ಕುಮಾರಸ್ವಾಮಿ ಮನದ ಮಾತು-೦೧ ..ಜೆ.ಡಿ.ಎಸ್.ನಿಂದ ದಲಿತ ಮುಖ್ಯಮಂತ್ರಿ!

ದಲಿತ ಮುಖ್ಯಮಂತ್ರಿ ಮಾಡುವ ಸಂದರ್ಭ ಬಂದ್ರೇ_____.. ಕುಮಾರಸ್ವಾಮಿ ಇಷ್ಟೇ ಹೇಳಿದರು..

ಯಾರೋ ಸ್ವಾಮೀಜಿಗಳು ಪ್ರಶ್ನೆ ಮಾಡಿದ್ದರು ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುತ್ತಿರಾ ಎಂದು, ಖಂಡಿತ ನೀಡುತ್ತೇನೆ. ಕುಟುಂಬ ರಾಜಕಾರಣ ಬಯಸುವುದಿಲ್ಲ. ಪ್ರಧಾನಿ ಹುದ್ದೆಯನ್ನೇ ಬಿಟ್ಟು ಬಂದವರು ದೇವೇಗೌಡರು ಇನ್ನು ಅಧಿಕಾರದ ಆಸೆ ಇಲ್ಲ ಎಂಬುದಕ್ಕೆ ಸಾಕ್ಷಿ ಬೇಕೇ..

ಬೆಂಗಳೂರು : ಜೆಡಿಎಸ್ ಪಕ್ಷಕ್ಕೆ 5 ವರ್ಷಗಳ ಪೂರ್ಣ ಪ್ರಮಾಣ ಸರ್ಕಾರ ಕೊಡಿ. ರಾಜ್ಯದಲ್ಲಿ ನೆನಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣ ಮಾಡುತ್ತೇನೆ. ಈ ಮಾತಿಗೆ ತಪ್ಪಿದರೆ ನಮ್ಮ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಸಿರು ಸೇನೆ ಇಂದು ಏರ್ಪಡಿಸಿದ್ದ ‘ಉಳುವ ಯೋಗಿಯ ನೋಡಲ್ಲಿ’ ಕೃಷಿಕನ ಕಷ್ಟಗಳು ಮತ್ತು ಪರಿಹಾರ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಒಂದು ಬಾರಿ ನಮ್ಮ ಪಕ್ಷಕ್ಕೆ ಅವಕಾಶ ಕೊಡಿ. ಯಾವುದೇ ಅನ್ಯ ಪಕ್ಷದ ಹಂಗಿಲ್ಲದೆ ಐದು ವರ್ಷಗಳ ಸಂಪೂರ್ಣ ಅವಧಿಗೆ ನಮ್ಮನ್ನು ಆಯ್ಕೆ ಮಾಡಿ. ಇಡೀ ರಾಜ್ಯದಲ್ಲಿ ಬಾಕಿ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಕಾರ್ಯಗತ ಮಾಡುತ್ತೇನೆ. ಅದಕ್ಕೆ ನಮ್ಮ ಪಕ್ಷ ಬದ್ಧವಾಗಿದೆ ಎಂದರು.

ದಲಿತ ಮುಖ್ಯಮಂತ್ರಿ ಬಗ್ಗೆ ಹೆಚ್‌ಡಿಕೆ ಮಾತು : ಮೊನ್ನೆ ಯಾರೋ ಸ್ವಾಮೀಜಿಯೊಬ್ಬರು ನಂಗೆ ಸವಾಲು ಹಾಕಿದ್ದಾರೆ. ಅವರು ಸ್ವಾಮೀಜಿ ಹೌದೋ, ಅಲ್ಲವೋ ಗೊತ್ತಿಲ್ಲ. ನಿಮ್ಮ ಪಕ್ಷದಿಂದ ದಲಿತರನ್ನೋ, ಮುಸಲ್ಮಾನರನ್ನೋ ಮುಖ್ಯಮಂತ್ರಿ ಮಾಡ್ತೀರಾ ಅಂತಾ ಅಂದಿದ್ದಾರೆ. ನಾನು ಈಗಾಗಲೇ ಸಿಎಂ ಆಗಿದ್ದೇನೆ. ಅಂತಹ ಸಂದರ್ಭ ಬಂದರೆ ದಲಿತರನ್ನೇ ನಮ್ಮ ಪಕ್ಷದಿಂದ ಮುಖ್ಯಮಂತ್ರಿ ಮಾಡುತ್ತೇನೆ. ನಮ್ಮ ಕುಟುಂಬದವರೇ ಅಧಿಕಾರದಲ್ಲಿ ಇರಬೇಕು ಅಂತೇನೂ ಇಲ್ಲ. ಇಡೀ ರಾಜ್ಯವೇ ನಮ್ಮ ಕುಟುಂಬ ಇದ್ದಂತೆ ಎಂದು ಕಾಳಿಸ್ವಾಮಿ ಸವಾಲಿಗೆ ತಿರುಗೇಟು ನೀಡಿದರು.

ಐದು ವರ್ಷಗಳಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನ

ಪ್ರಧಾನಮಂತ್ರಿ ಹುದ್ದೆಯನ್ನೇ ಬಿಟ್ಟು ಬಂದ ಕುಟುಂಬ ನಮ್ಮದು : ಪ್ರಧಾನಮಂತ್ರಿ ಸ್ಥಾನವನ್ನೇ ತ್ಯಜಿಸಿ ಬಂದ ಕುಟುಂಬ ನಮ್ಮದು. ಪ್ರಧಾನಮಂತ್ರಿ ಸ್ಥಾನವನ್ನೇ ದೇವೇಗೌಡರು ಬಿಟ್ಟು ಬಂದರು. ಬಿಜೆಪಿ ಬೆಂಬಲ ನೀಡಲು ಮುಂದಕ್ಕೆ ಬಂದರೂ ಅವರು ಪಡೆಯಲಿಲ್ಲ. ಅಂತಹ ಹಿನ್ನೆಲೆ ಹಿಂದಿರುವ ನಮ್ಮ ಕುಟುಂಬ ಸಿಎಂ ಸ್ಥಾನ ಇಟ್ಟುಕೊಂಡು ಕೂರಬೇಕಾ? ಎಂದು ಹೇಳಿದರು.

ರಾಜಕೀಯ ನಿವೃತ್ತಿ ತೆಗೆದುಕೊಳ್ಳಲು ನಿರ್ಧರಿಸಿದ್ದೆ: ನಾನು ಯಾವಾಗಲೋ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವ ಉದ್ದೇಶ ಮಾಡಿದ್ದೆ. ಎರಡನೇ ಬಾರಿ ಸಿಎಂ ಆಗುವ ಸಂದರ್ಭದಲ್ಲಿಯೇ ರಾಜಕಾರಣದಿಂದ ನಿವೃತ್ತಿ ತೆಗೆದುಕೊಳ್ಳಲು ಬಯಸಿದ್ದೆ. ಆದರೆ, ಜನರ ಕಷ್ಟದ ಪರಿಸ್ಥಿತಿ ನೋಡಿ ಇನ್ನೂ ರಾಜಕೀಯದಲ್ಲಿ ಇದ್ದೇನೆ. ಕೊರೊನಾ ಸಮಯದಲ್ಲಿ ನಾನು ಫೀಲ್ಡ್​ಗೆ ಇಳಿಯಲಿಲ್ಲ. ಜನರಿಗಾಗಿ ನಾನು ಸುಮ್ಮನಿದ್ದೆ. ಆದರೆ, ಈಗ ಫೀಲ್ಡ್​ಗೆ ಇಳಿದಿದ್ದೇನೆ ಎಂದರು.

ರೈತ ಮುಖಂಡರಿಗೆ 10 ಕಡೆ ಟಿಕೆಟ್ : ರೈತ ಸಂಘಟನೆಗಳು ನೇರ ರಾಜಕಾರಣಕ್ಕೆ ಬರಬೇಕು ಎಂದು ಮುಕ್ತ ಕರೆ ನೀಡಿದ ಕುಮಾರಸ್ವಾಮಿ ಅವರು, ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಆಸಕ್ತಿ ಇರುವ ರೈತ ಮುಖಂಡರಿಗೆ ನಮ್ಮ ಪಕ್ಷದಿಂದ ಹತ್ತು ಕ್ಷೇತ್ರಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಟಿಕೆಟ್ ನೀಡುವೆ ಎಂದು ಘೋಷಣೆ ಮಾಡಿದರು. ನೀವು ಸ್ವಾತಂತ್ರ್ಯ ಉದ್ಯಾನವನದಲ್ಲಿ ಕೂರಬೇಕಾದವರಲ್ಲ. ವಿಧಾನಸಭೆಯ ಮೂರನೇ ಮಹಡಿಯಲ್ಲಿ ಕೂರಬೇಕಾದವರು. ನಿಮ್ಮಲ್ಲಿ ಅನೇಕರಿಗೆ ಶಕ್ತಿ ಇದೆ. ನಿಮ್ಮ ಜತೆ ನಾನು ಇದ್ದೇನೆ. ನಿಮಗೆ ಎಲ್ಲ ರೀತಿಯ ಶಕ್ತಿ ತುಂಬುವೆ ಎಂದು ಭರವಸೆ ನೀಡಿದರು.

ಹನುಮ ಜಯಂತಿ ದಿನ ಜಲಧಾರೆ ಆರಂಭ : ರಾಜ್ಯವು ಕಳೆದ 75 ವರ್ಷಗಳಿಂದ ಎದುರಿಸುವ ನೀರಾವರಿ ಅನ್ಯಾಯವನ್ನು ಸರಿ ಮಾಡುವ ಸಲುವಾಗಿ ಜೆಡಿಎಸ್ ಪಕ್ಷವು ಜನತಾ ಜಲಧಾರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದೇ ತಿಂಗಳ 16ರಂದು ಹನುಮ ಜಯಂತಿ ದಿನದಂದು ಚಾಲನೆ ನೀಡಲಾಗುವುದು ಎಂದು ಹೆಚ್‌ಡಿಕೆ ತಿಳಿಸಿದರು.

ನಮ್ಮ ರಾಜ್ಯದಲ್ಲಿ ಸಾಕಷ್ಟು ನೀರಿದೆ. ಆದರೆ, ಪಕ್ಕದ ರಾಜ್ಯಗಳಲ್ಲಿ ಇಷ್ಟು ನೀರಿನ ಲಭ್ಯತೆ ಇಲ್ಲ. ಆದರೂ ನಾವು ನಮ್ಮಲ್ಲಿ ಇರುವ ಜಲ ಸಂಪತ್ತನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ. ಪ್ರತಿ ಭಾಗಕ್ಕೂ ಜಲ ಸಮಾನತೆ ಬೇಕು. ಇಡೀ ರಾಜ್ಯದಲ್ಲಿ ನೆನಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಐದು ವರ್ಷಗಳಲ್ಲಿ ಕಾರ್ಯಗತ ಮಾಡುವ ಬಗ್ಗೆ ಆ ಕಾರ್ಯಕ್ರಮದಲ್ಲಿ ಸಂಕಲ್ಪ ಮಾಡುತ್ತೇವೆ ಎಂದ ಅವರು, ಜಲಧಾರೆ ಕಾರ್ಯಕ್ರಮದಲ್ಲಿ ರೈತರು, ರೈತ ಮುಖಂಡರು ಸಕ್ರಿಯವಾಗಿ ಭಾಗಿಯಾಗಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕು : ಬಿಜೆಪಿ ದಿನಕ್ಕೊಂದು ಭಾವನಾತ್ಮಕ ವಿಷಯವನ್ನು ಇಟ್ಟುಕೊಂಡು ಜನರನ್ನು ಒಡೆಯುತ್ತದೆ. ಬಿಜೆಪಿ ಅದೇನು ಮೋಡಿ ಮಾಡಿದೆಯೋ ಜನರಿಗೆ. ಇನ್ನು ಐದು ವರ್ಷ ಇದೇ ಪರಿಸ್ಥಿತಿ ಮುಂದುವರೆದರೆ ಶ್ರೀಲಂಕಾದಲ್ಲಿ ಸೃಷ್ಟಿ ಆಗಿರುವ ದುಸ್ಥಿತಿಯೇ ಇಲ್ಲೂ ತಲೆ ಎತ್ತಲಿದೆ. ಈಗಲಾದರೂ ಜನ ಎಚ್ಚೆತ್ತುಕೊಳ್ಳಬೇಕು ಎಂದು ರೈತರಲ್ಲಿ ಮನವಿ ಮಾಡಿದರು.

ನಾನು ಮುಸಲ್ಮಾನ್ ಬಂಧುಗಳನ್ನು ಅಪ್ರೆಶಿಯೇಟ್ ಮಾಡ್ತೇನೆ. ಹಲಾಲ್, ಜಟ್ಕಾ ಏನೇನೋ ಆಗುತ್ತಿದೆ. ಈ ಹಿಂದೂ ಮಹಾಸಭಾ, ಭಜರಂಗದಳ ಏನೇನು ಮಾಡುತ್ತಿವೆ. ಆದರೂ ಮುಸಲ್ಮಾನರು ತಾಳ್ಮೆಯಿಂದ ಇದ್ದಾರೆ. ಅದನ್ನು ನಾವು ಪ್ರಶಂಸಿಸಬೇಕು. ನಮ್ಮದು ದೀಪ ಹಚ್ಚುವ ಸಂಸ್ಕೃತಿ, ಹೊರತು ದೀಪ ಆರಿಸುವ ಸಂಸ್ಕೃತಿ ಅಲ್ಲ. ಅವರು ದಿನಕ್ಕೆ ನಾಲ್ಕಾರು ಬಾರಿ ದೇವರನ್ನು ಸ್ಮರಿಸಲು ಲೌಡ್ ಸ್ಪೀಕರ್ ಹಾಕುತ್ತಾರೆ. ನಾವು ನಮ್ಮ ದೇವರನ್ನು ಸ್ಮರಿಸಲು ಲೌಡ್ ಸ್ಪೀಕರ್ ಹಾಕೋಣ. ನಾವೂ ಪ್ರಾರ್ಥನೆ ಮಾಡೋಣ, ನಮ್ಮ ಮಕ್ಕಳಿಗೆ ನಮ್ಮ ಸಂಸ್ಕಾರ ಕಲಿಸೋಣ ಎಂದು ಸಲಹೆ ನೀಡಿದರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

ಎಚ್ಚರ!: ಒಟಿಪಿ ಬೇಕೇ ಇಲ್ಲ, ಆದರೂ ನಿಮ್ಮ ಖಾತೆಗೆ ಬೀಳುತ್ತೆ ಕನ್ನ!

https://www.youtube.com/watch?v=0hmFtRvXqHc&t=88s ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. (ಸಂಗ್ರಹ ಚಿತ್ರ) ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಒಟಿಪಿ...

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ. ಸೂರಜ್ ರೇವಣ್ಣ ಹಾಸನ: ಅಸಹಜ ಲೈಂಗಿಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *