ಮತ್ತೆ ಬೆತ್ತಲಾದ ಕೋಮುವಾದಿ ಹೆಗಡೆ-ಶಾರುಖ್‌ ಖಾನ್‌ ಪ್ರಕರಣ!

ಶಾರುಖ್ ಖಾನ್ ಲತಾ ಮಂಗೇಶ್ಕರ್ ಮೃತದೇಹದ ಮೇಲೆ ಉಗುಳಿದರೇ? ವಾಸ್ತವ ಏನು ಹೇಳುತ್ತದೆ? ಫ್ಯಾಕ್ಟ್ ಚೆಕ್

ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ ನಿಧನರಾಗಿದ್ದು ಅವರ ಅಂತ್ಯಕ್ರಿಯೆ ನಿನ್ನೆ ಮುಂಬೈಯ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತ್ತು.

https://www.youtube.com/shorts/X4WGoA42TDo
Sharukh Khan

https://www.youtube.com/shorts/X4WGoA42TDo

ಮುಂಬೈ/ಬೆಂಗಳೂರು: ಭಾರತದ ಗಾನಕೋಗಿಲೆ(Nightingale) ಲತಾ ಮಂಗೇಶ್ಕರ್(Lata Mangeshkar) ನಿಧನರಾಗಿದ್ದು ಅವರ ಅಂತ್ಯಕ್ರಿಯೆ ನಿನ್ನೆ ಮುಂಬೈಯ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತ್ತು.

ಅದಕ್ಕೂ ಮುನ್ನ ಸಾವಿರಾರು ಮಂದಿ ಅವರ ಅಂತಿಮ ದರ್ಶನ ಪಡೆದಿದ್ದರು. ದೇಶದ ಪ್ರಧಾನಿ ಸೇರಿದಂತೆ ರಾಜಕೀಯ ಮುಖಂಡರು, ಚಿತ್ರರಂಗದ ಕಲಾವಿದರು, ಕ್ರಿಕೆಟ್ ದಿಗ್ಗಜರು, ಕ್ರೀಡಾಪಟುಗಳು ಹೀಗೆ ಹಲವರು ಶಿವಾಜಿ ಪಾರ್ಕ್ ಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದರು.

ಅವರಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್(Sharukh Khan) ಕೂಡ ಇದ್ದರು. ಕಳೆದ ವರ್ಷ ಅಕ್ಟೋಬರ್ 2ರಂದು ಅವರ ಪುತ್ರ ಆರ್ಯನ್ ಖಾನ್ ಡ್ರಗ್ ಕೇಸಿನಲ್ಲಿ ಸಿಕ್ಕಿಬಿದ್ದು ಜೈಲಿಗೆ ಹೋಗಿ ಬಂದ ನಂತರ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡದ್ದು ಕಡಿಮೆಯೇ, ಸೋಷಿಯಲ್ ಮೀಡಿಯಾದಲ್ಲಿ ಕೂಡ ಸಕ್ರಿಯವಾಗಿಲ್ಲ.

ನಿನ್ನೆ ತಮ್ಮ ಮ್ಯಾನೇಜರ್ ಪೂಜಾ ದದ್ಲಾನಿ ಜೊತೆ ಶಿವಾಜಿ ಪಾರ್ಕ್ ಗೆ ಬಂದ ಶಾರೂಕ್ ಖಾನ್ ಎಲ್ಲರಂತೆ ಪುಷ್ಪಗುಚ್ಛವಿರಿಸಿ ಎರಡೂ ಕೈಗಳನ್ನು ಮೇಲೆತ್ತಿ ದುವಾ ಮಾಡಿದ್ದರು(ಇಸ್ಲಾಂ ಧರ್ಮದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುವ ರೀತಿ), ಅವರ ಮ್ಯಾನೇಜರ್ ಪೂಜಾ ದದ್ಲಾನಿ(Pooja Dadlani) ಹಿಂದೂ ಸಂಪ್ರದಾಯದ ಪ್ರಕಾರ ಕೈಮುಗಿದಿದ್ದರು. ಇದು ಟ್ವಿಟ್ಟರ್, ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. 

ಈ ಬಗ್ಗೆ ಅನಂತಕುಮಾರ ಹೆಗಡೆ ಮೌನವಹಿಸಿದ್ದೇಕೆ?

ಅದಷ್ಟೇ ಅಲ್ಲ ದುವಾ ಆದ ಬಳಿಕ ಶಾರೂಕ್ ಖಾನ್ ಮಾಸ್ಕ್ ತೆಗೆದು ಬಾಯಿಂದ ಕೆಳಗೆ ಮೃತದೇಹದ ಮೇಲೆ  ಉಗುಳುವಂತೆ ವಿಡಿಯೊದಲ್ಲಿ ಕಾಣಿಸುತ್ತಿದ್ದು ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. 

ಶಾರೂಕ್ ಖಾನ್, ಲತಾ ಮಂಗೇಶ್ಕರ್ ಮೃತದೇಹದ ಮೇಲೆ ಉಗುಳಿ ಅವಮಾನ ಮಾಡಿದರೆ ಎಂಬ ಅನುಮಾನ ಕಾಡುತ್ತಿದೆ. ಬಿಜೆಪಿ ನಾಯಕರು ಶಾರೂಕ್ ಖಾನ್ ನಡೆಯನ್ನು ಸಾಕಷ್ಟು ಟೀಕೆ ಮಾಡುತ್ತಿದ್ದಾರೆ. ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ(MP Ananth Kumar Hegde), ಬಾಲಿವುಡ್ ಖಾನ್ ಗಳ ದರಿದ್ರ ಮನಸ್ಥಿತಿಯೇ ಹೀಗೆ, ತಮ್ಮ ಅಸಹಜ ನಡವಳಿಕೆಯಿಂದ ದೇಶದ ಗಮನ ತಮ್ಮತ್ತ ಸೆಳೆಯುವುದು, ಪ್ರಚಾರದ ತೆವಲು. ಸಂಪ್ರದಾಯದ ಹೆಸರಿನಲ್ಲಿ ಅನಿಷ್ಟಗಳನ್ನು ಮಾಡುವುದು, ರಾಷ್ಟ್ರಧ್ವಜವನ್ನು ಹೊದಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಶವದ ಮೇಲೆ ಉಗುಳುವುದು, ಅವರ ಹೀನ ಮನಸ್ಥಿತಿಯನ್ನು ತೋರಿಸುತ್ತದೆ ಎಂದಿದ್ದಾರೆ. 

https://www.youtube.com/shorts/X4WGoA42TDo

ವಾಸ್ತವ ಏನು ಎಂದು ಪರೀಕ್ಷೆ ಮಾಡಿ ನೋಡಿದಾಗ ಕೆಲವರು ಹೇಳುವುದು ಹೀಗೆ: ಇಸ್ಲಾಂ ಧರ್ಮದಲ್ಲಿ ಈ ಪದ್ಧತಿಯಿದೆಯಂತೆ. ಇಸ್ಲಾಂನಲ್ಲಿ, ದುಷ್ಟ ಶಕ್ತಿಗಳು ಅಥವಾ ‘ಸೈತಾನ’ನನ್ನು ದೂರವಿಡಲು ಹೀಗೆ ಗಾಳಿಯಲ್ಲಿ ಊದಲಾಗುತ್ತದೆ.

ಮತ್ತೊಬ್ಬರು ಟ್ವೀಟ್ ಮಾಡಿ, ಶಾರೂಕ್ ಖಾನ್ ಉಗುಳಲಿಲ್ಲ, ಅವರು ತಮ್ಮ ಧರ್ಮದ ಪ್ರಕಾರ ಲತಾ ಮಂಗೇಶ್ಕರ್ ಅವರಿಗೆ ಯಾವುದೇ ಕೆಟ್ಟದ್ದು ಆಗದಿರಲಿ ಎಂದು ಆ ರೀತಿ ಗಾಳಿಯಲ್ಲಿ ಊದಿದ್ದಾರೆ. ಜನರು ಇದನ್ನು ಒಳ್ಳೆಯ ರೀತಿಯಿಂದ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಮತ್ತೊಬ್ಬರು, ಶಾರೂಕ್ ಖಾನ್ ಲತಾ ದೀದಿ ಮೃತದೇಹದ ಮುಂದೆ ದುವಾ ಓದಿ ಮುಂದಿನ ಜೀವನದಲ್ಲಿ ರಕ್ಷಣೆ ಸಿಗಲಿ ಎಂದು ಕಳೇಬರದ ಎದುರು ಊದಿ ಉಗುಳಿದ್ದಾರೆ. ಇದರಲ್ಲಿ ಯಾವುದೇ ಅಪಾರ್ಥ, ಕೆಟ್ಟ ನಡತೆಯಿಲ್ಲ ಎಂದಿದ್ದಾರೆ. (kpc)

https://www.youtube.com/shorts/X4WGoA42TDo

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *