ಅಪ್ಪು ಜೇಮ್ಸ್‌ ಬಗ್ಗೆ ರಾಘವೇಂದ್ರರಾಜ್‌ ಕುಮಾರ್‌ ಪ್ರತಿಕ್ರೀಯೆ

ಜೇಮ್ಸ್ ಚಿತ್ರ ಬಿಡುಗಡೆ: ಫಸ್ಟ್ ಡೇ ಫಸ್ಟ್ ಶೋ ನೋಡಿ ತಮ್ಮ ಅಪ್ಪು ಬಗ್ಗೆ ರಾಘಣ್ಣ ಹೇಳಿದ್ದೇನು?

ನನಗೆ ನನ್ನ ತಂದೆ ಡಾ ರಾಜ್ ಕುಮಾರ್ ಅವರು ಅಣ್ಣನ ಬಗ್ಗೆ ತಮ್ಮ, ತಮ್ಮನ ಬಗ್ಗೆ ಅಣ್ಣ, ಅಪ್ಪನ ಬಗ್ಗೆ ಮಕ್ಕಳು, ಮಕ್ಕಳ ಬಗ್ಗೆ ಅಪ್ಪ ಹೊಗಳಬಾರದು, ಹೇಳಿಕೊಳ್ಳಬಾರದು ಎಂದು ಹೇಳುತ್ತಿದ್ದರು, ಹಾಗಾಗಿ ಇವತ್ತು ನಾನು ಜೇಮ್ಸ್ ಚಿತ್ರ ನೋಡಿ ಅಪ್ಪುವನ್ನು ಹೊಗಳುವುದಿಲ್ಲ, ನನ್ನ ತಮ್ಮ ಏನೇ ಮಾಡಿದರೂ ನನಗೆ ಮೆಚ್ಚುಗೆಯಾಗುತ್ತದೆ, ಅವನನ್ನು ನೋಡಿ, ಅವನ ಚಿತ್ರ ನೋಡಿ ಪ್ರೇಕ್ಷಕರ

Raghavendra Rajkumar

ಬೆಂಗಳೂರು: ನನಗೆ ನನ್ನ ತಂದೆ ಡಾ ರಾಜ್ ಕುಮಾರ್ ಅವರು ಅಣ್ಣನ ಬಗ್ಗೆ ತಮ್ಮ, ತಮ್ಮನ ಬಗ್ಗೆ ಅಣ್ಣ, ಅಪ್ಪನ ಬಗ್ಗೆ ಮಕ್ಕಳು, ಮಕ್ಕಳ ಬಗ್ಗೆ ಅಪ್ಪ ಹೊಗಳಬಾರದು, ಹೇಳಿಕೊಳ್ಳಬಾರದು ಎಂದು ಹೇಳುತ್ತಿದ್ದರು, ಹಾಗಾಗಿ ಇವತ್ತು ನಾನು ಜೇಮ್ಸ್ ಚಿತ್ರ ನೋಡಿ ಅಪ್ಪುವನ್ನು ಹೊಗಳುವುದಿಲ್ಲ, ನನ್ನ ತಮ್ಮ ಏನೇ ಮಾಡಿದರೂ ನನಗೆ ಮೆಚ್ಚುಗೆಯಾಗುತ್ತದೆ, ಅವನನ್ನು ನೋಡಿ, ಅವನ ಚಿತ್ರ ನೋಡಿ ಪ್ರೇಕ್ಷಕರು, ಅಭಿಮಾನಿಗಳು ಹೇಳಬೇಕು ಇದು ಜೇಮ್ಸ್ ಚಿತ್ರ ಬಿಡುಗಡೆಯಾದ ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮಜಯಂತಿಯಂದು ಫಸ್ಟ್ ಡೇ ಫಸ್ಟ್ ಶೋ ನೋಡಿದ ನಂತರ ರಾಘವೇಂದ್ರ ರಾಜ್ ಕುಮಾರ್ ಹೇಳಿದ ಮಾತು. 

ಇಂದು ಜನರ ಪ್ರತಿಕ್ರಿಯೆ ಮುಖ್ಯವಾಗುತ್ತದೆ, ಥಿಯೇಟರ್ ನ ಒಳಗೆ ಬರುತ್ತಿದ್ದಂತೆ ನನ್ನ ಹೃದಯ ನನ್ನ ತಮ್ಮ, ನನ್ನ ತಮ್ಮ ಎಂದು ಹೊಡೆದುಕೊಳ್ಳುತ್ತಿರುತ್ತದೆ, ಭಾವನೆಯನ್ನು ತಡೆದುಕೊಳ್ಳಲು ಆಗುವುದಿಲ್ಲ, ಜನರನ್ನು ಕೇಳಿ, ನನಗೆ ಇವತ್ತು ಇದು ಸಿನಿಮಾ ಅಲ್ಲ, ಭಾವನೆ ಎಂದರು.

ಪ್ರತಿಯೊಬ್ಬರಿಗೂ ಜೀವನದಲ್ಲಿ ಆರಂಭ-ಕೊನೆ ಎಂಬುದು ಇರುತ್ತದೆ. ನಮಗೆ ಅಪ್ಪುವನ್ನು ಕಳೆದುಕೊಂಡ ನೋವು ಇರುತ್ತದೆ, ಹಲವು ಮನೆಗಳಲ್ಲಿ 20 ವರ್ಷದಲ್ಲಿ, 25 ವರ್ಷದಲ್ಲಿ, 30 ವರ್ಷದಲ್ಲಿ ಹೋಗಿಬಿಡುತ್ತಾರೆ, ಅಂಥವರ ಕಷ್ಟ, ನೋವು ನೋಡಿ, ನಮಗೆ ನಮ್ಮ ಮನೆಯ ಸದಸ್ಯರನ್ನು ಕಳೆದುಕೊಂಡಾಗ ನೋವು ಗೊತ್ತಾಗುವುದು, ಎಲ್ಲರಿಗೂ ನೋವಾಗಿದೆ, ನಮಗೂ ಕಷ್ಟವಾಗುತ್ತಿದೆ, ನೋವನ್ನು ನುಂಗಿಕೊಂಡು ಜೀವನ ನಡೆಸಿಕೊಂಡು ಹೋಗಬೇಕಷ್ಟೆ, ನನ್ನ ತಮ್ಮನ ಸಿನಿಮಾ, ಮಾಡಿರುವ ಕೆಲಸಗಳು ಜೀವಂತವಾಗಿರುತ್ತದೆ, ಮುಂದಿನ ಪೀಳಿಗೆ ಬಂದು ನೋಡಿ ಹೊಗಳುತ್ತದೆ ಎಂದರು.

ಅಪ್ಪು ಜೀವನದ ಕೊನೆಯ ವರ್ಷಗಳಲ್ಲಿ ಆಯ್ಕೆಮಾಡಿಕೊಂಡ ರಾಜಕುಮಾರ, ಯುವರತ್ನ, ಇನ್ನು ಬಿಡುಗಡೆಯಾಗಬೇಕಿರುವ ಗಂಧದ ಗುಡಿಯಂತಹ ಚಿತ್ರಗಳು ಅದ್ಭುತವಾಗಿತ್ತು ಎಂದು ರಾಘಣ್ಣ ಹೊಗಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *