ಅಪರೂಪದ ವೃಕ್ಷ ನಮನ


ಸಿದ್ದಾಪುರ; ತಾಲೂಕಿನ ಕಾನಳ್ಳಿಯಲ್ಲಿ ಬುಧವಾರ ವೃಕ್ಷ ನಮನ ಎಂಬ ವಿಶೇಷವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸುಮಾರು ಐದು ನೂರು ವರ್ಷಗಳಷ್ಟು ಹಳೆಯದಾದ ಗೋಣಿ ( ಪೈಕಾಸ್ ಮೈಸೂರಾನ್ಸಿಸ್) ಆಲದ ಪ್ರಭೇದದ ಜಾತಿಯ ಮರವು ಯಾವುದೋ ರೋಗದ ಕಾರಣ ಕಳೆದ ವರ್ಷ ಸಂಪೂರ್ಣವಾಗಿ ಒಣಗಿ ಹೋಗಿದೆ. ಪರಿಸರವು ನಮ್ಮ ಜೀವನಾಡಿ ಎಂಬದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ನಾವು ಅದರೊಂದಿಗೆ ಎಷ್ಟು ಅನ್ಯೋನ್ಯವಾಗಿದ್ದೇವೆ ಎನ್ನುವುದು ಮುಖ್ಯ. ಇಂದಿನ ದಿನಗಳಲ್ಲಿ ಮನುಷ್ಯ ರೇ ತಮ್ಮ ಸಂಬಂಧ ಗಳನ್ನು ಅನ್ಯೋನ್ಯ ವಾಗಿಟ್ಟುಕೊಳ್ಳುವುದು ಕಷ್ಟ. ಆದರೆ ಕಾನಳ್ಳಿಯ ಜನತೆ ಈ ಗೋಣಿ ಮರದ ಅಡಿಯಲ್ಲಿ ಒಡನಾಡಿದ ಅದರ ನೆನಪಿಗಾಗಿ ಇಂದು ವೃಕ್ಷಕ್ಕೆ ನಮನ ಸಲ್ಲಿಸಿದರು.
ಮರಕ್ಕೆ ಪೂಜೆ ಸಲ್ಲಿಸಿ ನಂತರ ಈ ಕಾರ್ಯಕ್ರಮದ ರೂವಾರಿ ಪರಮೇಶ್ವರಯ್ಯ ಕಾನಳ್ಳಿಮಠ ಮಾತನಾಡಿ ಜಾನುವಾರುಗಳು, ಪಕ್ಷಿಗಳು, ದಾರಿಹೋಕರಿಗೆ ಈ ಮರ ಆಶ್ರಯ ತಾಣವಾಗಿತ್ತು. ದಾರಿಯಲ್ಲಿ ಓಡಾಡುವ ಎಷ್ಟೋ ಜನರು ಇದರ ನೆರಳಿನ ಆಶ್ರಯ ಪಡೆದಿದ್ದರು. ಅದೆಷ್ಟೋ ಜನ ಉಪ್ಪಿನಕಾಯಿ ಗೆ ಗೋಣಿಕಾಯಿ ತೆಗೆಯಲು ಬರುತ್ತಿದ್ದರು. ಹಲವಾರು ಪಕ್ಷಿಗಳು ಇದರ ಹಣ್ಣು ಅರಸಿ ಬರುತ್ತಿದ್ದವು. ಹೀಗೆ ಸುಮಾರು ಐದು ನೂರು ವರ್ಷಗಳ ಹಳೆಯದಾದ ಪರೋಪಕಾರಿ ಯಾದ ಈ ಗೋಣಿ ಮರ ನೆನಪು ಮಾತ್ರ ಎಂದರು. ಇಂದು
ಬಲಿದಾನ ದಿವಸದ ಆಗಿದ್ದರಿಂದ ಸ್ವಾತಂತ್ರ್ಯ ಸಂಗ್ರಾಮವನ್ನು ನೆನಪಿಸಿದರು. ಹಾಗೆ ಒಂದು ನಿಮಿಷದ ಮೌನಾಚರಣೆ ಮಾಡಲಾಯಿತು.

ನಿವೃತ ಶಿಕ್ಷಕ ಶ್ರೀಪಾದ ಹೆಗಡೆ ಮಾತನಾಡಿ ನಮ್ಮ ಹಾಗೂ ಪರಿಸರ ದ ಸಂಬಂಧ ಕ್ಕೆ ಸಾಕ್ಷಿಯಾಗಿ ಅಶ್ರುತರ್ಪಣ ಕಾರ್ಯಕ್ರಮ ಹಮ್ಮಿಕೊಂಡಿದ್ದೀರಿ.
ವ್ಯಕ್ತಿ ನೆರವಾಗಿ ಸಮಾಜಕ್ಕೆ ಸಹಾಯ ಮಾಡಿದರೆ ವೃಕ್ಷ ಪರೋಕ್ಷವಾಗಿ ಪ್ರಾಣಿ ಪಕ್ಷಿ, ಮನುಷ್ಯ ರಿಗೆ ಸಹಾಯ ಮಾಡುತ್ತದೆ. ಪರೋಪಕಾರಿ ಯಾಗಿ ಕಾರ್ಯ ನಿರ್ವಹಿಸುತ್ತದೆ.
ವೃಕ್ಷರಾಜ ವಂಶಕ್ಕೆ ಸೇರಿದ ಮರ ಇದು.
ಒಂದು ಮರ ಹೋದರೆ ಮತ್ತೊಂದು ಗಿಡ ನೆಟ್ಟ ಅದು ಸದಾ ನೆನಪಿನಲ್ಲಿರುವಂತ ಕಾರ್ಯ ಆಗಬೇಕು. ಅದರೊಂದಿಗೆ ಪರಿಸರ ಬೆಳೆಸಬೇಕು, ಉಳಿಸಬೇಕು ಎನ್ನುವ ಪರಿಕಲ್ಪನೆ ಮುಂದಿನ ಜನಾಂಗಕ್ಕೆ ಬರಬೇಕು ಎಂದರು.


ಅರಣ್ಯ ರಕ್ಷಕ ವಿನೋದ್ ಮಾತನಾಡಿ ನಮ್ಮ ನಮ್ಮಲ್ಲಿಯೇ ಉತ್ತಮ ಬಾಧವ್ಯ ಇಲ್ಲದ ಇಂದಿನ ದಿನದಲ್ಲಿ ಮರಕ್ಕೆ ಇಂತಹ ಕಾರ್ಯಕ್ರಮ ಮಾಡಿದ್ದು ಇಲ್ಲಿಯ ಜನರ ಸುಸಂಸ್ಕೃತಿಯನ್ನು ತೋರಿಸುತ್ತದೆ. ಜೊತೆಗೆ ಪರಿಸರ ಅಭಿವೃದ್ಧಿ ನಮ್ಮ ಕಾಯಕ ಆಗಬೇಕು ಎಂದರು.
ಗ್ರಾಮದ ಹಿರಿಯ ಕೆರಿಯಣ್ಣ ಕಾನಳ್ಳಿ ಮಾತನಾಡಿ ಮರದ ಒಡನಾಟವನ್ನು ನೆನೆದು ಭಾವುಕರಾದರು.
ಪತ್ರಕರ್ತ ಸುರೇಶ ಮಡಿವಾಳ, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆ ಯರು, ಮಕ್ಕಳು, ಮಹಿಳೆಯರು, ಯುವಕರು, ಯುವತಿಯ ರು ಸೇರಿದಂತೆ ಗ್ರಾಮಸ್ಥರು ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು.
ಮೇಘನಾ ಕಾನಳ್ಳಿ ಪ್ರಾರ್ಥಿಸಿದರು.
ಗೋಪಾಲ್ ಕಾನಳ್ಳಿ ಸ್ವಾಗತಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *