woman, s day spl……ಮಹಾದೇವಿ ಮಡಿವಾಳ ಉತ್ತಮ ಕಾರ್ಯಕರ್ತೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಸಿದ್ದಾಪುರ ಯೋಜನೆಯ ಹೊಸಳ್ಳಿಯ ಅಂಗನವಾಡಿ ಕಾರ್ಯಕರ್ತೆಯಾದ ಮಹಾದೇವಿ ಮಡಿವಾಳರಿಗೆ ಬೆಂಗಳೂರಿನಲ್ಲಿ ಜಿಲ್ಲಾ ಮಟ್ಟದ ಉತ್ತಮ ಕಾರ್ಯಕರ್ತೆ ಪ್ರಶಸ್ತಿ ನೀಡಿ ಸನ್ಮಾಸಲಾಯಿತು.

ಸಿದ್ಧಾಪುರದ ವಿದ್ಯಾರ್ಥಿ ಮಿತ್ರ ಬಳಗದಿಂದ ಗ್ರಾಮ ಒಕ್ಕಲ ಸಮುದಾಯದ ವಿದ್ಯಾರ್ಥಿಗಳಿಗೆ ಮತ್ತು ಇದರಿಂದ ಕಲಿತು ನೌಕರಿ ಪಡೆದವರಿಗೆ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮ ಬೇಡ್ಕಣಿ ಕೋಟೆ ಆಂಜನೇಯ ದೇವಸ್ಥಾನ ದಲ್ಲಿ ಹಮ್ಮಿಕೊಳಲಾಗಿತ್ತು .

ಅಬುದಾಬಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗಣೇಶ್ ಮೂರ್ತಿ ಅಳಗೋಡ ಕನಸಿನ ಕಾರ್ಯಕ್ರಮ ಇದಾಗಿದ್ದು ಇವರು ತಮ್ಮ ಸಮುದಾಯದ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಬಗ್ಗೆ ಸಿದ್ದಾಪುರದಲ್ಲಿ ವಿದ್ಯಾರ್ಥಿ ಮಿತ್ರ ಬಳಗ ಎಂದು ಸಂಘಟನೆ ಮಾಡಿ ಗ್ರಾಮ ಒಕ್ಕಲು ಸಮಾಜದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಕರಿಂದ ಟ್ಯೂಷನ್ ನೀಡಿ ಪ್ರತಿ ವರ್ಷ SSLC /PUC/Degree ಮತ್ತು ಉನ್ನತ ಶಿಕ್ಷಣ ದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮುತ್ತು ಈ ಸಂಘಟನೆ ವತಿಯಿಂದ ಕಲಿತು ಉದ್ಯೋಗ ಪಡೆದವರಿಗೆ ಅಭಿನಂದನಾ ಕಾರ್ಯಕ್ರಮ ಹೊಮ್ಮಿಕೊಳ್ಳುತಿದ್ದಾರೆ. ಈ ಬಳಗದ 6ನೇ ವರ್ಷದ ಕಾರ್ಯಕ್ರಮವನ್ನು ಉದ್ಘಾಟಿಸಿ ಸಹಾಯಕ ಪೊಲೀಸ್ ನೀರಕ್ಸಕರು ರಮೇಶ ಎಸ್ ಗೌಡ ಸಿದ್ದಾಪುರದ ಗಣೇಶ್ ಮೂರ್ತಿಯವರ ನಿಸ್ವಾರ್ಥ ಸೇವೆ ಬಗ್ಗೆ ಶ್ಲಾಘಿಸಿದರು. ಶಿಕ್ಷಣ ದಿಂದ ಬಂದ ಶಕ್ತಿ ಮತ್ಯಾವುದರಿಂದಲೂ ದೊರೆಯಲು ಸಾಧ್ಯವಿಲ್ಲ, ಯಾವುದೆ ಉದ್ಯೋಗ ಸಿಕ್ಕರೂ ಪ್ರೀತಿಯಿಂದ ಕಾರ್ಯ ನಿರ್ವಹಿಸಿ ಎಂದು ತಿಳಿಸಿದರು.

ಆರ್. ಎನ್. ಪಟಗಾರ ಮಾತನಾಡಿ “”ಶಿಕ್ಷಣ ವೇ ಶಕ್ತಿ ಶಿಕ್ಷಣ ವೇ ಸಂಸ್ಕಾರ ” ಎಂದು ತಿಳಿಸಿದರು. ಮೋಹನ್ ಗೌಡ ಕಿಲವಳ್ಳಿ ಮನಸಿದ್ದರೆ ಮಾರ್ಗವಿದೆ ಇನ್ನು ಉತ್ತಮವಾಗಿ ಕಲಿಕೆಯಲ್ಲಿ ನುಗ್ಗಿ ಹೆಚ್ಚಿನ ಯಶಸ್ಸು ಸಿಗಲಿ ಎಂದು ಹಾರೈಸಿದರು. ಅಧ್ಯಕ್ಷ ಆರ್ ಜಿ ಗೌಡ ಅಳಗೋಡ ಮಾತನಾಡಿ ಇಂತಹ ಕಾರ್ಯಕ್ರಮ ಕ್ಕೆ ತಮ್ಮೆಲ್ಲರ ಸಹಕಾರ ಅತಿ ಅವಶ್ಯ ಒಬ್ಬರಿಂದ ಇಬ್ಬರು,ಇಬ್ಬರಿಂದ 10 ಜನ ಉನ್ನತ ಶಿಕ್ಷಣ ಪಡೆದು ಮೇಲೆ ಬರಬೇಕು ಎಲ್ಲಾ ಸಮುದಾಯಕ್ಕೂ ಸಹಕಾರಿ ಆಗಬೇಕು ಆಗ ಮಾತ್ರ ಸಮುದಾಯದ ಮತ್ತು ಈ ದೇಶದ ಋಣ ತೀರಿಸಿದ ಹಾಗೆ ಎಂದು ನುಡಿದರು ಸ್ವಾಗತ ಸುರೇಶ ಗೌಡ ಕೊಡ್ತಗಣಿ ಕಾರ್ಯಕಮ ನಿರ್ವಹಣೆ /ನಿರೂಪಣೆ ಉದಯ ಗೌಡ ಹುಲಿಮನೆ ಮತ್ತು ಗೋಪಾಲ ಗೌಡ ಹಿರೆಕೈ ಗದ್ದೆ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *