ಜೇಮ್ಸ್‌ ಮೂಲಕ ಅಣ್ಣನಾದ ಅಪ್ಪು… ನಮ್ಮ ಪುನೀತ್‌, ನಮ್ಮ ಅಪ್ಪು,ಜೇಮ್ಸ್

ಅಣ್ಣಾವ್ರ ಸಿನಿಮಾ ಪರಂಪರೆಗೆ ಅಪ್ಪು ಸಲ್ಲಿಸಿದ ಕೊನೆಯ ಶುಭವಿದಾಯ: ಜೇಮ್ಸ್ ಚಿತ್ರವಿಮರ್ಶೆ 

ಅಣ್ಣಾವ್ರ ಸಿನಿಮಾ ಎಂದರೆ ಸದಭಿರುಚಿಯ ಸಿನಿಮಾ, ಸಮಾಜಕ್ಕೆ ಸಂದೇಶ ಸಾರುವ ಸಿನಿಮಾ. ಎಲ್ಲಾ ವಯೋಮಾನದವರೂ, ಸಕುಟುಂಬಪರಿವಾರ ಸಮೇತರಾಗಿ ನೋಡಬಹುದಾದ ಸಿನಿಮಾ. ‘ಜೇಮ್ಸ್’ ಈ ಸಾಲಿಗೆ ಸೇರುವ ಸಿನಿಮಾ.‌

ವಿಮರ್ಶೆ: ಹರ್ಷವರ್ಧನ್ ಸುಳ್ಯ


ಭಾರತದ ಮೊದಲ ಸೂಪರ್ ಸ್ಟಾರ್ ಎಂದು ಖ್ಯಾತಿ ಪಡೆದ ಬಾಲಿವುಡ್ ನಟ ರಾಜೇಶ್ ಖನ್ನಾ ಕಾರ್ಯಕ್ರಮವೊಂದರ ಜಗಮಗಿಸುವ ವೇದಿಕೆ ಮೇಲೆ, ಅಮಿತಾಭ್ ಉಪಸ್ಥಿತಿಯಲ್ಲಿ ಒಂದು ಮಾತು ಹೇಳಿದ್ದರು. ಆ ವೇಳೆಗೆ ಖನ್ನಾ ತೆರೆಮರೆಗೆ ಸರಿದು ಅಮಿತಾಭ್ ಸೂಪರ್ ಸ್ಟಾರ್ ಆಗಿ, ಬಿಗ್ ಬಿ ಎಂದು ಖ್ಯಾತಿ ಗಳಿಸಿದ್ದ ಸಮಯ. ‘ಇವತ್ತು ನಾನಿರೋ ಜಾಗದಲ್ಲಿ ನೆನ್ನೆ ಬೇರೆ ಯಾರೋ ಇದ್ದರು, ನಾಳೆ ಇನ್ಯಾರೋ!’. ಯಾರ ಸ್ಥಾನವೂ ಯಾವ ದೊಣ್ಣೆನಾಯಕನದೂ ಅಲ್ಲ ಎನ್ನುವುದು ಖನ್ನಾ ಅವರ ಮಾತಿನ ತಾತ್ಪರ್ಯವಾಗಿತ್ತು. ಕನ್ನಡಿಗರ ಪಾಲಿಗೆ ಈ ಮಾತನ್ನು ಸುಳ್ಳಾಗಿಸಿದ್ದು ಪುನೀತ್ ರಾಜ್ ಕುಮಾರ್.

ಆ ಸೀಟು ಮತ್ತು ಸೀಟಿ ರಿಸರ್ವ್ಡ್

ಅಪ್ಪು ಆಸೀನರಾಗಿದ್ದ ಕನ್ನಡಿಗರ ಹೃದಯ ಸಿಂಹಾಸನಗಳು ಯಾವ ಕಾಲಕ್ಕೂ ಆಚಂದ್ರಾರ್ಕ ಅವರಿಗಾಗಿ ರಿಸರ್ವ್ಡ್ ಆಗಿಯೇ ಉಳಿದಿರುತ್ತವೆ. ಅದು ಯಾವತ್ತಿಗೂ ಖಾಲಿಯೇ. ಖಾಲಿತನ ಎಂದರೆ ಏನೆಂಬುದನ್ನು ಕನ್ನಡ ನಾಡಿಗೇ ಏಕಕಾಲಕ್ಕೆ ಕಲಿಸಿಕೊಟ್ಟಿದ್ದನ್ನು ನೆನೆದು ಹನಿಗಣ್ಣಾವುದಷ್ಟೇ ನಮ್ಮ ಪಾಲಿಗೆ ಉಳಿದದ್ದು. ಅಪ್ಪುವನ್ನು ಕೊನೆಯ ಬಾರಿ ಹಿರಿತೆರೆಯ ಮೇಲೆ ನೋಡಿ ಕಣ್ತುಂಬಿಕೊಳ್ಳಲು, ಹನಿಗಣ್ಣಾಗಲು ಸಾಧ್ಯವಾಗಿಸಿದ್ದು ಚೇತನ್ ಕುಮಾರ್ ನಿರ್ದೇಶನದ, ಕಿಶೋರ್ ಪತ್ತಿಕೊಂಡ ನಿರ್ಮಾಣದ ‘ಜೇಮ್ಸ್’ ಸಿನಿಮಾ.

ಪುನೀತ್ ರಾಜ್ ಕುಮಾರ್ ನಾಯಕನಾಗಿ ನಟಿಸಿದ ಕೊನೆಯ ಚಿತ್ರ ‘ಜೇಮ್ಸ್’ ಅಭಿಮಾನಿಗಳ ಪಾಲಿಗೆ ಹಬ್ಬವಾಗುವುದರಲ್ಲಿ ಎರಡು ಮಾತಿಲ್ಲ. ಹಲವು ಕಾರಣಗಳಿಗೆ ಜೇಮ್ಸ್ ಸಿನಿಮಾ ಕನ್ನಡ ಸಿನಿಮಾ ಇತಿಹಾಸದಲ್ಲಿ ಸ್ಥಾನ ಪಡೆದುಕೊಳ್ಳುತ್ತದೆ. ಅಣ್ಣಾವ್ರ ಸಿನಿಮಾ ಎಂದರೆ ಸದಭಿರುಚಿಯ ಸಿನಿಮಾ, ಸಮಾಜಕ್ಕೆ ಸಂದೇಶ ಸಾರುವ ಸಿನಿಮಾ. ಎಲ್ಲಾ ವಯೋಮಾನದವರೂ, ಸಕುಟುಂಬ ಪರಿವಾರ ಸಮೇತರಾಗಿ ನೋಡಬಹುದಾದ ಸಿನಿಮಾಗಳು. ಅ ಸಿನಿಮಾಗಳಲ್ಲಿ ಮೌಲ್ಯಗಳು, ಪಾಸಿಟಿವಿಟಿ ತುಂಬಿರುತ್ತಿದ್ದವು. ಅಣ್ಣಾವ್ರ ಸಿನಿಮಾ ಪರಂಪರೆಯನ್ನು ಯಶಸ್ವಿಯಾಗಿ ಮುಂದುವರಿಸಿದ್ದು ಅಪ್ಪು. ‘ಜೇಮ್ಸ್’ ಈ ಸಾಲಿಗೆ ಸೇರುವ ಸಿನಿಮಾ.  

ಜೇಮ್ಸ್ ಹೆಸರಿನ ರಹಸ್ಯ

ಸಿನಿಮಾದಲ್ಲಿ ಪುನೀತ್ ಹೆಸರು ಸಂತೋಷ್ ಜೇಮ್ಸ್ ಕುಮಾರ್. ಜೇಮ್ಸ್ ಹೆಸರು ಹೇಗೆ ಬಂತು ಅನ್ನೋದನ್ನು ಸಿನಿಮಾ ನೋಡಿ ತಿಳಿದರೇನೇ ಚಂದ. ಸೈನಿಕನಾಗಿ ದೇಶದ್ರೋಹಿಗಳನ್ನು ಬಗ್ಗುಬಡಿಯುವುದರಲ್ಲಿ ಆತ ನಿಸ್ಸೀಮ. ಆದರೆ ದೇಶದ್ರೋಹಿಗಳೆಂದರೆ ಶತ್ರುದೇಶಕ್ಕೆ ಸೇರಿದವರು ಮಾತ್ರವಲ್ಲವಲ್ಲ. ದೇಶದೊಳಗೆ ಮಾದಕವಸ್ತು ಸಾಗಣೆಯಂಥ ಇಲ್ಲೀಗಲ್ ಚಟುವಟಿಕೆಗಳಲ್ಲಿ ತೊಡಗಿದವರ ವಿರುದ್ಧ ಪುನೀತ್ ಸಮರ ಸಾರುತ್ತಾರೆ. ಗ್ಯಾಂಗ್ ಸ್ಟರ್ ಗಳನ್ನು ವಿಜೃಂಭಿಸಿ, ಸೆಲಬ್ರೇಟ್ ಮಾಡುವ ಸಿನಿಮಾಗಳ ನಡುವೆ ಪುನೀತ್, ಗ್ಯಾಂಗ್ ಸ್ಟರ್ ಗಳು ಕೂಡಾ ದೇಶದ್ರೋಹಿಗಳು ಎನ್ನುವ ಸಂದೇಶವನ್ನು ಜೇಮ್ಸ್ ಮೂಲಕ ಸಾರಿದ್ದಾರೆ. ಪುನೀತ್ ಅದಕ್ಕೇ ನಮಗೆ ಇಷ್ಟವಾಗೋದು.

ಒಮ್ಮೆ ಮಹಾರಾಜನೊಬ್ಬ ನಿಧನ ಹೊಂದುತ್ತಾನೆ. ರಾಜನ ಆಪ್ತರೇ ಆಸ್ತಿ ಹೊಡೆಯಲು ಸಂಚು ಮಾಡುತ್ತಾರೆ. ರಾಜನ ಪರಿವಾರದ ಮೇಲೆ ದಾಳಿ ಮಾಡುತ್ತಾರೆ. ಅವರ ರಕ್ಷಣೆಗೆ ಪುನೀತ್ ನಿಲ್ಲುತ್ತಾರೆ. ಈ ಪ್ರಕ್ರಿಯೆಯಲ್ಲಿ ರಾಜನ ಕುಟುಂಬಕ್ಕೆ ಸೇರಿದ ನಾಯಕಿ ನಿಶಾಳ ಮೇಲೆ ಪ್ರೀತಿ ಹುಟ್ಟುತ್ತದೆ. ಪ್ರಿಯಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ. ಅವರಿಗಾಗಿ ಪುನೀತ್ ಗ್ಯಾಂಗ್ ಸ್ಟರ್ ಗಳನ್ನು ಎದುರುಹಾಕಿಕೊಳ್ಳುತ್ತಾರೆ. ಅವರ ಸದ್ದಡಗಿಸಿದ ಮೇಲೆ ಸಿನಿಮಾದ ಮೊದಲ ಟ್ವಿಸ್ಟ್ ಬರುತ್ತದೆ. ಪುನೀತ್ ನಾಯಕಿಯ ಕುಟುಂಬದವರ ರಕ್ಷಣೆಗೆ ಇಳಿದಿದ್ದೇಕೆ? ನಾಯಕನ ದ್ವೇಷಕ್ಕೆ ಕಾರಣವನ್ನು ಫ್ಲ್ಯಾಷ್ ಬ್ಯಾಕ್ ಮೂಲಕ ತೋರಿಸಲಾಗುತ್ತದೆ. 

ಪಂಚಿಂಗ್ ಆಕ್ಷನ್ ಮತ್ತು ಡಯಲಾಗು

ಸಿನಿಮಾದ ಕೆಲ ದೃಶ್ಯಗಳು ಕೆಜಿಎಫ್ ಮತ್ತು ತೆಲುಗಿನ ಸಾಹೋ ಸಿನಿಮಾಗಳನ್ನು ನೆನಪಿಗೆ ತರುತ್ತದೆ. ಸಿನಿಮಾದ ಆಕ್ಷನ್ ಸೀನುಗಳು ತುಂಬಾ ಚೆನ್ನಾಗಿ ಮೂಡಿ ಬಂದಿದ್ದು ಅದರ ಕ್ರೆಡಿಟ್ಟು ಅಪ್ಪುಗೆ ಸಲ್ಲುತ್ತದೆ. ಪುನೀತ್ ಆಪ್ತ ಸ್ನೇಹಿತರಾಗಿ ತಿಲಕ್, ಶೈನ್ ಶೆಟ್ಟಿ, ಚಿಕ್ಕಣ್ಣ, ಹರ್ಷ ಮನೋಜ್ಞವಾಗಿ ನಟಿಸಿದ್ದಾರೆ. ಶರತ್ ಕುಮಾರ್, ಅನು ಪ್ರಭಾಕರ್, ಆದಿತ್ಯ ಮೆನನ್, ಶ್ರೀಕಾಂತ್, ರಂಗಾಯಣ ರಘು, ಸಾಧು ಕೋಕಿಲ ಗಮನಾರ್ಹ ಅಭಿನಯ ನೀಡಿದ್ದಾರೆ. ಇಫ್ ಯೂ ಆರ್ ಗ್ಯಾಂಗ್ ಸ್ಟರ್ ಐಯಾಮ್ ಸೋಲ್ಜರ್, ನಮ್ಮ ರೇಂಜನ್ನು ರೇಂಜ್ ರೋವರ್ ಕಾರ್ ನೋಡಿ ಅಳೆಯಬಾರದು ಎಂಬಿತ್ಯಾದಿ ಪಂಚಿಂಗ್ ಸಂಭಾಷಣೆಗಳು ಸಿನಿಮಾದಲ್ಲಿದೆ.  

ಪುನೀತ್ ಅವರಿಗೆ ದನಿ ನೀಡಿರುವ ಶಿವರಾಜ್ ಕುಮಾರ್ ಸಿನಿಮಾದಲ್ಲಿ ನಟನೆಯನ್ನೂ ಮಾಡಿದ್ದಾರೆ. ಅವರೊಂದಿಗೆ ರಾಘಣ್ಣ ಕೂಡಾ ಕೆಲ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಮೂರೂ ಮಂದಿ ನಟಿಸಿರುವುದು ಜೇಮ್ಸ್ ಸಿನಿಮಾದ ಮತ್ತೊಂದು ಸ್ಪೆಷಾಲಿಟಿ. ಸಿನಿಮಾ ಮುಗಿದ ನಂತರ ಪರದೆ ಮೇಲೆ ಮೂಡುವ ಕ್ರೆಡಿಟ್ ರೋಲ್ ಪ್ರೇಕ್ಷಕರನ್ನು ಅಳಿಸುತ್ತದೆ. ಈ ಕಡೆಯ ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ನೋಡುವುದೇ, ಆ ಭಾವಪೂರ್ಣ ಕಲಾವಿದನಿಗೆ ನಾವು ಸಲ್ಲಿಸಬಹುದಾದ ಅರ್ಥಪೂರ್ಣ ಶುಭವಿದಾಯ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *