ಉ.ಕ. ಉಸ್ತುವಾರಿ ಸಚಿವ ಕೋಟ-ಸುಮ್ಮನೇ ಯಾಕೆ ನನ್ನನ್ನೂ ನೀವು ಎಳೀತೀರಿ, ನಾನು ನೆಮ್ಮದಿಯಿಂದ ಇದ್ದೇನೆ..

Thumbnail image

ಸುಮ್ಮನೇ ಯಾಕೆ ನನ್ನನ್ನೂ ನೀವು ಎಳೀತೀರಿ, ನಾನು ನೆಮ್ಮದಿಯಿಂದ ಇದ್ದೇನೆ.. ಉಸ್ತುವಾರಿ ಬದಲಾವಣೆಗೆ ಕೋಟ

ರಾಜ್ಯದ 30 ಜಿಲ್ಲೆಗಳಿಗೆ ತವರು ಜಿಲ್ಲೆಯನ್ನು ಹೊರತುಪಡಿಸಿ ಉಸ್ತುವಾರಿಯನ್ನಾಗಿ ಸಚಿವರುಗಳಿಗೆ ಜವಾಬ್ದಾರಿ ನೀಡಲಾಗಿದೆ. ಜಿಲ್ಲೆಯ ಈ ಹಿಂದಿನ ಉಸ್ತುವಾರಿಯಾಗಿದ್ದ ಶಿವರಾಮ ಹೆಬ್ಬಾರ್‌ರೊಂದಿಗೆ ಮಾತನಾಡಿದ್ದು, ಒಟ್ಟಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವ ಕುರಿತು ಚರ್ಚಿಸಿದ್ದೇವೆ..

ಕಾರವಾರ : ಜಿಲ್ಲಾ ಉಸ್ತುವಾರಿ ಸಚಿವರುಗಳ ದಿಢೀರ್ ಬದಲಾವಣೆಯಿಂದಾಗಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರೂ ಸಂತೋಷದಿಂದಲೇ ಜವಾಬ್ದಾರಿ ವಹಿಸಿಕೊಂಡಿರುವುದಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

ಉತ್ತರಕನ್ನಡ ಜಿಲ್ಲಾ ಉಸ್ತುವಾರಿಯಾಗಿ ನೇಮಕವಾದ ಬೆನ್ನಲ್ಲೇ ಜಿಲ್ಲೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವರು ಭಾಗಿಯಾಗಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದರು.

ಉಸ್ತುವಾರಿ ಬದಲಾವಣೆ ವಿಚಾರವಾಗಿ ಕೋಟ ಶ್ರೀನಿವಾಸ್​​ ಪೂಜಾರಿ ಪ್ರತಿಕ್ರಿಯೆ ನೀಡಿರುವುದು..

ರಾಜ್ಯದ 30 ಜಿಲ್ಲೆಗಳಿಗೆ ತವರು ಜಿಲ್ಲೆಯನ್ನು ಹೊರತುಪಡಿಸಿ ಉಸ್ತುವಾರಿಯನ್ನಾಗಿ ಸಚಿವರುಗಳಿಗೆ ಜವಾಬ್ದಾರಿ ನೀಡಲಾಗಿದೆ. ಜಿಲ್ಲೆಯ ಈ ಹಿಂದಿನ ಉಸ್ತುವಾರಿಯಾಗಿದ್ದ ಶಿವರಾಮ ಹೆಬ್ಬಾರ್‌ರೊಂದಿಗೆ ಮಾತನಾಡಿದ್ದು, ಒಟ್ಟಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವ ಕುರಿತು ಚರ್ಚಿಸಿದ್ದೇವೆ.

ಉಸ್ತುವಾರಿ ಎನ್ನುವುದು ಆಯಾ ಜಿಲ್ಲೆಯ ಪ್ರಗತಿ,ಅಭಿವೃದ್ಧಿ,ಸಂಘಟನಾತ್ಮಕ ವಿಚಾರಗಳಿಗೆ ಅನುಕೂಲವಾಗುವಂತೆ ನೇಮಿಸಿರುವುದಾಗಿದೆ. ನಮ್ಮ ಅಭಿವೃದ್ಧಿ ಕಾರ್ಯ ಇನ್ನೊಂದು ಜಿಲ್ಲೆಗೂ ಸಿಗಲಿ ಎನ್ನುವ ಉದ್ದೇಶದಿಂದ ತವರು ಜಿಲ್ಲೆಯನ್ನು ಹೊರತುಪಡಿಸಿ ನೀಡಲಾಗಿದೆ. ನಮಗೆ ಇದರಿಂದ ಯಾವುದೇ ಅಸಮಾಧಾನವಿಲ್ಲ, ನೆಮ್ಮದಿಯಿಂದ ಇದ್ದೇವೆ ಎಂದರು.

ವಲಸಿಗರು ಪಕ್ಷಕ್ಕೆ ಬಂದು ಸಚಿವರಾಗಿರುವ ಹಿನ್ನೆಲೆ ಅಸಮಾಧಾನ ವ್ಯಕ್ತವಾಗಿದೆ ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿ, ಹಾಲಿಗೆ ಸಕ್ಕರೆ ಹಾಕಿದರೆ ಅದು ಸಕ್ಕರೆಯನ್ನೂ ತನ್ನೊಳಗೆ ಕರಗಿಸಿಕೊಳ್ಳುತ್ತದೆ. ಅದರಂತೆ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ನಮ್ಮೊಂದಿಗೆ ಬಂದವರನ್ನು ಗೌರವಿಸುವುದು ನಮ್ಮ ಕರ್ತವ್ಯವಾಗಿದ್ದು,ಇದರಲ್ಲಿ ವಲಸೆ,ಮೂಲ ಎನ್ನುವ ವ್ಯತ್ಯಾಸವಿಲ್ಲ. ಎಲ್ಲರೂ ಒಟ್ಟಾಗಿದ್ದೇವೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ದೇವನಹಳ್ಳಿ ರೆಸಾರ್ಟ್‌‌ನಲ್ಲಿ ಬಿಜೆಪಿ‌ ಮುಖಂಡರು ಡಿಕೆಶಿ ಭೇಟಿಯಾದ ವಿಚಾರವಾಗಿ ಪ್ರತಿಕ್ರಿಯಿಸಿ, ರೆಸಾರ್ಟಿಗೆ ಯಾರೋ ಹೋಗ್ತಾರೆ, ಮತ್ತ್ಯಾರೋ ಬರ್ತಾರೆ. ಅಲ್ಲಿ ಇನ್ನೊಂದು ಪಕ್ಷದವರು ಸಿಕ್ಕ ಸಂದರ್ಭದಲ್ಲಿ ಭೇಟಿಯಾಗೋದು ತಪ್ಪಾ?, ಅದರಿಂದ ನಮ್ಮವರು ಪಕ್ಷ ತೊರೆದು ಹೋಗುತ್ತಾರೆ ಎನ್ನುವುದು ಸರಿಯಲ್ಲ. ಅವರು ವಿರೋಧ ಪಕ್ಷದಲ್ಲಿದ್ದವರು ಏನೇನೋ ಹೇಳುತ್ತಾರೆ. ಅದನ್ನೆಲ್ಲಾ ಗಂಭೀರವಾಗಿ ಪರಿಗಣಿಸುವುದು ಸಾಧ್ಯವಿಲ್ಲ.

ಹಲವು ಬಾರಿ ಶಾಸಕರಾದವರು ತಮ್ಮನ್ನು ಮಂತ್ರಿ ಮಾಡಿ ಎಂದು ಬೇಡಿಕೆಯಿಡುವುದು ತಪ್ಪಲ್ಲ. ಆದರೆ, ಸಚಿವರನ್ನು ಮಾಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರವಾಗಿದ್ದು ಸಚಿವ ಸಂಪುಟ ವಿಸ್ತರಣೆ, ಪುನರ್‌ ರಚನೆ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದೆ ಎಂದಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *