ಕಲಂ ನಲ್ಲಿ ರಕ್ತದ ಹನಿ, ಪ್ರಮಾಣ ವಚನದಲ್ಲಿ ಆರ್ತ ನಾದ, ಸಮಾಧಿ ಸೌಧವನ್ನು ಮೆಟ್ಟಿ ವಿಧಾನಸೌಧ ಪ್ರವೇಶಿಸುವ ಪರಿಸ್ಥಿತಿ

ಕಲಂ ನಲ್ಲಿ ರಕ್ತದ ಹನಿ, ಪ್ರಮಾಣ ವಚನದಲ್ಲಿ ಆರ್ತ ನಾದ, ಸಮಾಧಿ ಸೌಧವನ್ನು ಮೆಟ್ಟಿ ವಿಧಾನಸೌಧ ಪ್ರವೇಶಿಸುವ ಪರಿಸ್ಥಿತಿ ಬಂದೀತು ಜಾಗ್ರತೆ!

(ಅಂತಃಪುರದ ಸುದ್ದಿಗಳು- ಸ್ವಾತಿ ಚಂದ್ರಶೇಖರ್) (kp)

ನಿಮ್ಮ ಸಾವು ಏನನ್ನು ಬದಲಾಯಿಸದು, ನಿಮ್ಮ ಮನೆಯವರಿಗೆ ಆಗುವ ನಷ್ಟವನ್ನು ಯಾರಿಂದಲೂ ಭರಿಸಲಾಗದು ಧರ್ಮ ಸಾವನ್ನು ಎಂದೂ ಬೇಡಿಲ್ಲ, ಸಾವು ಧರ್ಮವನ್ನು ಎಂದೂ ಪ್ರತಿಪಾದಿಸುವುದಿಲ್ಲ

Harsha

ಯಾವ ಶಾಪಕ್ಕೆ ಈ ಸಾವುಗಳು?, ಯಾವ ಶಿಕ್ಷೆಗೆ ಈ ಹಿಂಸೆ? ಯಾವ ಪುರುಷಾರ್ಥಕ್ಕೆ ಈ ಹೋರಾಟ. ಒಂದು ಕಡೆ “ಮುಸ್ಲಿಂ ಸಂಘಟನೆಯಿಂದ ಕೊಲೆ ಆಗಿದೆ” ಎಂದು, ಇನ್ನೊಂದು ಕಡೆ “ಹಿಂದೂ ಪ್ರಚೋದನೆಗೆ ತನ್ನವರಿಂದಲೆ ಬಲಿ ಆಗಿದೆ” ಎಂದು, ಯಾರಿಂದ ಏನಾಯಿತು?, ತಿಳಿದಿಲ್ಲ, ಆದರೆ ಹೋದದ್ದು ಮಾತ್ರ ಕುಟುಂಬದ ಭರವಸೆ, ತಾಯಿಗೆ ಮಗ, ಅಕ್ಕನಿಗೆ ಆಶ್ರಯ, ತಂದೆಗೆ ಜೀವನದ ನಂಬಿಕೆ. 

ಪ್ಯಾಂಟ್ ಶರ್ಟ್ ಹೊಲೆದು ಜೀವನ ಸಾಗಿಸುತ್ತಿದ್ದ ವ್ಯಕ್ತಿ ಇಂದು ಶವವಾಗಿ ಬಿದ್ದಿದ್ದಾನೆ. ಯಾವ ಸೂಜಿ ದಾರವು ಆತನ ಆತ್ಮವನ್ನು ಮತ್ತೆ ದೇಹದ ಜೊತೆ ಹೊಲೆಯಲು ಸಾಧ್ಯವಿಲ್ಲ. ಕಳೆದ 15 ದಿನದಿಂದ ಆರಂಭವಾದ ಹಿಜಾಬ್ ಕೂಗು ಕೊನೆಗೂ ಒಬ್ಬ ವ್ಯಕ್ತಿಯನ್ನು ಬಲಿ ತೆಗೆದುಕೊಂಡು ಬಿಟ್ಟಿತ್ತು. 

https://imasdk.googleapis.com/js/core/bridge3.501.0_en.html#goog_2106781634

ರಕ್ತದ ಓಕುಳಿ ಇಲ್ಲದೆ ಒಂದು ಚರ್ಚೆ ಅಂತ್ಯಗೊಳ್ಳಲು ಸಾಧ್ಯವೇ ಇಲ್ಲವೇ? ಯಾರು ಈ ಹರ್ಷ? ಆತನಿಗೂ ಮುಸ್ಲಿಮರಿಗೂ ಏನು ಸಂಬಂಧ? ಆತನಿಗೂ ಹಿಂದೂ ಸಂಘಟನೆಗೆ ಏನು ಸಂಬಂಧ?, ಕೇಳಿದರೆ ಯಾರ ಬಳಿಯೂ ಉತ್ತರವಿಲ್ಲ. ಆದರೆ ಎಲ್ಲರೂ ಹೇಳುತ್ತಿರುವುದು ಒಂದೇ, “ಆತ ಒಂದು ದೊಡ್ಡ ಬದಲಾವಣೆಗೆ ಬಲಿಯಾದ” ಎಂದು. ಸರಿ ಇನ್ನು ಮುಂದಿನ ದಿನಗಳಲ್ಲಿ, ಜಾತಿ ವ್ಯವಸ್ಥೆ ಧರ್ಮ ವ್ಯವಸ್ಥೆ ಹಿಂದೂ ಮುಸ್ಲಿಂ ಸಾಮರಸ್ಯ ಎಲ್ಲವೂ ಆದೀತು ಎಂದೇ ತಿಳಿಯೋಣ ಆದರೆ ಅದಕ್ಕೆ ಬಲಿಯೆ ಆಗಬೇಕಿತ್ತೆ….? 

ರಕ್ತದ ಓಕುಳಿಯಿಂದಲೇ ವ್ಯವಸ್ಥೆ ಪುನಶ್ಚೇತನಗೊಳ್ಳುವುದೆ…?

ಇರಲಿ ಹಾಗೆ ಎಂದು ಕೊಳ್ಳೋಣ. ಈ ಹಿಂದೆ ನಡೆದ ರಕ್ತದ ಓಕುಳಿಗಳು ವ್ಯವಸ್ಥೆಯನ್ನು ಅದೆಷ್ಟು ಪುನಶ್ಚೇತನಗೊಳಿಸಿದೆ ಎಂದು ಮೊದಲು ಅರ್ಥ ಮಾಡಿಕೊಳ್ಳೋಣ 90 ರ ದಶಕದಲ್ಲಿ ನಡೆದ ಚಿತ್ತರಂಜನ್ ಕೊಲೆ, ನಂತರ ನಡೆದ ಪ್ರಶಾಂತ್ ಪೂಜಾರಿ ಕೊಲೆ,
ನಂತರ ನಡೆದ ದೀಪಕ್ ಕೊಲೆ, ನಂತರ ನಡೆದ ಕುಟ್ಟಪ್ಪ ಕೊಲೆ, ಆನಂತರ ಪರೇಶ್ ಮೇಸ್ತ ಕೊಲೆ, ಅಲ್ಲ ಬರ್ಬರ ಹತ್ಯೆ ಬೆಂಗಳೂರಿನ ಮಧ್ಯಭಾಗದಲ್ಲಿ ನಡೆದ ರುದ್ರೇಶ್ ಕೊಲೆ, ಈ ಎಲ್ಲ ಸಾವುಗಳು ವ್ಯವಸ್ಥೆಯನ್ನು ಎಷ್ಟು ಪುನಶ್ಚೇತನಗೊಳಿಸಿತು ಎಂದು ವಿವರಿಸಲು ಹೇಳಿ ನಂತರ ರಕ್ತದ ಓಕುಳಿಯನ್ನ ಸಮರ್ಥಿಸಿಕೊಳ್ಳಲಿ.

ಯಾವ ಸದುದ್ದೇಶ ಸಾಕಾ ರವಾಯಿತು?, ಯಾವ ಸತ್ಕಾರ್ಯ ಸಾಧಿಸಿದ್ದು ಕಣ್ಣಿಗೆ ಬಿತ್ತು? ಹೋಗಲಿ ಹಿಂದೂ ಧರ್ಮ ಎಷ್ಟು ಪ್ರಬ ಲವಾಯಿತು? ಇಲ್ಲವೇ ಮುಸ್ಲಿಂ ಧರ್ಮಕ್ಕೆ ಎಷ್ಟು ಪಾವಿತ್ರ್ಯತೆ ಹೆಚ್ಚಾಯಿತು?.

ಇಷ್ಟಕ್ಕೂ ಒಂದು ಪ್ರಶ್ನೆ, ಚಿತ್ತರಂಜನ್ ಹತ್ಯೆಯ ನಂತರ ಅಲ್ಲಿ ಅರಳಿದ ಕಮಲ ಇಲ್ಲಿಯ ತನಕ ಅಲ್ಲಿನ ಕೆಸರನ್ನು ತೊಳೆದು ಹಾಕಲು ಯಾಕೆ ಪ್ರಯತ್ನಿಸಿಲ್ಲ?, ಚಿತ್ತರಂಜನ್‌ ರ ಹತ್ಯೆಯ ಹಿಂದಿನ ರಹಸ್ಯ ಯಾಕಿನ್ನೂ ಬಯಲಾಗಿಲ್ಲ 30 ವರ್ಷಗಳು ಕಳೆದವು, ಮಣ್ಣಲ್ಲಿ ಮಣ್ಣಾದ ಅವರ ಜೊತೆ ಸುಳ್ಳಿನ ಕೋಟೆಯಲ್ಲಿ ಏಷ್ಟೋ ಜನ ದಾಸರಾದರು?. ರಕ್ತದ ಒಂದೊಂದು ಹನಿಗು ಉತ್ತರ ನೀಡುತ್ತೇವೆ ಎಂದಿದ್ದರು ದಿವಂಗತ ಕೇಂದ್ರ ಸಚಿವ ಮತ್ತು ಪ್ರಸ್ತುತ ಕೇಂದ್ರ ಸಚಿವೆ. ಒಬ್ಬರು ಅನಂತದಾಚೆ ಸಾಗಿದರು ಮತ್ತೊಬ್ಬರು ಚಿಕ್ಕಮಗಳೂರು ತಮ್ಮ ಸಂಸದೀಯ ಕ್ಷೇತ್ರ ಎನ್ನುವುದನ್ನೇ ಮರೆತು ಬಿಟ್ಟಿದ್ದಾರೆ. ಇನ್ನು ಉದ್ವೇಗದಲ್ಲಿ ಆಡಿದ ಮಾತು ಎಲ್ಲಿ ನೆನಪಿರಬೇಕು. ಕುದಿಯುವ ಎಣ್ಣೆಗೆ ಹಾಕಿ ಸುಟ್ಟಿದ್ದು ಪರೇಶ್ ಮೇಸ್ತನನ್ನು ಅಲ್ಲ  ನಮ್ಮ ಆತ್ಮಾಭಿಮಾನವನ್ನು ಸುಡಲಾಗಿದೆ ಎಂದವರು ಈಗ ಎಲ್ಲಿದ್ದಾರೆ….?

ಈ ಎಲ್ಲ ಸಾವುಗಳು ಯಾಕೆ ಇಲ್ಲಿ ತನಕ ಒಂದು ಸ್ಪಷ್ಟ ಕೊನೆಯನ್ನು ಕಾಣಲಿಲ್ಲ?, ದೇಶದ, ರಾಜ್ಯದ ತನಿಖಾ ಸಂಸ್ಥೆಗಳು ಇಲ್ಲಿ ತನಕ ಆರೋಪಿಗಳನ್ನು ಹುಡುಕಲು ಯಾಕೆ ಸಾಧ್ಯವಾಗಿಲ್ಲ?, ನಟೋರಿಯಸ್ ಕಿಲ್ಲರ್ಸ್ ನ್ನು ಹುಡುಕುವ ಚಾಕಚಕ್ಯತೆ ಹೊಂದಿರುವ ಆರಕ್ಷಕರು ಒಂದು ಕೋಮು ಗಲಭೆ ಅಪರಾಧಿಗಳನ್ನು ಹುಡುಕಲು ಆಗಲಿಲ್ಲ ಎಂದರೆ ಇದು ನಂಬುವ ವಿಚಾರವೇ?


 
ಇದು ಹಿಂದೂ ಯುವಕರ ಹತ್ಯೆಯ ಕಥೆಯಾದರೆ ಇನ್ನೂ ಮುಸ್ಲಿಂ ಯುವಕರ ಪಟ್ಟಿಯೂ ಕಡಿಮೆ ಏನಿಲ್ಲ. ಕಾಂಗ್ರೆಸ್ ಮೇಲೆ ಬಿಜೆಪಿ, ಬಿಜೆಪಿ ಮೇಲೆ ಕಾಂಗ್ರೆಸ್ ಆರೋಪಿಸಿ ಅಧಿಕಾರದಲ್ಲಿ ಇದ್ದಾಗ ಜಾರಿಕೊಳ್ಳುತ್ತಾರೆ ಬಿಟ್ಟರೆ, ಒಬ್ಬರಾದರೂ ಸಾವಿಗೆ ಕಾನೂನಾತ್ಮಕವಾಗಿ ನ್ಯಾಯ ಒದಗಿಸುವ ಪ್ರಯತ್ನ ಮಾಡಿದ್ದಾರೆಯೇ?

ಇದೇ 2016-2018ರ ಮಧ್ಯೆ ಕೆಲವು ಕೊಲೆಗಳು ಆದವು. ಆಗ ಸಿದ್ದರಾಮಯ್ಯ ಸರ್ಕಾರ ಏನೂ ಮಾಡಲಿಲ್ಲ, ಕಳೆದ 3 ವರ್ಷದಿಂದ ಇರುವ ಬಿಜೆಪಿ ಸರ್ಕಾರ ಆ ಕೊಲೆಗಳ ತನಿಖೆ ಇರಲಿ ಅದರ ಬಗ್ಗೆ ಪ್ರಸ್ತಾಪವೂ ಮಾಡಲಿಲ್ಲ. ಇನ್ನು ಗಲಭೆ ಎಂದ ತಕ್ಷಣ 24 ಗಂಟೆಯೂ ಎಡಬಿಡದೆ ತೋರಿಸುವ ಪ್ರಮುಖ ಮಾಧ್ಯಮಗಳು ಟಿಆರ್ಪಿ ಬಂದ ನಂತರ ಇದರ ಬಗ್ಗೆ ಪ್ರಶ್ನಿಸುವರೆ…? ಮೂರು ತಿಂಗಳಾದ ಬಳಿಕ ಯಾರಿಗೂ ಬೇಡವಾದ ನಿಮ್ಮ ಸಾವು, ಕೇವಲ ಅಸ್ತಿಯಾಗಿ ನಿಮ್ಮ ಮನೆಯಲ್ಲಿ ಉಳಿವುದು,

ಇನ್ನಾದರೂ ಇಂತಹ ಬಲೆಗೆ ಬೀಳದಿರಿ… ನಿಮ್ಮ ಸಾವು ಏನನ್ನು ಬದಲಾಯಿಸದು, ನಿಮ್ಮ ಮನೆಯವರಿಗೆ ಆಗುವ ನಷ್ಟವನ್ನು ಯಾರಿಂದಲೂ ಭರಿಸಲಾಗದು ಧರ್ಮ ಸಾವನ್ನು ಎಂದೂ ಬೇಡಿಲ್ಲ, ಸಾವು ಧರ್ಮವನ್ನು ಎಂದೂ ಪ್ರತಿಪಾದಿಸುವುದಿಲ್ಲ (swati c)(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *