ಅಪ್ಪು ಜೇಮ್ಸ್‌ ಬಗ್ಗೆ ರಾಘವೇಂದ್ರರಾಜ್‌ ಕುಮಾರ್‌ ಪ್ರತಿಕ್ರೀಯೆ

ಜೇಮ್ಸ್ ಚಿತ್ರ ಬಿಡುಗಡೆ: ಫಸ್ಟ್ ಡೇ ಫಸ್ಟ್ ಶೋ ನೋಡಿ ತಮ್ಮ ಅಪ್ಪು ಬಗ್ಗೆ ರಾಘಣ್ಣ ಹೇಳಿದ್ದೇನು?

ನನಗೆ ನನ್ನ ತಂದೆ ಡಾ ರಾಜ್ ಕುಮಾರ್ ಅವರು ಅಣ್ಣನ ಬಗ್ಗೆ ತಮ್ಮ, ತಮ್ಮನ ಬಗ್ಗೆ ಅಣ್ಣ, ಅಪ್ಪನ ಬಗ್ಗೆ ಮಕ್ಕಳು, ಮಕ್ಕಳ ಬಗ್ಗೆ ಅಪ್ಪ ಹೊಗಳಬಾರದು, ಹೇಳಿಕೊಳ್ಳಬಾರದು ಎಂದು ಹೇಳುತ್ತಿದ್ದರು, ಹಾಗಾಗಿ ಇವತ್ತು ನಾನು ಜೇಮ್ಸ್ ಚಿತ್ರ ನೋಡಿ ಅಪ್ಪುವನ್ನು ಹೊಗಳುವುದಿಲ್ಲ, ನನ್ನ ತಮ್ಮ ಏನೇ ಮಾಡಿದರೂ ನನಗೆ ಮೆಚ್ಚುಗೆಯಾಗುತ್ತದೆ, ಅವನನ್ನು ನೋಡಿ, ಅವನ ಚಿತ್ರ ನೋಡಿ ಪ್ರೇಕ್ಷಕರ

Raghavendra Rajkumar

ಬೆಂಗಳೂರು: ನನಗೆ ನನ್ನ ತಂದೆ ಡಾ ರಾಜ್ ಕುಮಾರ್ ಅವರು ಅಣ್ಣನ ಬಗ್ಗೆ ತಮ್ಮ, ತಮ್ಮನ ಬಗ್ಗೆ ಅಣ್ಣ, ಅಪ್ಪನ ಬಗ್ಗೆ ಮಕ್ಕಳು, ಮಕ್ಕಳ ಬಗ್ಗೆ ಅಪ್ಪ ಹೊಗಳಬಾರದು, ಹೇಳಿಕೊಳ್ಳಬಾರದು ಎಂದು ಹೇಳುತ್ತಿದ್ದರು, ಹಾಗಾಗಿ ಇವತ್ತು ನಾನು ಜೇಮ್ಸ್ ಚಿತ್ರ ನೋಡಿ ಅಪ್ಪುವನ್ನು ಹೊಗಳುವುದಿಲ್ಲ, ನನ್ನ ತಮ್ಮ ಏನೇ ಮಾಡಿದರೂ ನನಗೆ ಮೆಚ್ಚುಗೆಯಾಗುತ್ತದೆ, ಅವನನ್ನು ನೋಡಿ, ಅವನ ಚಿತ್ರ ನೋಡಿ ಪ್ರೇಕ್ಷಕರು, ಅಭಿಮಾನಿಗಳು ಹೇಳಬೇಕು ಇದು ಜೇಮ್ಸ್ ಚಿತ್ರ ಬಿಡುಗಡೆಯಾದ ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮಜಯಂತಿಯಂದು ಫಸ್ಟ್ ಡೇ ಫಸ್ಟ್ ಶೋ ನೋಡಿದ ನಂತರ ರಾಘವೇಂದ್ರ ರಾಜ್ ಕುಮಾರ್ ಹೇಳಿದ ಮಾತು. 

ಇಂದು ಜನರ ಪ್ರತಿಕ್ರಿಯೆ ಮುಖ್ಯವಾಗುತ್ತದೆ, ಥಿಯೇಟರ್ ನ ಒಳಗೆ ಬರುತ್ತಿದ್ದಂತೆ ನನ್ನ ಹೃದಯ ನನ್ನ ತಮ್ಮ, ನನ್ನ ತಮ್ಮ ಎಂದು ಹೊಡೆದುಕೊಳ್ಳುತ್ತಿರುತ್ತದೆ, ಭಾವನೆಯನ್ನು ತಡೆದುಕೊಳ್ಳಲು ಆಗುವುದಿಲ್ಲ, ಜನರನ್ನು ಕೇಳಿ, ನನಗೆ ಇವತ್ತು ಇದು ಸಿನಿಮಾ ಅಲ್ಲ, ಭಾವನೆ ಎಂದರು.

ಪ್ರತಿಯೊಬ್ಬರಿಗೂ ಜೀವನದಲ್ಲಿ ಆರಂಭ-ಕೊನೆ ಎಂಬುದು ಇರುತ್ತದೆ. ನಮಗೆ ಅಪ್ಪುವನ್ನು ಕಳೆದುಕೊಂಡ ನೋವು ಇರುತ್ತದೆ, ಹಲವು ಮನೆಗಳಲ್ಲಿ 20 ವರ್ಷದಲ್ಲಿ, 25 ವರ್ಷದಲ್ಲಿ, 30 ವರ್ಷದಲ್ಲಿ ಹೋಗಿಬಿಡುತ್ತಾರೆ, ಅಂಥವರ ಕಷ್ಟ, ನೋವು ನೋಡಿ, ನಮಗೆ ನಮ್ಮ ಮನೆಯ ಸದಸ್ಯರನ್ನು ಕಳೆದುಕೊಂಡಾಗ ನೋವು ಗೊತ್ತಾಗುವುದು, ಎಲ್ಲರಿಗೂ ನೋವಾಗಿದೆ, ನಮಗೂ ಕಷ್ಟವಾಗುತ್ತಿದೆ, ನೋವನ್ನು ನುಂಗಿಕೊಂಡು ಜೀವನ ನಡೆಸಿಕೊಂಡು ಹೋಗಬೇಕಷ್ಟೆ, ನನ್ನ ತಮ್ಮನ ಸಿನಿಮಾ, ಮಾಡಿರುವ ಕೆಲಸಗಳು ಜೀವಂತವಾಗಿರುತ್ತದೆ, ಮುಂದಿನ ಪೀಳಿಗೆ ಬಂದು ನೋಡಿ ಹೊಗಳುತ್ತದೆ ಎಂದರು.

ಅಪ್ಪು ಜೀವನದ ಕೊನೆಯ ವರ್ಷಗಳಲ್ಲಿ ಆಯ್ಕೆಮಾಡಿಕೊಂಡ ರಾಜಕುಮಾರ, ಯುವರತ್ನ, ಇನ್ನು ಬಿಡುಗಡೆಯಾಗಬೇಕಿರುವ ಗಂಧದ ಗುಡಿಯಂತಹ ಚಿತ್ರಗಳು ಅದ್ಭುತವಾಗಿತ್ತು ಎಂದು ರಾಘಣ್ಣ ಹೊಗಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *