ಉಡುಪಿ ಹಿಜಾಬ್ ವಿವಾದ ತಾರಕಕ್ಕೆ: ಕಾಲೇಜು ವರ್ತನೆ ವಿರುದ್ಧ ಶಶಿ ತರೂರ್, ಮೆಹಬೂಬಾ ಮುಫ್ತಿ ಕಿಡಿ

ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಿಂಗಳಿಂದ ನಡೆಯುತ್ತಿರುವ ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದ ಇದೀಗ ಮತ್ತಷ್ಟು ತಾರಕಕ್ಕೇರಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿ ಪ್ರಾಂಶುಪಾಲರು…

File photo

ಉಡುಪಿ: ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಿಂಗಳಿಂದ ನಡೆಯುತ್ತಿರುವ ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದ ಇದೀಗ ಮತ್ತಷ್ಟು ತಾರಕಕ್ಕೇರಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿ ಪ್ರಾಂಶುಪಾಲರು ಕಾಲೇಜಿನ ಗೇಟನ್ನು ಬಂದ್‌ ಮಾಡಿದ ಹಿನ್ನೆಲೆಯಲ್ಲಿ ಘಟನೆ ಸಂಬಂಧ ಕಾಂಗ್ರೆಸ್ ನಾಯಕ ಶಶಿ ತರೂರ್ ಹಾಗೂ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಕಿಡಿಕಾರಿದ್ದಾರೆ. 

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮೆಹಬೂಬಾ ಮುಫ್ತಿಯವರು, ಸರ್ಕಾರ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ನೀಡಿದ ಬೇಟಿ ಬಚಾವೋ ಬೇಟಿ ಪಢಾವೋ ಘೋಷವಾಕ್ಯಗಳೆಲ್ಲಾ ಬರೀ ಟೊಳ್ಳು. ಮುಸ್ಲಿಂ ಹೆಣ್ಣುಮಕ್ಕಳು ತಮ್ಮ ಸಾಂಪ್ರದಾಯಿಕ ಉಡುಗೆ ಧರಿಸಿದ್ದಕ್ಕೆ ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. 

https://imasdk.googleapis.com/js/core/bridge3.496.0_en.html#goog_1646016992

ತರೂರ್ ಟ್ವೀಟ್ ಮಾಡಿ, ಪ್ರತಿಯೊಬ್ಬರೂ ತಮಗೆ ಬೇಕಾದುದನ್ನು ಧರಿಸಲು ಸ್ವತಂತ್ರರು ಎಂಬುದು ಭಾರತದ ಶಕ್ತಿಯಾಗಿದೆ. ಹಿಜಾಬ್ ಅನ್ನು ಅನುಮತಿಸದಿದ್ದರೆ, ಸಿಖ್ ಪೇಟದ ಬಗ್ಗೆ ಏನು? ಹಿಂದೂಗಳ ಹಣೆಯ ಗುರುತು? ಕ್ರಿಶ್ಚಿಯನ್ನರ ಶಿಲುಬೆಗೆ ಯಾಕೆ ಅನುಮತಿ ನೀಡಲಾಗಿದೆ ವಿದ್ಯಾರ್ಥಿನಿಯರನ್ನು ಒಳಗೆ ಬಿಡಿ,ಓದಲು ಬಿಡಿ, ವಸ್ತ್ರಧಾರಣೆಯ ನಿರ್ಧಾರ ಸಂತ್ರಸ್ಥರು ನಿರ್ಧರಿಸಲಿ ಎಂದು ತಿಳಿಸಿದ್ದಾರೆ.

ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿದ್ದಕ್ಕೆ ಪ್ರತಿಯಾಗಿ ಹಿಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಾಗ ಗೊಂದಲದ ವಾತಾವರಣ ಉಂಟಾಗಿತ್ತು. ತಕ್ಷಣವೇ ಕಾಲೇಜಿಗೆ ದೌಡಾಯಿಸಿದ್ದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಅವರು ಶಿಕ್ಷಣ ಸಚಿವರಿಗೆ ಕರೆ ಮಾಡಿ, ಅವರ ಸೂಚನೆಯಂತೆ ಹಿಜಾಬ್‌ ಧರಿಸದೆ ಕೇವಲ ಸಮವಸ್ತ್ರ ಧರಿಸಿದವರಿಗೆ ಮಾತ್ರ ಕಾಲೇಜು ಪ್ರವೇಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದರು. ಆದರೂ ಗುರುವಾರ 22 ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಯೇ ಕಾಲೇಜು ಪ್ರವೇಶಿಸಲು ಯತ್ನಿಸಿದರು. ಈ ವೇಳೆ ಅವರನ್ನು ಗೇಟಿನ ಬಳಿಯೇ ಕಾಲೇಜು ಪ್ರಾಂಶುಪಾಲರು, ಸಿಬ್ಬಂದಿ ತಡೆದರು. ಈ ವಿದ್ಯಾರ್ಥಿನಿಯರು ಮಧ್ಯಾಹ್ನವರೆಗೂ ಕಾಲೇಜಿನ ಗೇಟಿನ ಹೊರಗೆ ನಿಂತು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿ, ಮನೆಗೆ ತೆರಳಿದ್ದಾರೆ.

ನಾವು ಅನೇಕ ತಿಂಗಳಿಂದ ಹಿಜಾಬ್‌ ಧರಿಸಿಕೊಂಡೇ ಕಾಲೇಜಿಗೆ ಬರುತ್ತಿದ್ದೇವೆ. ಈಗ ಏಕಾಏಕಿ ನಿರ್ಬಂಧ ಹೇರಿರುವುದು, ಶೈಕ್ಷಣಿಕ ವರ್ಷ ಮುಗಿಯಲು ತಿಂಗಳಿರುವಾಗ ತರಗತಿಗೆ ಪ್ರವೇಶ ನೀಡದಿರುವುದು ಸರಿಯಲ್ಲ, ನಮ್ಮ ಭವಿಷ್ಯದ ಬಗ್ಗೆ ಗಮನ ಹರಿಸಿ, ನಮ್ಮ ಧಾರ್ಮಿಕ ಹಕ್ಕಿನಂತೆ ಹಿಜಾಬ್‌ ಧರಿಸಿ ತರಗತಿಗೆ ಪ್ರವೇಶ ನೀಡಿ ಎಂದು ಆಗ್ರಹಿಸಿ, ಕಾಲೇಜಿನ ಗೇಟಿನ ಹೊರಗೆ ನಿಂತುಕೊಂಡಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *