ಅದ್ಧೂರಿ ವಿವಾಹ ನೆರವೇರಿಸಿದ ಕಾರವಾರ ಶಾಸಕಿ ರೂಪಾಲಿ

Thumbnail image

ಶಾಸಕಿ ರೂಪಾಲಿ ನಾಯ್ಕ್‌ ಪುತ್ರನ ಅದ್ಧೂರಿ ಕಲ್ಯಾಣ : ಪರ್ಭತ್ ಕೈ ಹಿಡಿದ ಮೈಸೂರಿನ ರೇಖಾ

ಸುಮಾರು ಐದು ಎಕರೆ ವಿಶಾಲ ಪ್ರದೇಶದಲ್ಲಿ ಸಿದ್ಧಪಡಿಸಲಾಗಿದ್ದ ವಿವಾಹ ಮಹೋತ್ಸವದ ಮಂಟಪ ಮದುವೆಗೆ ಆಗಮಿಸಿದ್ದವರ ಕಣ್ಮನ ಸೆಳೆಯಿತು. ಸುಮಾರು 30ಕ್ಕೂ ಅಧಿಕ ತರಹೇವಾರಿ ಖಾದ್ಯಗಳ ಭೂರಿಭೋಜನವನ್ನ ಅತಿಥಿಗಳಿಗಾಗಿ ಉಣಬಡಿಸಲಾಯಿತು..

ಕಾರವಾರ : ಮದುವೆ ಎನ್ನುವುದು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎನ್ನುತ್ತಾರೆ. ಆದರೆ, ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ತಮ್ಮ ಮಗನ ಮದುವೆಗಾಗಿ ಸ್ವರ್ಗವನ್ನೇ ಧರೆಗಿಳಿಸಿದ್ದರು.

ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ್‌ರ ಮುದ್ದಿನ ಮಗ, ಪರ್ಭತ್ ನಾಯ್ಕ್ ಇಂದು ಕಾರವಾರ ತಾಲೂಕಿನಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಗ್ರಾಮೀಣ ಪ್ರದೇಶವಾದ ನಿವಳಿಯಲ್ಲಿ ನಡೆದ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ಮೈಸೂರಿನ ಬೆಡಗಿ ರೇಖಾಳ ಕೈ ಹಿಡಿದರು.

ಶಾಸಕಿ ರೂಪಾಲಿ ನಾಯ್ಕ್‌ ಪುತ್ರನ ಅದ್ಧೂರಿ ಕಲ್ಯಾಣೋತ್ಸವ..

ವಿವಿಧ ಬಗೆಯ ಹೂವುಗಳಿಂದ ಅಲಂಕೃತಗೊಂಡಿದ್ದ ಅದ್ಧೂರಿ ಮಂಟಪದಲ್ಲಿ, ಮೂವರು ವೈದಿಕರ ನೇತೃತ್ವದಲ್ಲಿ ನಡೆದ ಮದುವೆಯ ವಿಧಿ- ವಿಧಾನದಲ್ಲಿ ರೇಖಾಳೊಂದಿಗೆ ಪರ್ಭತ್ ಸಪ್ತಪದಿ ತುಳಿದರು.

ಮಂಗಳವಾದ್ಯ, ಮೈಸೂರಿನ ಇಂಗ್ಲಿಷ್ ಬ್ಯಾಂಡ್, ಹೊನ್ನಾವರ ಹಡಿನಬಾಳದ ಬ್ಯಾಂಡ್ ಸೆಟ್​​ಗಳ ಜೊತೆಗೆ ಖ್ಯಾತ ಬಹುಭಾಷಾ ಗಾಯಕ ವಿಜಯ ಪ್ರಕಾಶ್-ಅನುರಾಧಾ ಭಟ್ ಅವರ ಆರ್ಕೆಸ್ಟ್ರಾ ವಿವಾಹ ಮಹೋತ್ಸವದಲ್ಲಿ ಮೆರುಗು ನೀಡಿದವು.

ಈ ಅದ್ಧೂರಿ ವಿವಾಹಕ್ಕೆ ಹತ್ತಾರು ಸಚಿವ, ಶಾಸಕರು, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅತಿಥಿ, ಗಣ್ಯರು, ಕುಟುಂಬಸ್ಥರು, ಬಂಧು- ಬಾಂಧವರು, ಗ್ರಾಮಸ್ಥರು ಸಾಕ್ಷಿಯಾದರು.

ಪ್ರಮುಖವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರುಗಳಾದ ಶಿವರಾಮ ಹೆಬ್ಬಾರ್, ಜಗದೀಶ್ ಶೆಟ್ಟರ್, ಕೋಟ ಶ್ರೀನಿವಾಸ್ ಪೂಜಾರಿ, ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ವಿಧಾನ ಪರಿಷತ್ ಸದಸ್ಯರಾದ ಗಣಪತಿ ಉಳ್ವೇಕರ್, ಶಾಂತರಾಮ ಸಿದ್ದಿ, ಚಿತ್ರನಟಿ, ಬಿಜೆಪಿ ಮಹಿಳಾ ಮುಖಂಡೆ ತಾರಾ ಅನುರಾಧಾ, ಶಾಸಕ ಸುನೀಲ್ ನಾಯ್ಕ ಸೇರಿದಂತೆ ಅನೇಕರು ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡರು.

ಸುಮಾರು ಐದು ಎಕರೆ ವಿಶಾಲ ಪ್ರದೇಶದಲ್ಲಿ ಸಿದ್ಧಪಡಿಸಲಾಗಿದ್ದ ವಿವಾಹ ಮಹೋತ್ಸವದ ಮಂಟಪ ಮದುವೆಗೆ ಆಗಮಿಸಿದ್ದವರ ಕಣ್ಮನ ಸೆಳೆಯಿತು. ಸುಮಾರು 30ಕ್ಕೂ ಅಧಿಕ ತರಹೇವಾರಿ ಖಾದ್ಯಗಳ ಭೂರಿಭೋಜನವನ್ನ ಅತಿಥಿಗಳಿಗಾಗಿ ಉಣಬಡಿಸಲಾಯಿತು.

ಅಂಕೋಲಾ ಮತ್ತು ಕಾರವಾರದಿಂದ ಸಾರಿಗೆ ಬಸ್, ಖಾಸಗಿ ಬಸ್​​ಗಳ ವ್ಯವಸ್ಥೆಯನ್ನೂ ಮಾಡಲಾಗಿತ್ತು. ವಾಹನಗಳ ಪಾರ್ಕಿಂಗ್​​ಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಬಿಜೆಪಿಯ ಕಾರ್ಯಕರ್ತರು, ಸ್ಥಳೀಯ ಯುವಕರು ಸ್ವಯಂಸೇವಕರಾಗಿ ಅತಿಥಿ ಗಣ್ಯರನ್ನು ಸ್ವಾಗತಿಸಿ, ಬೀಳ್ಕೊಟ್ಟರು. ಕಾರವಾರ ನಗರದಿಂದ ರಸ್ತೆಯುದ್ದಕ್ಕೂ, ವಿವಾಹ ಮಹೋತ್ಸವದ ಮಂಟದಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *