ಹಿಜಾಬ್‌ ಪರ ನ್ಯಾಯಾಧೀಶರು ಸೇರಿದಂತೆ 700ಕ್ಕೂ ಹೆಚ್ಚು ಜನರಿಂದ ಬಹಿರಂಗ ಪತ್ರ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ ಸಿ ಎಸ್ ದ್ವಾರಕನಾಥ್, ಹೈಕೋರ್ಟ್ ನ ಇಬ್ಬರು ಮಾಜಿ ನ್ಯಾಯಾಧೀಶರು ಸೇರಿದಂತೆ 500 ವಕೀಲರು ಸೇರಿ 700ಕ್ಕೂ ಅಧಿಕ ಮಂದಿ ಸಂಬಂಧಪಟ್ಟವರಿಗೆ ಪತ್ರ ಬರೆದಿದ್ದಾರೆ.

Representational image

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ ಸಿ ಎಸ್ ದ್ವಾರಕನಾಥ್, ಹೈಕೋರ್ಟ್ ನ ಇಬ್ಬರು ಮಾಜಿ ನ್ಯಾಯಾಧೀಶರು ಸೇರಿದಂತೆ 500 ವಕೀಲರು ಸೇರಿ 700ಕ್ಕೂ ಅಧಿಕ ಮಂದಿ ಸಂಬಂಧಪಟ್ಟವರಿಗೆ ಪತ್ರ ಬರೆದಿದ್ದಾರೆ.

ಇವರು ಬರೆದಿರುವ ಪತ್ರದಲ್ಲಿ ಕರ್ನಾಟಕ ಹೈಕೋರ್ಟ್ ನ ಮಧ್ಯಂತರ ಆದೇಶದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಮುಸ್ಲಿಂ ಮಹಿಳೆಯರು ಮತ್ತು ಹುಡುಗಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದಿರುವುದು ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದಂತೆ ಎಂದು ಆಕ್ಷೇಪಿಸಿ ಸಹಿ ಹಾಕಿದ್ದಾರೆ.

ಶಾಲೆ-ಕಾಲೇಜುಗಳು ಪುನಾರಂಭವಾಗಿದ್ದು, ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಶಿಕ್ಷಕರು ಮತ್ತು ಆಡಳಿತ ಮಂಡಳಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಬುರ್ಖಾ, ಹಿಜಾಬ್ ತೆಗೆಯುವಂತೆ ಒತ್ತಾಯಿಸುತ್ತಿರುವ ವಿಡಿಯೊ ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಯಥೇಚ್ಛವಾಗಿ ಹರಿದಾಡುತ್ತಿದೆ.

ಹಿಜಾಬ್ ನಿಷೇಧಕ್ಕೆ ಅವಕಾಶವಿಲ್ಲ: ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆಎಂ ಖಾಜಿ ಅವರ ಪೂರ್ಣ ಪೀಠದ ಮುಂದೆ ವಾದ ಮಂಡಿಸಿದ ಕುಮಾರ್, ಹಿಜಾಬ್ ಅನ್ನು ನಿಷೇಧಿಸಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ. ಬಳೆ, ಬಿಂದಿ, ಶಿಲುಬೆ, ಪೇಟ ಕೂಡ ಧಾರ್ಮಿಕ ಸಂಕೇತಗಳಾಗಿವೆ ಎಂದು ವಾದಿಸಿದರು.

“ಇವುಗಳನ್ನು ಧರಿಸುವುದರಿಂದ ಏಕರೂಪತೆಯನ್ನು ಮುರಿಯುವುದಿಲ್ಲವೇ? ಹಿಜಾಬ್ ಧರಿಸಿದ್ದಕ್ಕಾಗಿ ಈ ಬಡ ಮುಸ್ಲಿಂ ಹುಡುಗಿಯರನ್ನು ಮಾತ್ರ ಏಕೆ ಗುರಿಯಾಗಿಸಬೇಕು ಎಂದು ನ್ಯಾಯಪೀಠ ಮುಂದೆ ವಾದಿಸಿದರು. 

ಕರ್ನಾಟಕಕ್ಕೆ ಪ್ರತ್ಯೇಕ ಪೀಠ ಬೇಕಾಗಬಹುದು: ಸಿಜೆಐ
ಕರ್ನಾಟಕದಿಂದ ಸುಪ್ರೀಂ ಕೋರ್ಟ್‌ಗೆ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಬರುತ್ತಿದ್ದು, ರಾಜ್ಯದ ವಿಷಯಗಳಿಗೆ ವಿಶೇಷ ಪೀಠವನ್ನು ರಚಿಸುವ ಅಗತ್ಯವಿದೆ ಎಂದು ಸಿಜೆಐ ಎನ್‌ವಿ ರಮಣ ಬುಧವಾರ ವ್ಯಂಗ್ಯದಿಂದ ಹೇಳಿದ್ದಾರೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ರಾಜ್ಯದಲ್ಲಿ ಗಣಿಗಾರಿಕೆಯಿಂದ ಹಾನಿಗೊಳಗಾದವರಿಗೆ ಪರಿಹಾರಕ್ಕೆ ಸಂಬಂಧಿಸಿದ ಪ್ರಕರಣವನ್ನು ತುರ್ತು ಪಟ್ಟಿಗೆ ಕೋರಿದ ನಂತರ ಮುಖ್ಯ ನ್ಯಾಯಮೂರ್ತಿಗಳು ಹೀಗೆ ಹೇಳಿದ್ದಾರೆ. 

ಗಣಿಗಾರಿಕೆ ಸಂಬಂಧಪಟ್ಟಂತೆ ವಿಚಾರಣೆಗೆ ಪಟ್ಟಿ ಮಾಡಲಾಗುತ್ತಿದ್ದು, ಬಹುಶಃ ನಾವು ಕರ್ನಾಟಕದ ವಿಷಯಗಳಿಗೆ ಮಾತ್ರ ಪೀಠವನ್ನು ರಚಿಸಬೇಕಾಗಬಹುದು ಎಂದು ಸಿಜೆಐ ಪ್ರತಿಕ್ರಿಯಿಸಿದ್ದಾರೆ.‌ (ಕ.ಪ್ರ.ಡಾ.)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *