಡ: ವಿಶೇಷ ಪಾತ್ರದಲ್ಲಿ ಶಿವಣ್ಣ, ರಾಘಣ್ಣ!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ ಹೊಂದುವ ಸಂದರ್ಭದಲ್ಲಿ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದು ಕೊನೆಯ ಹಂತ ತಲುಪಿತ್ತು. ಇದು ಪುನೀತ್ ಅಭಿನಯದ ಕೊನೆಯ ಚಿತ್ರ ಕೂಡ ಹೌದು.

Puneet Rajkumar in James

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ ಹೊಂದುವ ಸಂದರ್ಭದಲ್ಲಿ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದು ಕೊನೆಯ ಹಂತ ತಲುಪಿತ್ತು. ಇದು ಪುನೀತ್ ಅಭಿನಯದ ಕೊನೆಯ ಚಿತ್ರ ಕೂಡ ಹೌದು.

ಇದೀಗ ಚಿತ್ರತಂಡ ಅವರ ಅಗಲುವಿಕೆಯ ನೋವಿನಲ್ಲಿ ಚಿತ್ರೀಕರಣ ಮುಗಿಸಿದೆ. ಚೇತನ್ ಕುಮಾರ್ ನಿರ್ದೇಶನದ ಕಿಶೋರ್ ಪತಿಕೊಂಡ ನಿರ್ಮಾಣದ ಈ ಚಿತ್ರದಲ್ಲಿ ಅವರ ಅಣ್ಣಂದಿರಾದ ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ತಮ್ಮನಿಗೆ ಗೌರವ ಸೂಚಿಸಿದ್ದಾರೆ, ಅಲ್ಲದೆ ಭಾವನಾತ್ಮಕತೆಯನ್ನು ತೋರಿಸಿದ್ದಾರೆ.

ಪುನೀತ್ ಭೌತಿಕವಾಗಿ ಅಗಲಿದರೂ ಭಾವನಾತ್ಮಕವಾಗಿ ಎಲ್ಲರ ಹೃದಯದಲ್ಲಿದ್ದಾರೆ ಎಂದು ತೋರಿಸುವ ರೀತಿಯಲ್ಲಿ ಅವರ ಫೋಟೋದ ಮುಂದೆ ಚಿತ್ರತಂಡದವರೆಲ್ಲರೂ ಸೇರಿ ಚಿತ್ರೀಕರಣದ ಕೊನೆಯ ದಿನ ಕುಂಬಳ ಕಾಯಿ ಒಡೆದು ನಮನ ಸಲ್ಲಿಸಿ ಫೋಟೋ ತೆಗೆಸಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್ (Puneeth Rajkumar)​  ಮೂರು ತಿಂಗಳಾಗುತ್ತಾ ಬಂದರೂ ಅವರ ನೆನಪು ಅಭಿಮಾನಗಳ ಮನದಲ್ಲಿ ಕಡಿಮೆಯಾಗುತ್ತಿಲ್ಲ. ಅಪ್ಪು ನಿಧನದ ಸುದ್ದಿಯನ್ನು ಇಂದಿಗೂ ಯಾರೂ ನಂಬಲು ಸಾಧ್ಯವಾಗುತ್ತಿಲ್ಲ. ಪುನೀತ್ ಅವರನ್ನು ನೋಡಲು ಇಂದಿಗೂ ಸಮಾಧಿ ಬಳಿ ಪ್ರತಿ ದಿನ ಸಾವಿರ ಸಾವಿರ ಮಂದಿ ಬರುತ್ತಲೇ ಇದ್ದಾರೆ. 

ಜೇಮ್ಸ್ ಚಿತ್ರದ ಕೊನೆಯ ದಿನದ ಶೂಟಿಂಗ್‌ ಸೆಟ್‌ನಲ್ಲಿ ಶಿವರಾಜ್‌ಕುಮಾರ್ , ರಾಘವೇಂದ್ರ ರಾಜ್‌ಕುಮಾರ್, ರಾಘಣ್ಣ ಪುತ್ರ ಯುವ ರಾಜ್‌ಕುಮಾರ್, ರಾಮ್‌ಕುಮಾರ್ ಪುತ್ರ ಧೀರೇನ್ ಹಾಗೂ ಡಾ. ರಾಜ್ ಕುಟುಂಬದ ಕೆಲ ಆಪ್ತರು ಕೊನೆಯ ದಿನದ ಶೂಟಿಂಗ್ ಸೆಟ್‌ನಲ್ಲಿ ಇದ್ದರು. 

ಚಿತ್ರದಲ್ಲಿ ಪುನೀತ್ ಅವರ ಧ್ವನಿಯ ಡಬ್ಬಿಂಗ್ ಕೆಲಸ ಆಗಬೇಕಿದೆ. ನಟ ಡಾ. ಶಿವರಾಜ್ ಕುಮಾರ್ (Shivarajkumar)​ ಅವರಿಂದ ಅಪ್ಪುಗೆ ಕಂಠದಾನ ಮಾಡಲು ಚಿತ್ರ ತಂಡ ಚಿಂತನೆ ನಡೆಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್​ ರಾಜ್​ಕುಮಾರ್​ ಹುಟ್ಟುಹಬ್ಬದ ದಿನವೇ (ಮಾ.17) ‘ಜೇಮ್ಸ್​’ ಬಿಡುಗಡೆಯಾಗುವ ಸಾಧ್ಯತೆಯಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *