ಅರಣ್ಯ ಕಾಯ್ದೆಗೆ ತಿದ್ದುಪಡಿ ತನ್ನಿ.. ಸಂಸದರಿಗೆ ಮಧು ಬಂಗಾರಪ್ಪ ಒತ್ತಾಯ

Thumbnail image

ಬಗರ್ ಹುಕುಂ ರೈತರಿಗಾಗಿ ಅರಣ್ಯ ಕಾಯ್ದೆಗೆ ತಿದ್ದುಪಡಿ ತನ್ನಿ.. ಸಂಸದರಿಗೆ ಮಧು ಬಂಗಾರಪ್ಪ ಒತ್ತಾಯ

ಬಗರ್ ಹುಕಂ ರೈತರ ಪರವಾಗಿ ಮಾತನಾಡಿ, ಅರಣ್ಯ ಇಲಾಖೆಯ ಭೂಮಿಯನ್ನು ಒತ್ತುವರಿ ಮಾಡಿದರೆ, ಒಂದು ಎಕರೆ ಅರಣ್ಯ ಇಲಾಖೆಗೆ ವಶಪಡಿಸಿಕೊಂಡು ಉಳಿದ ಭೂಮಿಯನ್ನು ರೈತರಿಗೆ ನೀಡಿ ಎಂದು ನಮ್ಮ ತಂದೆ ಬಂಗಾರಪ್ಪನವರು ಅಂದೇ ತಿಳಿಸಿದ್ದರು. ಇದರಿಂದ ಅವರಿಗೆ ರೈತರ ಪರ ಎಷ್ಟು ಕಾಳಜಿ ಇದೆ ಎಂದು ತಿಳಿದು ಬರುತ್ತದೆ ಎಂದು ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ: ನಮ್ಮ ತಂದೆ ಬಂಗಾರಪ್ಪ ಬಗರ್ ಹುಕುಂ ರೈತರ ಪರವಾಗಿ ಇದ್ದವರು, ನೀವು ಸಂಸತ್​​ನಲ್ಲಿ ಬಗರ್ ಹುಕುಂ ರೈತರ ಪರ ಏನು ಮಾತನಾಡಿದ್ದಿರಿ ಎಂಬುದರ ಬಗ್ಗೆ ದಾಖಲೆ ನೀಡಿ ಎಂದು ಸಂಸದ ಬಿ ವೈ ರಾಘವೇಂದ್ರ ಅವರಿಗೆ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಮಾಧ್ಯಮಗೋಷ್ಟಿ-

ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಅರಣ್ಯ ಕಾಯ್ದೆಯ ಬಗ್ಗೆ ವಾಜಪೇಯಿ ಸರ್ಕಾರ ಇದ್ದಾಗ ಸದನದಲ್ಲಿ ರೈತರ ಪರ ನಮ್ಮ ತಂದೆ ಮಾತನಾಡಿದ್ದರು. ಅವರು ಬಗರ್ ಹುಕಂ ರೈತರ ಪರವಾಗಿ ಮಾತನಾಡಿ, ಅರಣ್ಯ ಇಲಾಖೆಯ ಭೂಮಿಯನ್ನು ಒತ್ತುವರಿ ಮಾಡಿದರೆ, ಒಂದು ಎಕರೆ ಅರಣ್ಯ ಇಲಾಖೆಗೆ ವಶಪಡಿಸಿಕೊಂಡು ಉಳಿದ ಭೂಮಿಯನ್ನು ರೈತರಿಗೆ ನೀಡಿ ಎಂದು ಅಂದೇ ತಿಳಿಸಿದ್ದರು. ಇದರಿಂದ ಅವರಿಗೆ ರೈತರ ಪರ ಎಷ್ಟು ಕಾಳಜಿ ಇತ್ತು ಅನ್ನೋದು ತಿಳಿಯುತ್ತೆ. ಆದರೆ ನೀವು ಬಗರ್ ಹುಕುಂ ರೈತರ ಪರ ಎಷ್ಟು ಸಲ ಸದನದಲ್ಲಿ ಮಾತನಾಡಿದ್ದಿರಿ ಎಂದು ದಾಖಲೆ ನೀಡಿ ಎಂದು ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಕೆರೆ ಮುಚ್ಚಿ ಲೇಔಟ್ ಮಾಡುವವರಿಗೂ, ಜೀವನಕ್ಕಾಗಿ ಉಳುಮೆ ಮಾಡುವವರನ್ನ ಒಂದೇ ಮಾಡಲಾಗಿದೆ. ಕೆರೆ ತೆರವು ಮಾಡಿಸಲು ಆಗದೆ ಸುಮ್ಮೆನೆ ಕುಳಿತುಕೊಂಡಿದ್ದಾರೆ ಎಂದು ಕಿಡಿಕಾರಿದರು.

ಸೊರಬ ಕ್ಷೇತ್ರ ಒಂದರಲ್ಲಿಯೇ 11 ಸಾವಿರ ಕುಟುಂಬಗಳಿಗೆ ಅರಣ್ಯ ಒತ್ತುವರಿಯ ನೋಟಿಸ್​​​​ ನೀಡಲಾಗಿದೆ. ಈಗ ರೈತರು ಭಯದಿಂದ ಕೋರ್ಟ್ ನಿಂದ ಬೇಲ್ ಪಡೆಯುವಂತಾಗಿದೆ. ರೈತರು ಏನ್ ಕಳ್ಳರೆ, ಭಯದಲ್ಲಿ ಬೇಲ್ ಪಡೆಯಲು ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿ ಅರಣ್ಯ ಕಾಯ್ದೆ ತಿದ್ದುಪಡಿ ಮಾಡಿಸಬೇಕೆಂದು ಮಧು ಬಂಗಾರಪ್ಪ ಆಗ್ರಹಿಸಿದರು.

ಯಡಿಯೂರಪ್ಪನವರು ಸದನದಲ್ಲಿ ಅವರೇ ಒಪ್ಪಿಕೊಂಡಿದ್ದಾರೆ. 2012 ರ ಕಾನೂನಿನಿಂದ ಅನ್ಯಾಯ ಆಗಿದೆ, ಸರಿಪಡಿಸಬೇಕಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ಧನ್ಯವಾದ ತಿಳಿಸುತ್ತೇನೆ.‌ ಈಗ ನೀವು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹೇಳಿ ಕಾನೂನಿನಲ್ಲಿ ಬದಲಾವಣೆಯನ್ನು ತನ್ನಿ ಎಂದರು. ಈಗ ರೈತರು ಕೋರ್ಟ್ ಗೆ ಅಲೆಯುವಂತೆ ಮಾಡಿರುವುದು ಸೊರಬ ಶಾಸಕ ಕುಮಾರ ಬಂಗಾರಪ್ಪನವರೆ ಹೊರತು ಬೇರೆ ಯಾರೂ ಅಲ್ಲ ಎಂದು ಆರೋಪಿಸಿದರು.

ನಾನು ಶಾಸಕನಾದಾಗ ಕುಮಾರಸ್ವಾಮಿ ಅವರಿಗೆ ಒತ್ತಡ ಹಾಕಿ, ಸೊರಬ ಹಾಗೂ ಶಿಕಾರಿಪುರದ ನೀರಾವರಿಗೆ ಚಾಲನೆ ನೀಡಿಸಿದ್ದೆ. ಆದರೆ ಈಗ ಇರುವ ಏತ ನೀರಾವರಿಗೆ ಹಣ ಬಿಡುಗಡೆ ಮಾಡಿಸಿದ್ದೆ. ಈಗ ಅದರ ಕ್ರೆಡಿಟ್ ಅನ್ನು ಬೇರೆ ಯಾರೋ ತೆಗೆದುಕೊಳ್ಳುತ್ತಿದ್ದಾರೆ ಎಂದರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *