ಶಾಸಕ ಹಾಲಪ್ಪ ಮೇಲೆ ಕ್ರಮಕ್ಕೆ ಗೋಪಾಲಕೃಷ್ಣ ಒತ್ತಾಯ

ಶಾಸಕ ಹಾಲಪ್ಪ ಸುಮ್ಮುಖದಲ್ಲೇ ಹಲ್ಲೆ ಪ್ರಕರಣ : FIR ದಾಖಲಿಸುಂತೆ ಬೇಳೂರು ಗೋಪಾಲಕೃಷ್ಣ ಆಗ್ರಹ

https://samajamukhi.net/2022/03/?fbclid=IwAR3rTX5NW1YjVupLan6YLob_Wjpsyy5PkLDXCU-VZhYc7yyj6mByosuo-ps

ಶಾಸಕ ಹಾಲಪ್ಪ ಎಫ್ಐಆರ್ ಹಾಕದಂತೆ ಪೊಲೀಸರ ಮೇಲೆ ಹಾಕಿರುವ ಒತ್ತಡವನ್ನು ಹಿಂಪಡೆದು, ಅವರೇ ಎಫ್ಐಆರ್ ದಾಖಲಿಸಬೇಕು. ಅವರ ಸಮ್ಮುಖದಲ್ಲೇ ನಡೆದ ಹಲ್ಲೆಗೆ ಬೇರೆ ಯಾರು ಸಾಕ್ಷಿ ಬೇಡ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದ್ದಾರೆ.

ಶಿವಮೊಗ್ಗ: ಸಾಗರದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಶಾಸಕ ಹಾಲಪ್ಪ ಅವರ ಸಮ್ಮುಖದಲ್ಲೇ ಹಲ್ಲೆ ನಡೆದಿದ್ದು, ಕೂಡಲೇ ಪ್ರಕರಣ ದಾಖಲಿಸಬೇಕು ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದ್ದಾರೆ. ಸಾಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಈ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.https://prod.suv.etvbharat.com/v2/smart_urls/6243294e71d60097bf977eed/embedplayer1?player_version=v3&notplay=true&autoplay=false&mute=false&thumbnailurl=https://etvbharatimages.akamaized.net/etvbharat/prod-

ಬೇಳೂರು ಗೋಪಾಲಕೃಷ್ಣ ಆಗ್ರಹ

ಹಲ್ಲೆ ಎನ್ನುವುದು ನಡೆಯಬಾರದು. ಅದು ಸಹ ಶಾಸಕರ‌ ಸಮ್ಮುಖದಲ್ಲಿ ನಡೆದಂತಹ ಹಲ್ಲೆಯನ್ನ ಖಂಡಿಸಬೇಕಾಗಿದೆ. ಮಲೆನಾಡು ಅಭಿವೃದ್ಧಿ ಪ್ರತಿಷ್ಟಾನದ ಸರ್ವ ಸದಸ್ಯರ ಸಭೆಯಲ್ಲಿ ಶಾಸಕರ ಬೆಂಬಲಿಗರು ಮಾಡಿದ ಹಲ್ಲೆ ಮಾನವ ಸಮಾಜ ತಲೆ ತಗ್ಗಿಸುವಂತದ್ದು. ಹಲ್ಲೆ ನಂತರ ಜಗದೀಶಗೌಡ ಮತ್ತು ಶ್ರೀಪಾದ ಹೆಗಡೆ ನಿಸರಾಣಿಯವರ ಮನೆಗೆ ನಾನು ಭೇಟಿ ನೀಡಿ ಸಮಾಧಾನ ಹೇಳಿದ್ದೇನೆ. ನಾನು ಭೇಟಿ ನೀಡಿದಾಗ ಅವರು ಕುಟುಂಬದ ಎಲ್ಲರೂ ಕಣ್ಣೀರು ಹಾಕಿದ್ದಾರೆ. ಅದರ ಶಾಪ ಶಾಸಕ ಹಾಲಪ್ಪಗೆ ತಟ್ಟಲಿದೆ ಎಂದು ಕಿಡಿಕಾರಿದರು.

ಪೊಲೀಸರು ಸಹ ಹಾಲಪ್ಪರ ಬೆಂಬಲಕ್ಕೆ ನಿಂತಿದ್ದಾರೆ : ಶ್ರೀಪಾದ ಹೆಗಡೆಯವರ ಹೆಂಡತಿ ಮತ್ತು ಮಗಳು ಹಲ್ಲೆಯಾದಾಗ ಅಳುತ್ತಿದ್ದರು. ಆದರೆ ಶಾಸಕ ಹಾಲಪ್ಪ ಅದನ್ನು ನೋಡಿ ನಗುತ್ತಿದ್ದರಂತೆ ಇದು ನೀಚತನದ ಪರಮಾವಧಿ. ಬಿಜೆಪಿ ಶಿಸ್ತಿನ ಪಕ್ಷ, ಆದರೆ ಹಲ್ಲೆ ನಡೆದ ಸ್ಥಳದಲ್ಲಿದ್ದ ಶಾಸಕರ ಮೇಲೆ ಏನು ಕ್ರಮ ಕೈಗೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ. ಈ ವಿಷಯದಲ್ಲಿ ಪೊಲೀಸರು ಸಹ ಹಾಲಪ್ಪರ ಬೆಂಬಲಕ್ಕೆ ನಿಂತಿದ್ದಾರೆ. ಈವರೆಗೂ ಎಫ್ಐಆರ್ ದಾಖಲಾಗದಿರುವುದು ದುರಂತವೇ ಸರಿ ಎಂದು ದೂರಿದರು.

ಈ ವಿಷಯವನ್ನು ನಾನು ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಬಳಿ ಪ್ರಸ್ತಾಪಿಸುತ್ತೇನೆ. ಶಾಸಕರಾದವರು ಎಲ್ಲರನ್ನು ಜೊತೆಗೊಯ್ಯಬೇಕು. ಆದರೆ ಒಡೆದು ಆಳುವ ತಂತ್ರಮಾಡುವ ಕೆಲಸ ಶಾಸಕ ಹಾಲಪ್ಪ ಮಾಡುತ್ತಿದ್ದಾರೆ. ಶಾಸಕರಿಗೆ ಸಾಗರದ ಜನತೆ ಮತ ನೀಡಿದ್ದು, ಯಡಿಯೂರಪ್ಪನವರ ಮುಖ ನೋಡಿಯೇ ವಿನಃ ಹಾಲಪ್ಪನನ್ನು ನೋಡಿ ಅಲ್ಲ.‌ ವಲಸಿಗರಾದವರು ಶಾಸಕರಾದರೇ ಹೊಡೆದಾಟವೇ ಗತಿ ಎಂದು ಆರೋಪಿಸಿದರು.‌

ಎಫ್ಐಆರ್ ದಾಖಲಿಸುವಂತೆ ಆಗ್ರಹ : ಈ ಕೂಡಲೇ ಶಾಸಕರು ಎಫ್ಐಆರ್ ಹಾಕದಂತೆ ಪೊಲೀಸರ ಮೇಲೆ ಹಾಕಿರುವ ಒತ್ತಡವನ್ನು ಹಿಂಪಡೆದು, ಅವರೇ ಎಫ್ಐಆರ್ ದಾಖಲಿಸಬೇಕು. ಅವರ ಸಮ್ಮುಖದಲ್ಲಿ ನಡೆದ ಹಲ್ಲೆಗೆ ಬೇರೆ ಯಾರೂ ಸಾಕ್ಷಿ ಬೇಡ. ನಮ್ಮ ಸಾಗರ ಶಾಂತವಾಗಿತ್ತು. ಈಗ ಗೂಂಡಾಗಿರಿ ನಗರ ಆಗುತ್ತಿದೆ. ನನ್ನ ಹತ್ತು ವರ್ಷಗಳ ಆಡಳಿತದಲ್ಲಿ ಎಲ್ಲಿಯೂ ಹಲ್ಲೆಗಳು, ಗೂಂಡಾ ವರ್ತನೆಗಳು ನಡೆದಿರಲಿಲ್ಲ. ಆದರೆ, ಹಾಲಪ್ಪ ಅವಧಿಯಲ್ಲಿ ನಿರಂತರವಾಗಿ ಹಲ್ಲೆಗಳಾಗುತ್ತಿವೆ. ಆಸ್ಪತ್ರೆಯಲ್ಲೂ ಹಲ್ಲೆ ಮಾಡಿದರು. ಪ್ರಶ್ನೆ ಮಾಡುವವರನ್ನು ಹೆದರಿಸಿಡುವ ತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಶಾಸಕರೇ ಕೆರೆಯ ಜಾಗ ಒತ್ತುವರಿ ..? : ಶಾಸಕರು‌ ಸಂತೆ ಮಾರುಕಟ್ಟೆಯನ್ನು ಮದುವೆ ಆರತಕ್ಷತೆಗೆ ಬಳಸಿದ್ದಾರೆ. ಅದನ್ನು, ಕೂಡಲೇ ಲೋಕಾರ್ಪಣೆ ಮಾಡಬೇಕು.‌ ಗಣಪತಿ ಕೆರೆ ವಿಚಾರದಲ್ಲಿ ಒತ್ತುವರಿ ಮಾಡಿದ್ದಕ್ಕೆ ಹಾಲಪ್ಪನವರಿಗೆ ನೋಟಿಸ್ ನೀಡಲಾಗಿದೆ. ಶಾಸಕರೇ ಕೆರೆಯ ಜಾಗ ಒತ್ತುವರಿ ಮಾಡಿದರೆ ಹೇಗೆ? ಇತ್ತೀಚೆಗೆ ಸಾಗರಕ್ಕೆ ಶಿವಾಜಿ ಜಯಂತಿಗೆಂದು ಬಂದಿದ್ದ ಆರ್​ಎಸ್​ಎಸ್​ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರು ಶಾಸಕರ ವಿರುದ್ಧ ಹರಿಹಾಯ್ದಿದ್ದರು ಎಂದರು.

ಅವರು ಬಿಜೆಪಿಯವರು ಈ ಹೇಳಿಕೆ ನೀಡಿರುವುದು ಅಧಿಕಾರಿಗಳಿಂದ ತಪ್ಪು ನಡೆಯಲು ಶಾಸಕರು ಕಾರಣ ಎಂದಾಗಿರಬಹುದು. ಜಗದೀಶಗೌಡರು ಮತ್ತು ಶ್ರೀಪಾದ ಹೆಗಡೆ ನಿಸರಾಣಿ ಇಬ್ಬರು ಬಿಜೆಪಿ ಪಕ್ಷದವರು ಸ್ವಪಕ್ಷದವರ ಮೇಲೆಯೇ ಹಲ್ಲೆ ನಡೆಸುವಷ್ಟು ನೀಚತನ ತೋರಿದ್ದಾರೆ ಎಂದು ಬೇಳೂರು ವಾಗ್ದಾಳಿ ನಡೆಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *