ಉಡುಪಿ ಹಿಜಾಬ್ ವಿವಾದ ತಾರಕಕ್ಕೆ: ಕಾಲೇಜು ವರ್ತನೆ ವಿರುದ್ಧ ಶಶಿ ತರೂರ್, ಮೆಹಬೂಬಾ ಮುಫ್ತಿ ಕಿಡಿ

ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಿಂಗಳಿಂದ ನಡೆಯುತ್ತಿರುವ ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದ ಇದೀಗ ಮತ್ತಷ್ಟು ತಾರಕಕ್ಕೇರಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿ ಪ್ರಾಂಶುಪಾಲರು…

File photo

ಉಡುಪಿ: ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಿಂಗಳಿಂದ ನಡೆಯುತ್ತಿರುವ ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದ ಇದೀಗ ಮತ್ತಷ್ಟು ತಾರಕಕ್ಕೇರಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿ ಪ್ರಾಂಶುಪಾಲರು ಕಾಲೇಜಿನ ಗೇಟನ್ನು ಬಂದ್‌ ಮಾಡಿದ ಹಿನ್ನೆಲೆಯಲ್ಲಿ ಘಟನೆ ಸಂಬಂಧ ಕಾಂಗ್ರೆಸ್ ನಾಯಕ ಶಶಿ ತರೂರ್ ಹಾಗೂ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಕಿಡಿಕಾರಿದ್ದಾರೆ. 

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮೆಹಬೂಬಾ ಮುಫ್ತಿಯವರು, ಸರ್ಕಾರ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ನೀಡಿದ ಬೇಟಿ ಬಚಾವೋ ಬೇಟಿ ಪಢಾವೋ ಘೋಷವಾಕ್ಯಗಳೆಲ್ಲಾ ಬರೀ ಟೊಳ್ಳು. ಮುಸ್ಲಿಂ ಹೆಣ್ಣುಮಕ್ಕಳು ತಮ್ಮ ಸಾಂಪ್ರದಾಯಿಕ ಉಡುಗೆ ಧರಿಸಿದ್ದಕ್ಕೆ ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. 

https://imasdk.googleapis.com/js/core/bridge3.496.0_en.html#goog_1646016992

ತರೂರ್ ಟ್ವೀಟ್ ಮಾಡಿ, ಪ್ರತಿಯೊಬ್ಬರೂ ತಮಗೆ ಬೇಕಾದುದನ್ನು ಧರಿಸಲು ಸ್ವತಂತ್ರರು ಎಂಬುದು ಭಾರತದ ಶಕ್ತಿಯಾಗಿದೆ. ಹಿಜಾಬ್ ಅನ್ನು ಅನುಮತಿಸದಿದ್ದರೆ, ಸಿಖ್ ಪೇಟದ ಬಗ್ಗೆ ಏನು? ಹಿಂದೂಗಳ ಹಣೆಯ ಗುರುತು? ಕ್ರಿಶ್ಚಿಯನ್ನರ ಶಿಲುಬೆಗೆ ಯಾಕೆ ಅನುಮತಿ ನೀಡಲಾಗಿದೆ ವಿದ್ಯಾರ್ಥಿನಿಯರನ್ನು ಒಳಗೆ ಬಿಡಿ,ಓದಲು ಬಿಡಿ, ವಸ್ತ್ರಧಾರಣೆಯ ನಿರ್ಧಾರ ಸಂತ್ರಸ್ಥರು ನಿರ್ಧರಿಸಲಿ ಎಂದು ತಿಳಿಸಿದ್ದಾರೆ.

ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿದ್ದಕ್ಕೆ ಪ್ರತಿಯಾಗಿ ಹಿಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಾಗ ಗೊಂದಲದ ವಾತಾವರಣ ಉಂಟಾಗಿತ್ತು. ತಕ್ಷಣವೇ ಕಾಲೇಜಿಗೆ ದೌಡಾಯಿಸಿದ್ದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಅವರು ಶಿಕ್ಷಣ ಸಚಿವರಿಗೆ ಕರೆ ಮಾಡಿ, ಅವರ ಸೂಚನೆಯಂತೆ ಹಿಜಾಬ್‌ ಧರಿಸದೆ ಕೇವಲ ಸಮವಸ್ತ್ರ ಧರಿಸಿದವರಿಗೆ ಮಾತ್ರ ಕಾಲೇಜು ಪ್ರವೇಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದರು. ಆದರೂ ಗುರುವಾರ 22 ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಯೇ ಕಾಲೇಜು ಪ್ರವೇಶಿಸಲು ಯತ್ನಿಸಿದರು. ಈ ವೇಳೆ ಅವರನ್ನು ಗೇಟಿನ ಬಳಿಯೇ ಕಾಲೇಜು ಪ್ರಾಂಶುಪಾಲರು, ಸಿಬ್ಬಂದಿ ತಡೆದರು. ಈ ವಿದ್ಯಾರ್ಥಿನಿಯರು ಮಧ್ಯಾಹ್ನವರೆಗೂ ಕಾಲೇಜಿನ ಗೇಟಿನ ಹೊರಗೆ ನಿಂತು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿ, ಮನೆಗೆ ತೆರಳಿದ್ದಾರೆ.

ನಾವು ಅನೇಕ ತಿಂಗಳಿಂದ ಹಿಜಾಬ್‌ ಧರಿಸಿಕೊಂಡೇ ಕಾಲೇಜಿಗೆ ಬರುತ್ತಿದ್ದೇವೆ. ಈಗ ಏಕಾಏಕಿ ನಿರ್ಬಂಧ ಹೇರಿರುವುದು, ಶೈಕ್ಷಣಿಕ ವರ್ಷ ಮುಗಿಯಲು ತಿಂಗಳಿರುವಾಗ ತರಗತಿಗೆ ಪ್ರವೇಶ ನೀಡದಿರುವುದು ಸರಿಯಲ್ಲ, ನಮ್ಮ ಭವಿಷ್ಯದ ಬಗ್ಗೆ ಗಮನ ಹರಿಸಿ, ನಮ್ಮ ಧಾರ್ಮಿಕ ಹಕ್ಕಿನಂತೆ ಹಿಜಾಬ್‌ ಧರಿಸಿ ತರಗತಿಗೆ ಪ್ರವೇಶ ನೀಡಿ ಎಂದು ಆಗ್ರಹಿಸಿ, ಕಾಲೇಜಿನ ಗೇಟಿನ ಹೊರಗೆ ನಿಂತುಕೊಂಡಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *