![](https://i0.wp.com/samajamukhi.net/wp-content/uploads/2021/07/b.bommayee.jpg?resize=820%2C500&ssl=1)
![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
ಹಿಜಾಬ್ ವಿವಾದ ಹೆಚ್ಚಿರುವ ಬೆನ್ನಲ್ಲೇ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶಿಸಿದೆ.
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಸಂಘರ್ಷದ ಹೊತ್ತಲ್ಲೇ ಸರ್ಕಾರದ ಮತ್ತೊಂದು ಆದೇಶ ಹೊರಬಿದ್ದಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲಿ ಹಿಜಾಬ್, ಕೇಸರಿ ಶಾಲು, ಸ್ಕಾರ್ಫ್ ಧರಿಸದಂತೆ ಆದೇಶಿಸಿ ಸುತ್ತೋಲೆ ಹೊರಡಿಸಲಾಗಿದೆ.
![ಆದೇಶ ಪ್ರತಿ](https://i0.wp.com/etvbharatimages.akamaized.net/etvbharat/prod-images/kn-bng-06-govt-hijab-new-order-script-7208080_17022022194754_1702f_1645107474_1103.jpg?w=760&ssl=1)
ಆದೇಶ ಪ್ರತಿ
ಹಿಜಾಬ್ ವಿವಾದ ಹೆಚ್ಚಿರುವ ಬೆನ್ನಲ್ಲೇ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಮೌಲಾನಾ ಆಜಾದ್, ವಸತಿ ಶಾಲಾ-ಕಾಲೇಜುಗಳಿಗೆ ಇದು ಅನ್ವಯವಾಗಲಿದೆ.
ಶಾಲೆ ಒಳಗೆ ಬರುವಾಗ ಯಾವುದೇ ಧಾರ್ಮಿಕ ಚಿಹ್ನೆ, ಗುರುತು ಇರಬಾರದು. ಯಾವುದೇ ಧರ್ಮದ ಬಾವುಟಗಳನ್ನು ಬಳಸುವಂತಿಲ್ಲ. ಕಲ್ಯಾಣ ಇಲಾಖೆ ರೂಪಿಸಿದ ಸಮವಸ್ತ್ರವನ್ನು ಮಾತ್ರ ಧರಿಸಬೇಕು ಎಂದು ನಿಯಮದಲ್ಲಿ ಉಲ್ಲೇಖಿಸಲಾಗಿದೆ. (ಈ.ಟಿ.ಬಿ.ಕೆ.)
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)