ಆರ್‌ಎಸ್‌ಎಸ್, ಬಿಜೆಪಿಯಿಂದ ದೇಶದ ಸಾಮರಸ್ಯ, ವೈವಿಧ್ಯತೆ, ಏಕತೆಗೆ ಅಪಾಯ: ಬೃಂದಾ ಕಾರಟ್

ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಿದ್ಧಾಂತಗಳಿಂದ ಭಾರತದ ಸೌಹಾರ್ದತೆ, ಏಕತೆ, ವೈವಿಧ್ಯತೆ ಮತ್ತು ಸಂವಿಧಾನಕ್ಕೆ ಬಾಹ್ಯ ಶತ್ರುಗಳಿಗಿಂತಲೂ ಹೆಚ್ಚಿನ ಅಪಾಯ ಇದೆ ಎಂದು ಸಿಪಿಐ(ಎಂ) ಪಾಲಿಟ್‌ ಬ್ಯುರೊ ಸದಸ್ಯೆ, ರಾಜ್ಯಸಭಾ ಸದಸ್ಯೆ ಬೃಂದಾ…

karat1

ಮಂಗಳೂರು: ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಿದ್ಧಾಂತಗಳಿಂದ ಭಾರತದ ಸೌಹಾರ್ದತೆ, ಏಕತೆ, ವೈವಿಧ್ಯತೆ ಮತ್ತು ಸಂವಿಧಾನಕ್ಕೆ ಬಾಹ್ಯ ಶತ್ರುಗಳಿಗಿಂತಲೂ ಹೆಚ್ಚಿನ ಅಪಾಯ ಇದೆ ಎಂದು ಸಿಪಿಐ(ಎಂ) ಪಾಲಿಟ್‌ ಬ್ಯುರೊ ಸದಸ್ಯೆ, ರಾಜ್ಯಸಭಾ ಸದಸ್ಯೆ ಬೃಂದಾ ಕಾರಟ್ ಅವರು ಸೋಮವಾರ ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಘಟನೆಗಳ ಹಿನ್ನೆಲೆಯಲ್ಲಿ ಸಿಪಿಐ(ಎಂ) ದಕ್ಷಿಣ ಕನ್ನಡ ಘಟಕ ಆಯೋಜಿಸಿದ್ದ ಸೌಹಾರ್ದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕಾರಟ್, ಆರ್‌ಎಸ್‌ಎಸ್ ಮತ್ತು ಬಿಜೆಪಿ ದೇಶಕ್ಕೆ ಹೆಚ್ಚು ಅಪಾಯಕಾರಿ ಎಂದು ಜನತೆಗೆ ಎಚ್ಚರಿಕೆ ನೀಡಿದರು.

ಆರ್ ಎಸ್ಎಸ್ ಮತ್ತು ಅದರ ಅಂಗಸಂಸ್ಥೆಗಳು ದೇಶದ ದೊಡ್ಡ ಶತ್ರುಗಳು. ಅವರ ಕೋಮುವಾದಿ ಸಿದ್ಧಾಂತ ಕೇವಲ ಅಲ್ಪಸಂಖ್ಯಾತರು ಮಾತ್ರವಲ್ಲ, ಪ್ರತಿಯೊಬ್ಬರ ಮೇಲೂ ಪರಿಣಾಮ ಬೀರುತ್ತದೆ. ಇದು ದೇಶವನ್ನು ಕೋಮುವಾದಿ ಮತ್ತು ಸರ್ವಾಧಿಕಾರಿ ಆಡಳಿತಕ್ಕೆ ಕೊಂಡೊಯ್ಯುವ ಮೂಲಕ ಭಾರತೀಯ ಗಣರಾಜ್ಯದ ಪ್ರತಿಯೊಂದು ಸ್ವರೂಪವನ್ನು ಬದಲಾಯಿಸುತ್ತದೆ” ಎಂದು ಹೇಳಿದರು.

ಇದೇ ವೇಳೆ ಹಿಜಾಬ್ ನಿಷೇಧದ ಬಗ್ಗೆ ಮಾತನಾಡಿದ ಅವರು, ಬಾಲಕಿಯರು ಹಲವು ಅಡೆತಡೆಗಳನ್ನು ಮುರಿದು ಶಿಕ್ಷಣ ಪಡೆಯಲು ಯತ್ನಿಸುತ್ತಿದ್ದಾರೆ. ಅವರಿಗೆ ಹಿಜಾಬ್ ತೆಗೆಯುವಂತೆ ಸೂಚಿಸುವುದು ನಾಚಿಕೆಗೇಡಿತನ. ಹಿಜಾಬ್ ಅನ್ನು ನಿಷೇಧಿಸುವ ಹೈಕೋರ್ಟ್ ತೀರ್ಪು ‘ದುರದೃಷ್ಟಕರ’ ಎಂದ ಕಾರಟ್, ಸುಪ್ರೀಂ ಕೋರ್ಟ್ ಈ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಹೇಳಿದರು.

ಆಡಳಿತಾರೂಢ ಬಿಜೆಪಿ ತನ್ನ ‘ವೈಫಲ್ಯ’ಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಹಿಜಾಬ್‌ ವಿವಾದ ಸೃಷ್ಟಿಸಿತು ಎಂದು ಬೃಂದಾ ಕಾರಟ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನೂ ಕಾಶ್ಮೀರ್ ಫೈಲ್ ಚಿತ್ರದಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದ ಸಿಪಿಐ ನಾಯಕಿ, ಈ ಚಿತ್ರ ಹಿಂಸೆಯ ಪ್ರದರ್ಶನವಾಗಿದ್ದು, ಒಂದು ಸಮುದಾಯದ ಮೇಲೆ ದ್ವೇಷ ಸಾಧನೆಗಾಗಿ ಮಾಡಿದ ಕ್ರೌರ್ಯದ ವಿಜೃಂಭಣೆಯಂತಿದೆ. ಕಾಶ್ಮೀರಿ ಜನರ ಒಗ್ಗಟ್ಟು ಪ್ರದರ್ಶನ ಮತ್ತು ಪಂಡಿತರನ್ನು ಸುರಕ್ಷಿತವಾಗಿ ಹುಟ್ಟೂರಿಗೆ ಕರೆತಂದು ಅವರಿಗೆ ನ್ಯಾಯ ಒದಗಿಸುವ ಕೆಲಸಕ್ಕೆ ಆದ್ಯತೆ ಕೊಡಬೇಕು. ಸಿನಿಮಾ ಮೂಲಕ ಹಿಂಸೆಯ ವಿಜೃಂಭಣೆಯಿಂದ ಯಾರಿಗೂ ಲಾಭವಾಗದು ಎಂದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *