ಅರಣ್ಯ ಕಾಯ್ದೆಗೆ ತಿದ್ದುಪಡಿ ತನ್ನಿ.. ಸಂಸದರಿಗೆ ಮಧು ಬಂಗಾರಪ್ಪ ಒತ್ತಾಯ

Thumbnail image

ಬಗರ್ ಹುಕುಂ ರೈತರಿಗಾಗಿ ಅರಣ್ಯ ಕಾಯ್ದೆಗೆ ತಿದ್ದುಪಡಿ ತನ್ನಿ.. ಸಂಸದರಿಗೆ ಮಧು ಬಂಗಾರಪ್ಪ ಒತ್ತಾಯ

ಬಗರ್ ಹುಕಂ ರೈತರ ಪರವಾಗಿ ಮಾತನಾಡಿ, ಅರಣ್ಯ ಇಲಾಖೆಯ ಭೂಮಿಯನ್ನು ಒತ್ತುವರಿ ಮಾಡಿದರೆ, ಒಂದು ಎಕರೆ ಅರಣ್ಯ ಇಲಾಖೆಗೆ ವಶಪಡಿಸಿಕೊಂಡು ಉಳಿದ ಭೂಮಿಯನ್ನು ರೈತರಿಗೆ ನೀಡಿ ಎಂದು ನಮ್ಮ ತಂದೆ ಬಂಗಾರಪ್ಪನವರು ಅಂದೇ ತಿಳಿಸಿದ್ದರು. ಇದರಿಂದ ಅವರಿಗೆ ರೈತರ ಪರ ಎಷ್ಟು ಕಾಳಜಿ ಇದೆ ಎಂದು ತಿಳಿದು ಬರುತ್ತದೆ ಎಂದು ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ: ನಮ್ಮ ತಂದೆ ಬಂಗಾರಪ್ಪ ಬಗರ್ ಹುಕುಂ ರೈತರ ಪರವಾಗಿ ಇದ್ದವರು, ನೀವು ಸಂಸತ್​​ನಲ್ಲಿ ಬಗರ್ ಹುಕುಂ ರೈತರ ಪರ ಏನು ಮಾತನಾಡಿದ್ದಿರಿ ಎಂಬುದರ ಬಗ್ಗೆ ದಾಖಲೆ ನೀಡಿ ಎಂದು ಸಂಸದ ಬಿ ವೈ ರಾಘವೇಂದ್ರ ಅವರಿಗೆ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಮಾಧ್ಯಮಗೋಷ್ಟಿ-

ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಅರಣ್ಯ ಕಾಯ್ದೆಯ ಬಗ್ಗೆ ವಾಜಪೇಯಿ ಸರ್ಕಾರ ಇದ್ದಾಗ ಸದನದಲ್ಲಿ ರೈತರ ಪರ ನಮ್ಮ ತಂದೆ ಮಾತನಾಡಿದ್ದರು. ಅವರು ಬಗರ್ ಹುಕಂ ರೈತರ ಪರವಾಗಿ ಮಾತನಾಡಿ, ಅರಣ್ಯ ಇಲಾಖೆಯ ಭೂಮಿಯನ್ನು ಒತ್ತುವರಿ ಮಾಡಿದರೆ, ಒಂದು ಎಕರೆ ಅರಣ್ಯ ಇಲಾಖೆಗೆ ವಶಪಡಿಸಿಕೊಂಡು ಉಳಿದ ಭೂಮಿಯನ್ನು ರೈತರಿಗೆ ನೀಡಿ ಎಂದು ಅಂದೇ ತಿಳಿಸಿದ್ದರು. ಇದರಿಂದ ಅವರಿಗೆ ರೈತರ ಪರ ಎಷ್ಟು ಕಾಳಜಿ ಇತ್ತು ಅನ್ನೋದು ತಿಳಿಯುತ್ತೆ. ಆದರೆ ನೀವು ಬಗರ್ ಹುಕುಂ ರೈತರ ಪರ ಎಷ್ಟು ಸಲ ಸದನದಲ್ಲಿ ಮಾತನಾಡಿದ್ದಿರಿ ಎಂದು ದಾಖಲೆ ನೀಡಿ ಎಂದು ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಕೆರೆ ಮುಚ್ಚಿ ಲೇಔಟ್ ಮಾಡುವವರಿಗೂ, ಜೀವನಕ್ಕಾಗಿ ಉಳುಮೆ ಮಾಡುವವರನ್ನ ಒಂದೇ ಮಾಡಲಾಗಿದೆ. ಕೆರೆ ತೆರವು ಮಾಡಿಸಲು ಆಗದೆ ಸುಮ್ಮೆನೆ ಕುಳಿತುಕೊಂಡಿದ್ದಾರೆ ಎಂದು ಕಿಡಿಕಾರಿದರು.

ಸೊರಬ ಕ್ಷೇತ್ರ ಒಂದರಲ್ಲಿಯೇ 11 ಸಾವಿರ ಕುಟುಂಬಗಳಿಗೆ ಅರಣ್ಯ ಒತ್ತುವರಿಯ ನೋಟಿಸ್​​​​ ನೀಡಲಾಗಿದೆ. ಈಗ ರೈತರು ಭಯದಿಂದ ಕೋರ್ಟ್ ನಿಂದ ಬೇಲ್ ಪಡೆಯುವಂತಾಗಿದೆ. ರೈತರು ಏನ್ ಕಳ್ಳರೆ, ಭಯದಲ್ಲಿ ಬೇಲ್ ಪಡೆಯಲು ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿ ಅರಣ್ಯ ಕಾಯ್ದೆ ತಿದ್ದುಪಡಿ ಮಾಡಿಸಬೇಕೆಂದು ಮಧು ಬಂಗಾರಪ್ಪ ಆಗ್ರಹಿಸಿದರು.

ಯಡಿಯೂರಪ್ಪನವರು ಸದನದಲ್ಲಿ ಅವರೇ ಒಪ್ಪಿಕೊಂಡಿದ್ದಾರೆ. 2012 ರ ಕಾನೂನಿನಿಂದ ಅನ್ಯಾಯ ಆಗಿದೆ, ಸರಿಪಡಿಸಬೇಕಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ಧನ್ಯವಾದ ತಿಳಿಸುತ್ತೇನೆ.‌ ಈಗ ನೀವು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹೇಳಿ ಕಾನೂನಿನಲ್ಲಿ ಬದಲಾವಣೆಯನ್ನು ತನ್ನಿ ಎಂದರು. ಈಗ ರೈತರು ಕೋರ್ಟ್ ಗೆ ಅಲೆಯುವಂತೆ ಮಾಡಿರುವುದು ಸೊರಬ ಶಾಸಕ ಕುಮಾರ ಬಂಗಾರಪ್ಪನವರೆ ಹೊರತು ಬೇರೆ ಯಾರೂ ಅಲ್ಲ ಎಂದು ಆರೋಪಿಸಿದರು.

ನಾನು ಶಾಸಕನಾದಾಗ ಕುಮಾರಸ್ವಾಮಿ ಅವರಿಗೆ ಒತ್ತಡ ಹಾಕಿ, ಸೊರಬ ಹಾಗೂ ಶಿಕಾರಿಪುರದ ನೀರಾವರಿಗೆ ಚಾಲನೆ ನೀಡಿಸಿದ್ದೆ. ಆದರೆ ಈಗ ಇರುವ ಏತ ನೀರಾವರಿಗೆ ಹಣ ಬಿಡುಗಡೆ ಮಾಡಿಸಿದ್ದೆ. ಈಗ ಅದರ ಕ್ರೆಡಿಟ್ ಅನ್ನು ಬೇರೆ ಯಾರೋ ತೆಗೆದುಕೊಳ್ಳುತ್ತಿದ್ದಾರೆ ಎಂದರು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *