ನಂಬಿಕೆ,ಸೌಹಾರ್ದತೆಯ ಬೀರಗುಂಡಿ ಭೂತೇಶ್ವರ ಜಾತ್ರೆ

ಜಾತ್ರೆ,ಹಬ್ಬಗಳಲ್ಲಿ ಜನರಿಗೆ ರಕ್ಷಣೆ ಭದ್ರತೆ ನೀಡುವ ಪೊಲೀಸರು ಜಾತ್ರೆ ನಡೆಸಿದರೆ ಹೇಗಿರುತ್ತೆ ಎನ್ನುವ ಕತೂಹಲವಿದ್ದವರು ಈ ಸ್ಟೋರಿಯನ್ನು ಕಡ್ಡಾಯವಾಗಿ ಓದಲೇಬೇಕು. ಹೌದು ಇದು  ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಬೀರಗುಂಡಿ ಭೂತೇಶ್ವರ ಜಾತ್ರೆ, ಈ ಜಾತ್ರೆಯ ವಿಶೇಶವೆಂದರೆ ಇಲ್ಲಿ ಜಾತ್ರೆ ಸಂಘಟಕರು ಪೊಲೀಸರು.

ಈ ದಿನ ಇಲ್ಲಿ ಪೊಲೀಸರು ಸಮವಸ್ತ್ರ ತೊಡದೆ ಜಾತ್ರೆಯ ಭಜಕರಾಗಿ ಕೆಲಸಮಾಡುತ್ತಾರೆ. ಈ ಜಾತ್ರೆಯನ್ನು ಪೊಲೀಸರೇ ಯಾಕೆ ನಡೆಸುತ್ತಾರೆ ಎನ್ನುವ ಪ್ರಶ್ನೆ ಏಳುವುದು ಸಹಜ, ಅದಕ್ಕೂ ಒಂದು ಚರಿತ್ರೆಯಿದೆ. ಹಲವು ವರ್ಷಗಳ ಹಿಂದೆ ಈಗ ಪೊಲೀಸ್‌ ಠಾಣೆ ಇರುವ ಪ್ರದೇಶದಲ್ಲಿ ಈ ಭೂತೇಶ್ವರ ದೇವರಿದ್ದಿತ್ತಂತೆ ನಂತರ ಈ ಪ್ರದೇಶದಲ್ಲಿ ಪೊಲೀಸ್‌ ಠಾಣೆ ನಿರ್ಮಾಣವಾದ ಮೇಲೆ ಸ್ಥಳಾಂತರವಾದ ಭೂತೇಶ್ವರ ದೇವರಿಗೆ  ಪೂಜಿಸಿ ಹರಕೆ ಹೊತ್ತುಕೊಂಡರೆ ಕಳ್ಳರನ್ನು ಹಿಡಿಯುವುದು ಸೇರಿದಂತೆ ಪೊಲೀಸರ ಕೆಲಸಗಳೆಲ್ಲಾ ಸರಾಗವಾಗಿ ಆಗುತಿದ್ದವಂತೆ.
ಇಂಥ ನಂಬಿಕೆ ಕಾರಣಕ್ಕೆ ಪೊಲೀಸರು ಸಂಘಟಿಸಲು ಪ್ರಾರಂಭಿಸಿದ ಈ ಜಾತ್ರೆಗೆ ಈಗ ೩೦ ವರ್ಷ ಕಳೆದಿದೆ.

ಪ್ರತಿವರ್ಷ ಹೊಸವರ್ಷದ ಒಂದು ದಿನ ನಡೆಯುವ ಈ ಜಾತ್ರೆಯಲ್ಲಿ ಪೊಲೀಸರು ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕೂಡಾ ಮಾಡುತ್ತಾರೆ. ಇಂದು ನಡೆದ ಈ ಜಾತ್ರೆಯಲ್ಲಿ ಪಾಲ್ಗೊಂಡ ಪೊಲೀಸ್‌ ಅಧಿಕಾರಿಗಳು ಜಾತ್ರೆಗೆ ಬಂದವರಿಗೆ ಅಡಿಗೆ ಬಡಿಸಿ,ಜನರೊಂದಿಗೆ ತಾವೂ ಬೆರೆತು ಊಟ ಮಾಡಿದರು.
ಹೀಗೆ ದೇವರಿಗೆ ಪೂಜಿಸಿ, ಅನ್ನಸಂತರ್ಪಣೆ ಮಾಡಿ ಸಾರ್ವಜನಿಕರೊಂದಿಗೆ ಬೆರೆತರೆ ಜನಸ್ನೇಹಿ ಪೊಲೀಸ್‌ ಉದ್ದೇಶವೂ ಈಡೇರಿದಂತಾಗುತ್ತದೆ ಎನ್ನುವುದು ಇಲಾಖೆಯ ಅಭಿಮತ.ಪೊಲೀಸರೇ ನಡೆಸುವ ಈ ಜಾತ್ರೆಗೆ ಎಲ್ಲಾ ಸಹಕಾರ ನೀಡುವ ಸ್ಥಳಿಯರು ಪೊಲೀಸರು,ಅವರ ಕುಟುಂಬದೊಂದಿಗೆ ಬೆರೆತು ಸಂಬ್ರಮಿಸುತ್ತಾರೆ. ದಿನಂಪ್ರತಿ ಜಾತ್ರೆ, ಹಬ್ಬ,ಕಾರ್ಯಕ್ರಮಗಳಿಗೆ ರಕ್ಷಣೆ ನೀಡುವ ಪೊಲೀಸರು ಈ  ಜಾತ್ರೆಯಲ್ಲಿ ಸಮವಸ್ತ್ರ,ಇಲಾಖೆಯ ರೀತಿ ರಿವಾಜುಗಳನ್ನು ಬಿಟ್ಟು ಜನಸಾಮಾನ್ಯರಂತೆ ಪಾಲ್ಗೊಳ್ಳುವುದರಿಂದ ಸ್ಥಳೀಯರಿಗೂ ಪೊಲೀಸರ ಬಗ್ಗೆ ಭಿನ್ನ ಭಾವ ಉಂಟಾಗುತ್ತದೆ. ನಂಬಿಕೆ,ಸಾಹಾರ್ದತೆ,ಸಮಾಧಾನಗಳ ಹಿನ್ನೆಲೆಯಲ್ಲಿ ಪೊಲೀಸರ ಸಂಘಟನೆಯಲ್ಲಿ ನಡೆಯುವ ಈ ಜಾತ್ರೆ ರಾಜ್ಯದ ಅಪರೂಪದ ಪೊಲೀಸ್‌ ಜಾತ್ರೆಗಳಲ್ಲಿ ಒಂದು ಎನ್ನಲಾಗಿದೆ. ಈ ಜಾತ್ರೆಯಲ್ಲಿ ಪೊಲೀಸರೊಂದಿಗೆ ಇತರ ಇಲಾಖೆಯ ಸಿಬ್ಬಂದಿಗಳೂ ಸಾರ್ವಜನಿಕರಂತೆ ಬೆರೆತು ಜಾತ್ರೆ ಆಚರಿಸುವುದು ಬೀರಗುಂಡಿ ಭೂತೇಶ್ವರ ಜಾತ್ರೆಯ ವಿಶೇಶ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *