ಎಡಗೈಯಲ್ಲಿ ಊಟ ಮಾಡಿದಳೆಂದು ತಾಳಿ ಕಟ್ಟಿದವಳನ್ನೇ ಬಿಟ್ಟು ಹೊರಟ ವರ.. ಮುಂದಕ್ಕೆ ಹಿಂಗಾಯ್ತು..

Thumbnail image

ತಕ್ಷಣ ವಧುವಿನ ಕಡೆಯವರು ಧಾವಿಸಿ ವರ ಹಾಗೂ ಆತನ ಕುಟುಂಬವನ್ನು ಸ್ಥಳದಿಂದ ತೆರಳದಂತೆ ತಡೆದು ಮಾತುಕತೆ ಆಡುವ ಮೂಲಕ ಬಗೆ ಹರಿಸಿಕೊಳ್ಳುವಂತೆ ಬೇಡಿಕೊಂಡಿದ್ದಾರೆ. ವಧು ಅಂಗವಿಕಲೆಯಾಗಿದ್ದು, ಮೂರು ದಿನದಲ್ಲಿಯೇ ಮದುವೆ ನಿಶ್ಚಯ ಮಾಡಿಕೊಳ್ಳಲಾಗಿತ್ತು..

ಕಾರವಾರ : ಇಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಮದುವೆ ಆದ ನಂತರ ವಧು ಎಡಗೈಯಲ್ಲಿ ಊಟ ಮಾಡಿದ ಒಂದೇ ಕಾರಣಕ್ಕೆ ವರ ಈ ಹುಡುಗಿಯೇ ಬೇಡ ಎಂದು ಅಲ್ಲಿಂದ ಕಾಲ್ಕೀಳಲು ಮುಂದಾದ ಘಟನೆ ದಾಂಡೇಲಿಯ ಕೂಳಗಿಯ ಈಶ್ವರ ದೇವಸ್ಥಾನದಲ್ಲಿ ಜರುಗಿದೆ.

ಜೊಯಿಡಾದ ಕಬೀರ್ ಕಾತು ನಾಯ್ಕ್ ಹಾಗೂ ಯಲ್ಲಾಪುರದ ವಧುವಿಗೆ ಮೂರು ದಿನಗಳ ಹಿಂದೆ ಮಾತುಕತೆ ನಡೆದು ಮದುವೆ ನಿಶ್ಚಯವಾಗಿತ್ತು. ಕೂಳಗಿಯ ಈಶ್ವರ ದೇವಸ್ಥಾನದಲ್ಲಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾಂಗಲ್ಯ ಧಾರಣೆ ಬಳಿಕ ವಧು-ವರರು ಊಟಕ್ಕೆ ಕುಳಿತ ಸಂದರ್ಭದಲ್ಲಿ ವಧು ಎಡಗೈನಲ್ಲಿ ಊಟ ಮಾಡಿದ್ದಾರೆ. ಇದರಿಂದ ಕುಪಿತಗೊಂಡ ವರ ಹಾಗೂ ಆತನ ಪೋಷಕರು ಆಕೆಯನ್ನು ಬಿಟ್ಟು ಕಾರನ್ನೇರಿ ಹೊರಡಲು ಮುಂದಾಗಿದ್ದಾರೆ.

ಎಡಗೈಯಲ್ಲಿ ಊಟ ಮಾಡಿದಳೆಂದು ತಾಳಿ ಕಟ್ಟಿದವಳನ್ನೇ ಬಿಟ್ಟು ಹೊರಟ ವರ

ತಕ್ಷಣ ವಧುವಿನ ಕಡೆಯವರು ಧಾವಿಸಿ ವರ ಹಾಗೂ ಆತನ ಕುಟುಂಬವನ್ನು ಸ್ಥಳದಿಂದ ತೆರಳದಂತೆ ತಡೆದು ಮಾತುಕತೆ ಆಡುವ ಮೂಲಕ ಬಗೆ ಹರಿಸಿಕೊಳ್ಳುವಂತೆ ಬೇಡಿಕೊಂಡಿದ್ದಾರೆ. ವಧು ಅಂಗವಿಕಲೆಯಾಗಿದ್ದು, ಮೂರು ದಿನದಲ್ಲಿಯೇ ಮದುವೆ ನಿಶ್ಚಯ ಮಾಡಿಕೊಳ್ಳಲಾಗಿತ್ತು.

ವರನ ಕಡೆಯವರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಕುಟುಂಬಸ್ಥರು 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರು ಹಾಗೂ ಮಹಿಳಾ ಕೇಂದ್ರದ ಸಿಬ್ಬಂದಿ ಆಗಮಿಸಿ ವಧು-ವರರನ್ನು ಮಹಿಳಾ ಕೇಂದ್ರದ ಕಚೇರಿಗೆ ಕರೆದೊಯ್ದು ವರನಿಗೆ ಬುದ್ಧಿ ಹೇಳಿದ್ದಾರೆ.

ಬಳಿಕ ಮನ ಪರಿವರ್ತನೆ ಮಾಡಿದ ಪೊಲೀಸ್​ ಸಿಬ್ಬಂದಿ ವರನಿಂದ ಮುಚ್ಚಳಿಕೆ ಬರೆಯಿಸಿಕೊಂಡು ವಧು-ವರರಿಗೆ ದಾಂಪತ್ಯ ಜೀವನ ಮುಂದುವರಿಸುವಂತೆ ಸೂಚಿಸಿ ಸಮಸ್ಯೆ ಇತ್ಯರ್ಥಗೊಳಿಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *