ಆರ್.‌ ಎನ್.‌ ನಾಯಕ ಕೊಲೆ ಪ್ರಕರಣ,ಮೂವರು ನಿರ್ಧೋಶಿಗಳು!

Thumbnail image

ಉದ್ಯಮಿ ಕೊಲೆ ಕೇಸ್‌: ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ- ಕೋರ್ಟ್​

ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋಕಾ ನ್ಯಾಯಾಲಯ ಇಂದು ಮಹತ್ವದ ತೀರ್ಪು ನೀಡಿದೆ.

ಬೆಳಗಾವಿ: ಅಂಕೋಲಾ ಮೂಲದ ಉದ್ಯಮಿ ಆರ್.ಎನ್.ನಾಯಕ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಕಾ ನ್ಯಾಯಾಲಯ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಜನ ಆರೋಪಿಗಳನ್ನು ‘ದೋಷಿ’ ಎಂದು ಆದೇಶ ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿ ನ್ಯಾಯಾಧೀಶ ಸಿ.ಎಂ‌. ಜೋಶಿ ಮಹತ್ವದ ಆದೇಶ ಪ್ರಕಟಿಸಿದ್ದಾರೆ. ಏಪ್ರಿಲ್ 4ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.

ಮೂವರು ನಿರ್ದೋಷಿಗಳು: ಪ್ರಕರಣದ 6, 11 ಹಾಗೂ 16ನೇ ಆರೋಪಿಗಳನ್ನು ‘ನಿರ್ದೋಷಿ’ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಆರನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ ಹಾಗೂ 16ನೇ ಆರೋಪಿ ಉತ್ತರ ಕನ್ನಡದ ಆನಂದ ರಮೇಶ್ ‌ನಾಯಕ್​ ಈ ಪ್ರಕರಣದಲ್ಲಿ ದೋಷಮುಕ್ತರಾಗಿದ್ದಾರೆ.

ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ

ದೋಷಿಗಳು ಯಾರು?: ಉಳಿದಂತೆ, ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಐದನೇ ಆರೋಪಿ ಕೇರಳದ ಕೆ.ಎಂ.ಇಸ್ಮಾಯಿಲ್, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ, ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12 ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್ ದೋಷಿಗಳೆಂದು ಕೋರ್ಟ್ ತೀರ್ಪಿನಲ್ಲಿ ಹೇಳಿದೆ.

ಪ್ರಕರಣದ ಸಂಕ್ಷಿಪ್ತ ವಿವರ: 2013ರ ಡಿಸೆಂಬರ್ 21ರಂದು ಅಂಕೋಲಾದಲ್ಲಿ ನಡೆದ ಆರ್.ಎನ್.ನಾಯಕ್​ ಕೊಲೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸ್ ದಾಖಲಿಸಲಾಗಿತ್ತು. ಇದು ರಾಜ್ಯದ ಮೊದಲ ಕೋಕಾ ಪ್ರಕರಣವಾಗಿತ್ತು. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಕೆ.ಜಿ‌.ಪುರಾಣಿಕಮಠ ಹಾಗೂ ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಲ್ವಾ ವಕಾಲತ್ತು ವಹಿಸಿದ್ದರು. (ಈಟಿಬಿಕೆ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *