ಹಾಲಪ್ಪ, ಬೇಳೂರು ಧರ್ಮಸ್ಥಳ ದೇವರಾಣೆ ಪ್ರಸಂಗ!

ದಶಕದ ನಂತರ ರಾಜ್ಯದ ಮತ್ತಿಬ್ಬರು ರಾಜಕಾರಣಿಗಳು ಧರ್ಮಸ್ಥಳದಲ್ಲಿ ಆಣೆ- ಪ್ರಮಾಣ!

ಸಾಗರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಲೂರು ಗೋಪಾಲಕೃಷ್ಣ ಅವರು ಫೆಬ್ರವರಿ 12 ರಂದು ರಂದು ಧರ್ಮಸ್ಥಳ ದೇವಾಲಯದ ದೇವರ ಮುಂದೆ ಆಣೆ- ಪ್ರಮಾಣ ಮಾಡುವ ಸಾಧ್ಯತೆಯಿದೆ.

Haratalu_Halappa_and_Beluru_Gopalakrishna1

ಶಿವಮೊಗ್ಗ: ಸಾಗರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರು ಫೆಬ್ರವರಿ 12 ರಂದು ರಂದು ಧರ್ಮಸ್ಥಳ ದೇವಾಲಯದ ದೇವರ ಮುಂದೆ ಆಣೆ- ಪ್ರಮಾಣ ಮಾಡುವ ಸಾಧ್ಯತೆಯಿದೆ.

ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ 2011ರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಎಚ್ ಡಿ ಕುಮಾರಸ್ವಾಮಿ ಧರ್ಮಸ್ಥಳದ ದೇವಾಲಯ ಮುಂಭಾಗ ಆಣೆ -ಪ್ರಮಾಣ ಮಾಡುವುದಾಗಿ ಹೇಳಿದ್ದರು. ಆದರೆ, ಯಡಿಯೂರಪ್ಪ ಅವರಿಗೆ ಬೇಡ ಎಂದು ಹೈಕಮಾಂಡ್ ಹೇಳಿದ್ದರಿಂದ ಅದು ನಡೆಯಲಿಲ್ಲ. ಈ ಬಾರಿ ಮಾಡಿ ಶಾಸಕರು ಆಣೆ-ಪ್ರಮಾಣದ ಮಾತುಗಳನ್ನಾಡಿದ್ದಾರೆ.

ಹೊಸನಗರದಲ್ಲಿ ಇತ್ತೀಚಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋಪಾಲಕೃಷ್ಣ, ಸಾಗರ ಮತ್ತು ಹೊಸನಗರ ತಾಲೂಕಿನಲ್ಲಿ ಮರಳು ಲಾರಿ ಮಾಲೀಕರಿಂದ ಹಾಲಪ್ಪ ಕಮೀಷನ್ ಪಡೆಯುತ್ತಿದ್ದಾರೆ . ಒಂದು ವೇಳೆ ಕಮಿಷನ್ ನೀಡದಿದ್ದರೆ ಅಕ್ರಮವಾಗಿ ಮರಳು ಹೊರತೆಗೆಯಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದರು.

 

ಒಂದು ವೇಳೆ ಹಾಲಪ್ಪ ಪ್ರಾಮಾಣಿಕರಾಗಿದ್ದು, ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದರೆ ದೇವರ ಮುಂದೆ ಬಂದು ಪ್ರಮಾಣ ಮಾಡಲಿ. ನನ್ನ ವಿರುದ್ಧ ಹೇಳಿಕೆ ನೀಡುವಂತೆ ಲಾರಿ ಮಾಲೀಕರಿಗೆ ಹಾಲಪ್ಪ ಎತ್ತುಕಟ್ಟುತ್ತಿದ್ದಾರೆ. ಅದರ ಬದಲು ಹಾಲಪ್ಪ ಸ್ವಯಂ ಪ್ರೇರಿತರಾಗಿ ದೇವರ ಮುಂದೆ ಬರಲಿ, ಹಾಲಪ್ಪ ಕಮೀಷನ್ ಪಡೆದಿರುವುದಾಗಿ ನಾನು ಕೂಡಾ ಪ್ರಮಾಣ ಮಾಡುತ್ತೇನೆ ಎಂದು ಗೋಪಾಲಕೃಷ್ಣ ಹೇಳಿದರು.

ಗೋಪಾಲಕೃಷ್ಣ ಹೇಳಿಕೆಗೆ ಬುಧವಾರ ತಿರುಗೇಟು ನೀಡಿದ ಹಾಲಪ್ಪ, ದಿನಾಂಕ ನಿಗದಿಪಡಿಸಲಿ, ಮರಳು ಲಾರಿ ಮಾಲೀಕರಿಂದ ನಾನಗಲಿ ಅಥವಾ ನನ್ನ ಸಂಬಂಧಿಕರಾಗಲಿ ಕಮಿಷನ್ ಪಡೆದಿದ್ದರೆ ದೇವರ ಮುಂದೆ ಪ್ರಮಾಣ ಮಾಡಲು ಸಿದ್ಧವಿರುವುದಾಗಿ ತಿಳಿಸಿದರು. ಪೊಲೀಸರಿಂದಲೂ ನಾನು ಯಾವುದೇ ಹಣ ಪಡೆದಿಲ್ಲ. ಫೆಬ್ರವರಿ 13 ರೊಳಗೆ ದೇವರ ಮುಂದೆ ಪ್ರಮಾಣ ಮಾಡಲು ಸಿದ್ಧವಿರುವುದಾಗಿ ಹಾಲಪ್ಪ ಹೇಳಿದರು. 

ಆದಾಗ್ಯೂ, ಫೆಬ್ರವರಿ 13 ರಂದು ಕುಟುಂಬದ ಕಾರ್ಯಕ್ರಮವೊಂದು ಇರುವುದರಿಂದ ಫೆಬ್ರವರಿ 12 ರಂದು ದೇವರ ಮುಂದೆ ಪ್ರಮಾಣ ಮಾಡಲು ಸಿದ್ಧವಿರುವುದಾಗಿ ಹಾಲಪ್ಪ ಶುಕ್ರವಾರ ಹೇಳಿದ್ದಾರೆ. ಫೆಬ್ರವರಿ 13 ರಂದು ದೇವರ ಮುಂದೆ ಪ್ರಮಾಣ ಮಾಡಲು ತಾವು ಕೂಡಾ ಸಿದ್ಧವಿರುವುದಾಗಿ ಗೋಪಾಲಕೃಷ್ಣ ಮಾಧ್ಯಮಗಳಿಗೆ ತಿಳಿಸಿದರು. ಶಾಸಕರು ಈಗ ದಿನಾಂಕವನ್ನು ಬದಲಾಯಿಸಿದ್ದಾರೆ ಎಂದು ನನಗೆ ತಿಳಿಸಲಾಯಿತು. ಶೀಘ್ರದಲ್ಲೇ ನನ್ನ ಹೇಳಿಕೆಯನ್ನು ನೀಡುತ್ತೇನೆ ಎಂದು ಅವರು ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *