deshpande 75- ೨೫ ರಿಂದ ೭೫ ರ ವರೆಗೆ ಚುರುಕಿನ ನಡಿಗೆ

ಆರ್.ವಿ.ದೇಶಪಾಂಡೆ ರಾಜ್ಯ ರಾಜಕಾರಣದ ಮಹತ್ವದ ಹೆಸರು. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ-ಮುಂಡಗೋಡು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ ಆರ್.ವಿ.ದೇಶಪಾಂಡೆ ತಿರುಗಿ ನೋಡಿದ್ದೇ ಇಲ್ಲ. ಕಾಂಗ್ರೆಸ್‌ ನಿಂದ ಜನತಾದಳ, ಲೋಕಶಕ್ತಿ,ಮರಳಿ ಕಾಂಗ್ರೆಸ್‌ ದೇಶಪಾಂಡೆ ಹೋದ ಕಡೆ ಅಧಿಕಾರ ಬರುತ್ತೋ,ಅಧಿಕಾರ ಅರಸಿ ದೇಶಪಾಂಡೆ ಹೋದಾಗಲೆಲ್ಲಾ ಅವಕಾಶ ದೊರೆಯುತ್ತೋ ಎನ್ನುವುದೇ ಒಗಟು. ಹಳಿಯಾಳದ ಯುವ ವಕೀಲ ರಘುನಾಥ ವಿಶ್ವನಾಥ ದೇಶಪಾಂಡೆ ೨೫ ರ ಹರೆಯದಲ್ಲೇ ರಾಜಕೀಯ ಪ್ರವೇಶಿಸಿದರು ಅಂದಿನಿಂದ ಈವರೆಗೆ ದೇಶಪಾಂಡೆ ೫ ದಶಕಗಳ ಕಾಲ ರಾಜ್ಯ ರಾಜಕಾರಣದ ಭಾಗವಾಗಿ ಈವರೆಗೆ ೮ ಬಾರಿ ಶಾಸಕರಾಗಿ, ಸಚಿವರಾಗಿ, ಪಕ್ಷದ ರಾಜ್ಯ ಅಧ್ಯಕ್ಷರಾಗಿ, ವಿರೋಧಪಕ್ಷದ ನಾಯಕರಾಗಿ ಚಾಪು ಮೂಡಿಸಿದ್ದಾರೆ.

೫೦ ವರ್ಷಗಳ ತಮ್ಮ ರಾಜಕೀಯದ ಸುದೀರ್ಘ ಅವಧಿಯಲ್ಲಿ ಹಲವು ಬಾರಿ ತಾವು ಬಯಸಿದ ಖಾತೆ ಪಡೆದು ಹೆಸರು ಮಾಡಿದ್ದಾರೆ. ಹಳಿಯಾಳ ಕ್ಷೇತ್ರ, ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಅಭಿವೃದ್ಧಿ ಕೆಲಸಗಳ ಕಾಮಗಾರಿ ಫಲಕಗಳ ಮೇಲೆ ತಮ್ಮ ಹೆಸರು ಛಾಪಿಸಿರುವ ದೇಶಪಾಂಡೆ ತಮ್ಮ ಗುರುವಿಗಾಗಿ ತಮ್ಮ ಕ್ಷೇತ್ರ-ಹುದ್ದೆಗಳನ್ನೆಲ್ಲಾ ಬಿಟ್ಟುಕೊಟ್ಟ ಧೀಮಂತ. ಜನತಾದಳದಿಂದ ರಾಮಕೃಷ್ಣ ಹೆಗಡೆಯವರನ್ನು ಉಚ್ಛಾಟಿಸಿದ್ದಾಗ ಗುರು ಹೆಗಡೆಯವರೊಂದಿಗೆ ಜನತಾದಳ ಬಿಟ್ಟುಬಂದ ದೇಶಪಾಂಡೆ ಗುರುವಿಗಾಗಿಮಿಡಿದ ಶಿಷ್ಯ.

ರಾಜಕೀಯ ಗರಡಿಯ ಬಿಗಿಪಟ್ಟುಗಳ ೫೦ ವರ್ಷದ ಸುವರ್ಣ ಅನುಭವಕ್ಕೂ ತಮ್ಮ ಬದುಕಿನ ಅಮೃತಮಹೋತ್ಸವಕ್ಕೂ ಸರಿಯಾಗಿ ೭೫ ವರ್ಷಗಳ ಅವಧಿಯಲ್ಲಿ ೫೦ ವರ್ಷ ನಿರಂತರ ರಾಜಕಾರಣ ಮಾಡಿರುವ ದೇಶಪಾಂಡೆ ಈಗಲೂ ದಣಿದಿಲ್ಲ. ಸರ್ಕಾರ ಬರಲಿ, ಅಧಿಕಾರ ಇರಲಿ, ಇಲ್ಲದಿರಲಿ ಸರ್ಕಾರ, ಪಕ್ಷದ ವಲಯದಲ್ಲಿ ವರ್ಚಸ್ವಿ ನಾಯಕರಾಗಿ ಹೆಸರುಮಾಡಿರುವ ಇವರ ವಿಶೇಶವೆಂದರೆ ಪಕ್ಷ,ಸಿದ್ಧಾಂತಗಳ ಬಗ್ಗೆ ಮಾತನಾಡುತ್ತಾರೆಯೆ ವಿನ: ದೇಶಪಾಂಡೆ ಯಾರ ವಯಕ್ತಿಕ ವಿಚಾರದಲ್ಲಿ ಮಾತನಾಡುವ ವ್ಯಕ್ತಿಯಲ್ಲ. ಜಿಲ್ಲೆಯ ತಂತ್ರಗಾರಿಕೆಯ ಮೇಲ್ವರ್ಗ, ಬಹುಸಂಖ್ಯಾತ ಹಿಂದುಳಿದ ವರ್ಗ ಎಲ್ಲರ ನಡುವೆ ಅಲ್ಪಸಂಖ್ಯಾತನಾಗಿ ಜನಪ್ರತಿನಿಧಿಯಾಗುತ್ತಾ ಎಲ್ಲರ ಅಚ್ಚರಿಗೆ ಕಾರಣವಾದ ದೇಶಪಾಂಡೆ ಈಗ ತಮ್ಮ ಮಗ ಪ್ರಶಾಂತ್‌ ದೇಶಪಾಂಡೆ ಮೂಲಕ ರಾಜಕೀಯ ಪ್ರಯೋಗಕ್ಕಿಳಿಯುವ ಯೋಚನೆಯಲ್ಲಿದ್ದಾರೆ. ನಿರಂತರ ಅಧಿಕಾರ,ಅನುಕೂಲಗಳ ಸುಖ ಕಂಡರೂ ಅದನ್ನು ಅಮಲಾಗಿಸಿಕೊಳ್ಳದ ದೇಶಪಾಂಡೆ ಈಗಲೂ ತಮ್ಮ ಸಂಸ್ಥೆ, ಟ್ರಸ್ಟ ಗಳ ಮೂಲಕ ಸಮಾಜಸೇವೆಯಲ್ಲಿದ್ದಾರೆ. ಕೋವಿಡ್‌ ಅವಧಿ, ಪ್ರವಾಹ ಪರಿಸ್ಥಿತಿಗಳಲ್ಲಿ ಪರ್ಯಾಯ ಸರ್ಕಾರದ ರೀತಿ ಕೆಲಸ ಮಾಡಿರುವ ದೇಶಪಾಂಡೆ ಅಪ್ಪ ಮಕ್ಕಳು ತಮ್ಮ ಕುಟುಂಬದ ೫ ದಶಕಗಳ ರಾಜಕೀಯ ಪರಂಪರೆಯ ಮುಂದುವರಿಕೆಗೆ ಪಣ ತೊಟ್ಟಂತಿದೆ. ಅಸಂಖ್ಯ ವರ್ಷಗಳ ರಾಜಕೀಯ ಶಕ್ತಿಯಿಂದ ತಮ್ಮ ವಲಯ ಬೆಳೆಸಿಕೊಂಡಿರುವ ಮಾಜಿ ಸಚಿವ ದೇಶಪಾಂಡೆ ಮಾರ್ಚ್‌ ೧೬ ರಂದು ತಮ್ಮ ೭೫ ನೇ ಜನ್ಮದಿನ ಆಚರಿಸಿಕೊಳ್ಳುತಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *