ಜೇಮ್ಸ್‌ ಮೂಲಕ ಅಣ್ಣನಾದ ಅಪ್ಪು… ನಮ್ಮ ಪುನೀತ್‌, ನಮ್ಮ ಅಪ್ಪು,ಜೇಮ್ಸ್

ಅಣ್ಣಾವ್ರ ಸಿನಿಮಾ ಪರಂಪರೆಗೆ ಅಪ್ಪು ಸಲ್ಲಿಸಿದ ಕೊನೆಯ ಶುಭವಿದಾಯ: ಜೇಮ್ಸ್ ಚಿತ್ರವಿಮರ್ಶೆ 

ಅಣ್ಣಾವ್ರ ಸಿನಿಮಾ ಎಂದರೆ ಸದಭಿರುಚಿಯ ಸಿನಿಮಾ, ಸಮಾಜಕ್ಕೆ ಸಂದೇಶ ಸಾರುವ ಸಿನಿಮಾ. ಎಲ್ಲಾ ವಯೋಮಾನದವರೂ, ಸಕುಟುಂಬಪರಿವಾರ ಸಮೇತರಾಗಿ ನೋಡಬಹುದಾದ ಸಿನಿಮಾ. ‘ಜೇಮ್ಸ್’ ಈ ಸಾಲಿಗೆ ಸೇರುವ ಸಿನಿಮಾ.‌

ವಿಮರ್ಶೆ: ಹರ್ಷವರ್ಧನ್ ಸುಳ್ಯ


ಭಾರತದ ಮೊದಲ ಸೂಪರ್ ಸ್ಟಾರ್ ಎಂದು ಖ್ಯಾತಿ ಪಡೆದ ಬಾಲಿವುಡ್ ನಟ ರಾಜೇಶ್ ಖನ್ನಾ ಕಾರ್ಯಕ್ರಮವೊಂದರ ಜಗಮಗಿಸುವ ವೇದಿಕೆ ಮೇಲೆ, ಅಮಿತಾಭ್ ಉಪಸ್ಥಿತಿಯಲ್ಲಿ ಒಂದು ಮಾತು ಹೇಳಿದ್ದರು. ಆ ವೇಳೆಗೆ ಖನ್ನಾ ತೆರೆಮರೆಗೆ ಸರಿದು ಅಮಿತಾಭ್ ಸೂಪರ್ ಸ್ಟಾರ್ ಆಗಿ, ಬಿಗ್ ಬಿ ಎಂದು ಖ್ಯಾತಿ ಗಳಿಸಿದ್ದ ಸಮಯ. ‘ಇವತ್ತು ನಾನಿರೋ ಜಾಗದಲ್ಲಿ ನೆನ್ನೆ ಬೇರೆ ಯಾರೋ ಇದ್ದರು, ನಾಳೆ ಇನ್ಯಾರೋ!’. ಯಾರ ಸ್ಥಾನವೂ ಯಾವ ದೊಣ್ಣೆನಾಯಕನದೂ ಅಲ್ಲ ಎನ್ನುವುದು ಖನ್ನಾ ಅವರ ಮಾತಿನ ತಾತ್ಪರ್ಯವಾಗಿತ್ತು. ಕನ್ನಡಿಗರ ಪಾಲಿಗೆ ಈ ಮಾತನ್ನು ಸುಳ್ಳಾಗಿಸಿದ್ದು ಪುನೀತ್ ರಾಜ್ ಕುಮಾರ್.

ಆ ಸೀಟು ಮತ್ತು ಸೀಟಿ ರಿಸರ್ವ್ಡ್

ಅಪ್ಪು ಆಸೀನರಾಗಿದ್ದ ಕನ್ನಡಿಗರ ಹೃದಯ ಸಿಂಹಾಸನಗಳು ಯಾವ ಕಾಲಕ್ಕೂ ಆಚಂದ್ರಾರ್ಕ ಅವರಿಗಾಗಿ ರಿಸರ್ವ್ಡ್ ಆಗಿಯೇ ಉಳಿದಿರುತ್ತವೆ. ಅದು ಯಾವತ್ತಿಗೂ ಖಾಲಿಯೇ. ಖಾಲಿತನ ಎಂದರೆ ಏನೆಂಬುದನ್ನು ಕನ್ನಡ ನಾಡಿಗೇ ಏಕಕಾಲಕ್ಕೆ ಕಲಿಸಿಕೊಟ್ಟಿದ್ದನ್ನು ನೆನೆದು ಹನಿಗಣ್ಣಾವುದಷ್ಟೇ ನಮ್ಮ ಪಾಲಿಗೆ ಉಳಿದದ್ದು. ಅಪ್ಪುವನ್ನು ಕೊನೆಯ ಬಾರಿ ಹಿರಿತೆರೆಯ ಮೇಲೆ ನೋಡಿ ಕಣ್ತುಂಬಿಕೊಳ್ಳಲು, ಹನಿಗಣ್ಣಾಗಲು ಸಾಧ್ಯವಾಗಿಸಿದ್ದು ಚೇತನ್ ಕುಮಾರ್ ನಿರ್ದೇಶನದ, ಕಿಶೋರ್ ಪತ್ತಿಕೊಂಡ ನಿರ್ಮಾಣದ ‘ಜೇಮ್ಸ್’ ಸಿನಿಮಾ.

ಪುನೀತ್ ರಾಜ್ ಕುಮಾರ್ ನಾಯಕನಾಗಿ ನಟಿಸಿದ ಕೊನೆಯ ಚಿತ್ರ ‘ಜೇಮ್ಸ್’ ಅಭಿಮಾನಿಗಳ ಪಾಲಿಗೆ ಹಬ್ಬವಾಗುವುದರಲ್ಲಿ ಎರಡು ಮಾತಿಲ್ಲ. ಹಲವು ಕಾರಣಗಳಿಗೆ ಜೇಮ್ಸ್ ಸಿನಿಮಾ ಕನ್ನಡ ಸಿನಿಮಾ ಇತಿಹಾಸದಲ್ಲಿ ಸ್ಥಾನ ಪಡೆದುಕೊಳ್ಳುತ್ತದೆ. ಅಣ್ಣಾವ್ರ ಸಿನಿಮಾ ಎಂದರೆ ಸದಭಿರುಚಿಯ ಸಿನಿಮಾ, ಸಮಾಜಕ್ಕೆ ಸಂದೇಶ ಸಾರುವ ಸಿನಿಮಾ. ಎಲ್ಲಾ ವಯೋಮಾನದವರೂ, ಸಕುಟುಂಬ ಪರಿವಾರ ಸಮೇತರಾಗಿ ನೋಡಬಹುದಾದ ಸಿನಿಮಾಗಳು. ಅ ಸಿನಿಮಾಗಳಲ್ಲಿ ಮೌಲ್ಯಗಳು, ಪಾಸಿಟಿವಿಟಿ ತುಂಬಿರುತ್ತಿದ್ದವು. ಅಣ್ಣಾವ್ರ ಸಿನಿಮಾ ಪರಂಪರೆಯನ್ನು ಯಶಸ್ವಿಯಾಗಿ ಮುಂದುವರಿಸಿದ್ದು ಅಪ್ಪು. ‘ಜೇಮ್ಸ್’ ಈ ಸಾಲಿಗೆ ಸೇರುವ ಸಿನಿಮಾ.  

ಜೇಮ್ಸ್ ಹೆಸರಿನ ರಹಸ್ಯ

ಸಿನಿಮಾದಲ್ಲಿ ಪುನೀತ್ ಹೆಸರು ಸಂತೋಷ್ ಜೇಮ್ಸ್ ಕುಮಾರ್. ಜೇಮ್ಸ್ ಹೆಸರು ಹೇಗೆ ಬಂತು ಅನ್ನೋದನ್ನು ಸಿನಿಮಾ ನೋಡಿ ತಿಳಿದರೇನೇ ಚಂದ. ಸೈನಿಕನಾಗಿ ದೇಶದ್ರೋಹಿಗಳನ್ನು ಬಗ್ಗುಬಡಿಯುವುದರಲ್ಲಿ ಆತ ನಿಸ್ಸೀಮ. ಆದರೆ ದೇಶದ್ರೋಹಿಗಳೆಂದರೆ ಶತ್ರುದೇಶಕ್ಕೆ ಸೇರಿದವರು ಮಾತ್ರವಲ್ಲವಲ್ಲ. ದೇಶದೊಳಗೆ ಮಾದಕವಸ್ತು ಸಾಗಣೆಯಂಥ ಇಲ್ಲೀಗಲ್ ಚಟುವಟಿಕೆಗಳಲ್ಲಿ ತೊಡಗಿದವರ ವಿರುದ್ಧ ಪುನೀತ್ ಸಮರ ಸಾರುತ್ತಾರೆ. ಗ್ಯಾಂಗ್ ಸ್ಟರ್ ಗಳನ್ನು ವಿಜೃಂಭಿಸಿ, ಸೆಲಬ್ರೇಟ್ ಮಾಡುವ ಸಿನಿಮಾಗಳ ನಡುವೆ ಪುನೀತ್, ಗ್ಯಾಂಗ್ ಸ್ಟರ್ ಗಳು ಕೂಡಾ ದೇಶದ್ರೋಹಿಗಳು ಎನ್ನುವ ಸಂದೇಶವನ್ನು ಜೇಮ್ಸ್ ಮೂಲಕ ಸಾರಿದ್ದಾರೆ. ಪುನೀತ್ ಅದಕ್ಕೇ ನಮಗೆ ಇಷ್ಟವಾಗೋದು.

ಒಮ್ಮೆ ಮಹಾರಾಜನೊಬ್ಬ ನಿಧನ ಹೊಂದುತ್ತಾನೆ. ರಾಜನ ಆಪ್ತರೇ ಆಸ್ತಿ ಹೊಡೆಯಲು ಸಂಚು ಮಾಡುತ್ತಾರೆ. ರಾಜನ ಪರಿವಾರದ ಮೇಲೆ ದಾಳಿ ಮಾಡುತ್ತಾರೆ. ಅವರ ರಕ್ಷಣೆಗೆ ಪುನೀತ್ ನಿಲ್ಲುತ್ತಾರೆ. ಈ ಪ್ರಕ್ರಿಯೆಯಲ್ಲಿ ರಾಜನ ಕುಟುಂಬಕ್ಕೆ ಸೇರಿದ ನಾಯಕಿ ನಿಶಾಳ ಮೇಲೆ ಪ್ರೀತಿ ಹುಟ್ಟುತ್ತದೆ. ಪ್ರಿಯಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ. ಅವರಿಗಾಗಿ ಪುನೀತ್ ಗ್ಯಾಂಗ್ ಸ್ಟರ್ ಗಳನ್ನು ಎದುರುಹಾಕಿಕೊಳ್ಳುತ್ತಾರೆ. ಅವರ ಸದ್ದಡಗಿಸಿದ ಮೇಲೆ ಸಿನಿಮಾದ ಮೊದಲ ಟ್ವಿಸ್ಟ್ ಬರುತ್ತದೆ. ಪುನೀತ್ ನಾಯಕಿಯ ಕುಟುಂಬದವರ ರಕ್ಷಣೆಗೆ ಇಳಿದಿದ್ದೇಕೆ? ನಾಯಕನ ದ್ವೇಷಕ್ಕೆ ಕಾರಣವನ್ನು ಫ್ಲ್ಯಾಷ್ ಬ್ಯಾಕ್ ಮೂಲಕ ತೋರಿಸಲಾಗುತ್ತದೆ. 

ಪಂಚಿಂಗ್ ಆಕ್ಷನ್ ಮತ್ತು ಡಯಲಾಗು

ಸಿನಿಮಾದ ಕೆಲ ದೃಶ್ಯಗಳು ಕೆಜಿಎಫ್ ಮತ್ತು ತೆಲುಗಿನ ಸಾಹೋ ಸಿನಿಮಾಗಳನ್ನು ನೆನಪಿಗೆ ತರುತ್ತದೆ. ಸಿನಿಮಾದ ಆಕ್ಷನ್ ಸೀನುಗಳು ತುಂಬಾ ಚೆನ್ನಾಗಿ ಮೂಡಿ ಬಂದಿದ್ದು ಅದರ ಕ್ರೆಡಿಟ್ಟು ಅಪ್ಪುಗೆ ಸಲ್ಲುತ್ತದೆ. ಪುನೀತ್ ಆಪ್ತ ಸ್ನೇಹಿತರಾಗಿ ತಿಲಕ್, ಶೈನ್ ಶೆಟ್ಟಿ, ಚಿಕ್ಕಣ್ಣ, ಹರ್ಷ ಮನೋಜ್ಞವಾಗಿ ನಟಿಸಿದ್ದಾರೆ. ಶರತ್ ಕುಮಾರ್, ಅನು ಪ್ರಭಾಕರ್, ಆದಿತ್ಯ ಮೆನನ್, ಶ್ರೀಕಾಂತ್, ರಂಗಾಯಣ ರಘು, ಸಾಧು ಕೋಕಿಲ ಗಮನಾರ್ಹ ಅಭಿನಯ ನೀಡಿದ್ದಾರೆ. ಇಫ್ ಯೂ ಆರ್ ಗ್ಯಾಂಗ್ ಸ್ಟರ್ ಐಯಾಮ್ ಸೋಲ್ಜರ್, ನಮ್ಮ ರೇಂಜನ್ನು ರೇಂಜ್ ರೋವರ್ ಕಾರ್ ನೋಡಿ ಅಳೆಯಬಾರದು ಎಂಬಿತ್ಯಾದಿ ಪಂಚಿಂಗ್ ಸಂಭಾಷಣೆಗಳು ಸಿನಿಮಾದಲ್ಲಿದೆ.  

ಪುನೀತ್ ಅವರಿಗೆ ದನಿ ನೀಡಿರುವ ಶಿವರಾಜ್ ಕುಮಾರ್ ಸಿನಿಮಾದಲ್ಲಿ ನಟನೆಯನ್ನೂ ಮಾಡಿದ್ದಾರೆ. ಅವರೊಂದಿಗೆ ರಾಘಣ್ಣ ಕೂಡಾ ಕೆಲ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಮೂರೂ ಮಂದಿ ನಟಿಸಿರುವುದು ಜೇಮ್ಸ್ ಸಿನಿಮಾದ ಮತ್ತೊಂದು ಸ್ಪೆಷಾಲಿಟಿ. ಸಿನಿಮಾ ಮುಗಿದ ನಂತರ ಪರದೆ ಮೇಲೆ ಮೂಡುವ ಕ್ರೆಡಿಟ್ ರೋಲ್ ಪ್ರೇಕ್ಷಕರನ್ನು ಅಳಿಸುತ್ತದೆ. ಈ ಕಡೆಯ ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ನೋಡುವುದೇ, ಆ ಭಾವಪೂರ್ಣ ಕಲಾವಿದನಿಗೆ ನಾವು ಸಲ್ಲಿಸಬಹುದಾದ ಅರ್ಥಪೂರ್ಣ ಶುಭವಿದಾಯ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *