ಎಡಗೈಯಲ್ಲಿ ಊಟ ಮಾಡಿದಳೆಂದು ತಾಳಿ ಕಟ್ಟಿದವಳನ್ನೇ ಬಿಟ್ಟು ಹೊರಟ ವರ.. ಮುಂದಕ್ಕೆ ಹಿಂಗಾಯ್ತು..

Thumbnail image

ತಕ್ಷಣ ವಧುವಿನ ಕಡೆಯವರು ಧಾವಿಸಿ ವರ ಹಾಗೂ ಆತನ ಕುಟುಂಬವನ್ನು ಸ್ಥಳದಿಂದ ತೆರಳದಂತೆ ತಡೆದು ಮಾತುಕತೆ ಆಡುವ ಮೂಲಕ ಬಗೆ ಹರಿಸಿಕೊಳ್ಳುವಂತೆ ಬೇಡಿಕೊಂಡಿದ್ದಾರೆ. ವಧು ಅಂಗವಿಕಲೆಯಾಗಿದ್ದು, ಮೂರು ದಿನದಲ್ಲಿಯೇ ಮದುವೆ ನಿಶ್ಚಯ ಮಾಡಿಕೊಳ್ಳಲಾಗಿತ್ತು..

ಕಾರವಾರ : ಇಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಮದುವೆ ಆದ ನಂತರ ವಧು ಎಡಗೈಯಲ್ಲಿ ಊಟ ಮಾಡಿದ ಒಂದೇ ಕಾರಣಕ್ಕೆ ವರ ಈ ಹುಡುಗಿಯೇ ಬೇಡ ಎಂದು ಅಲ್ಲಿಂದ ಕಾಲ್ಕೀಳಲು ಮುಂದಾದ ಘಟನೆ ದಾಂಡೇಲಿಯ ಕೂಳಗಿಯ ಈಶ್ವರ ದೇವಸ್ಥಾನದಲ್ಲಿ ಜರುಗಿದೆ.

ಜೊಯಿಡಾದ ಕಬೀರ್ ಕಾತು ನಾಯ್ಕ್ ಹಾಗೂ ಯಲ್ಲಾಪುರದ ವಧುವಿಗೆ ಮೂರು ದಿನಗಳ ಹಿಂದೆ ಮಾತುಕತೆ ನಡೆದು ಮದುವೆ ನಿಶ್ಚಯವಾಗಿತ್ತು. ಕೂಳಗಿಯ ಈಶ್ವರ ದೇವಸ್ಥಾನದಲ್ಲಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾಂಗಲ್ಯ ಧಾರಣೆ ಬಳಿಕ ವಧು-ವರರು ಊಟಕ್ಕೆ ಕುಳಿತ ಸಂದರ್ಭದಲ್ಲಿ ವಧು ಎಡಗೈನಲ್ಲಿ ಊಟ ಮಾಡಿದ್ದಾರೆ. ಇದರಿಂದ ಕುಪಿತಗೊಂಡ ವರ ಹಾಗೂ ಆತನ ಪೋಷಕರು ಆಕೆಯನ್ನು ಬಿಟ್ಟು ಕಾರನ್ನೇರಿ ಹೊರಡಲು ಮುಂದಾಗಿದ್ದಾರೆ.

ಎಡಗೈಯಲ್ಲಿ ಊಟ ಮಾಡಿದಳೆಂದು ತಾಳಿ ಕಟ್ಟಿದವಳನ್ನೇ ಬಿಟ್ಟು ಹೊರಟ ವರ

ತಕ್ಷಣ ವಧುವಿನ ಕಡೆಯವರು ಧಾವಿಸಿ ವರ ಹಾಗೂ ಆತನ ಕುಟುಂಬವನ್ನು ಸ್ಥಳದಿಂದ ತೆರಳದಂತೆ ತಡೆದು ಮಾತುಕತೆ ಆಡುವ ಮೂಲಕ ಬಗೆ ಹರಿಸಿಕೊಳ್ಳುವಂತೆ ಬೇಡಿಕೊಂಡಿದ್ದಾರೆ. ವಧು ಅಂಗವಿಕಲೆಯಾಗಿದ್ದು, ಮೂರು ದಿನದಲ್ಲಿಯೇ ಮದುವೆ ನಿಶ್ಚಯ ಮಾಡಿಕೊಳ್ಳಲಾಗಿತ್ತು.

ವರನ ಕಡೆಯವರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಕುಟುಂಬಸ್ಥರು 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರು ಹಾಗೂ ಮಹಿಳಾ ಕೇಂದ್ರದ ಸಿಬ್ಬಂದಿ ಆಗಮಿಸಿ ವಧು-ವರರನ್ನು ಮಹಿಳಾ ಕೇಂದ್ರದ ಕಚೇರಿಗೆ ಕರೆದೊಯ್ದು ವರನಿಗೆ ಬುದ್ಧಿ ಹೇಳಿದ್ದಾರೆ.

ಬಳಿಕ ಮನ ಪರಿವರ್ತನೆ ಮಾಡಿದ ಪೊಲೀಸ್​ ಸಿಬ್ಬಂದಿ ವರನಿಂದ ಮುಚ್ಚಳಿಕೆ ಬರೆಯಿಸಿಕೊಂಡು ವಧು-ವರರಿಗೆ ದಾಂಪತ್ಯ ಜೀವನ ಮುಂದುವರಿಸುವಂತೆ ಸೂಚಿಸಿ ಸಮಸ್ಯೆ ಇತ್ಯರ್ಥಗೊಳಿಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *