ಹಿಂದೂ ಧರ್ಮದ ರಕ್ಷಣೆಗೆ ಯಾರ ಅಗತ್ಯವೂ ಇಲ್ಲ -ಶಶಿಭೂಷಣ ಹೆಗಡೆ

ಕ್ರಿ.ಪೂ.೫೦೦ ವರ್ಷಗಳ ಹಿಂದೆ ಪರ್ಶಿಯನ್‌ ರಾಜ ಭಾರತದ ಮೇಲೆ ದಾಳಿಮಾಡಿದಾಗ ಸಿಂಧೂ ನದಿ ಬಯಲಿನ ಪ್ರದೇಶವನ್ನು ಹಿಂದೂ ಎಂದ ಅಪಭ್ರಂಶ ಹಿಂದೂ ಎಂದಾಯಿತೆ ವಿನ: ಹಿಂದೂ ಎನ್ನುವ ಧರ್ಮ,ಅದರ ಪ್ರವರ್ತಕರು ಯಾರು ಎನ್ನುವುದು ಯಾರಿಗೂ ತಿಳಿದಿಲ್ಲ. ಆದರೂ ಈ ಪುರಾತನ ಧರ್ಮ ಉಳಿದು, ಬೆಳೆದು ಬಂದಿದೆಯೆಂದರೆ ಅದರ ರಕ್ಷಣೆಗೆ ಯಾರ ಅಗತ್ಯವೂ ಇಲ್ಲ ಅಂಥ ಹೆಚ್ಚುಗಾರಿಕೆಯ ಧರ್ಮವನ್ನು ಮಾನವೀಯ ಧರ್ಮ ಎಂದರೆ ತಪ್ಪಿಲ್ಲ ಎಂದು ಸಾಮಾಜಿಕ ಮುಖಂಡ ಡಾ. ಶಶಿಭೂಷಣ ಹೆಗಡೆ ಹೇಳಿದರು.

ಸಿದ್ಧಾಪುರದ ಯುಗಾದಿ ಉತ್ಸವ ಸಮೀತಿ ಆಯೋಜಿಸಿದ್ದ ಯುಗಾದಿ ಶೋಭಾಯಾತ್ರೆ ಮತ್ತು ಧಾರ್ಮಿಕ ಪ್ರವಚನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಈ ಮೇಲಿನ ಅಭಿಪ್ರಾಯ ಮಂಡಿಸಿದರು.

ಈ ಕಾರ್ಯಕ್ರಮಕ್ಕೆ ಕೆ.ಜಿ.ನಾಯ್ಕ ಹಣಜಿಬೈಲ್‌ ಸ್ವಾಗತಿಸಿ, ಪ್ರಾಸ್ಥಾವಿಕ ನುಡಿಗಳನ್ನು ಹೇಳಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಯುಗಾದಿ ಸಾರ್ವಜನಿಕವಾಗಿ ಹೊಸ ವರ್ಷವಾಗಿ ಮನ್ನಣೆ ಪಡೆಯುತ್ತಿದೆ ಎಂದರು.

ಸಿದ್ದಾಪುರ: ತಾಲೂಕಿನ ಬೇಡ್ಕಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಳ್ಳಿ ಗ್ರಾಮದಲ್ಲಿ ಸೋಮವಾರ ಶ್ರೀರಾಮ ಹಾಗೂ ಪರಿವಾರ ದೇವತೆಗಳ ಪ್ರತಿಷ್ಠಾಪನೆ ಹಾಗೂ ಅಷ್ಟಬಂಧ ಮಹೋತ್ಸವದ ಸಮಾರೋಪ ದ ಅಂಗವಾಗಿ ರಾಜಾರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಶಿರಳಗಿ ಅವರ ದಿವ್ಯ ಉಪಸ್ಥಿತಿಯಲ್ಲಿ ಧರ್ಮ ಸಭೆಯನ್ನು ನಡೆಸಲಾಯಿತು
ಧರ್ಮ ಸಭೆಯಲ್ಲಿ ಆಶೀರ್ವಚನ ನೀಡಿದ ಶ್ರೀಗಳು ಮನೆಗೊಂದು ದೇವರ ಸ್ಥಳ, ಊರಿಗೊಂದು ದೇವಸ್ಥಾನ ಇರಲೇಬೇಕು. ಜಗತ್ತು ಒಂದು ಕುಟುಂಬವಾದರೆ ಭಾರತ ಅದರ ದೇವಾಲಯವಾಗಬೇಕು. ನಮ್ಮ ದೇಶದಲ್ಲಿನ ಕುಟುಂಬ ವ್ಯವಸ್ಥೆ ಮತ್ತು ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು. ರಾಮಾಯಣ ಪುರಾಣಗಳು ಮತ್ತು ಉಪನ್ಯಾಸಗಳಿಂದ ನಮ್ಮಲ್ಲಿ ಸದ್ಭಾವನೆ ಬೆಳೆಯುತ್ತದೆ. ಪಾಶ್ಚಿಮಾತ್ಯ ದೇಶಗಳು ಸಂಪತ್ತಿನಲ್ಲಿ ಶ್ರೀಮಂತರಾಗಿರಬಹುದು. ಆದರೆ ಭಾರತೀಯರು ಸಂಸ್ಕೃತಿಯಲ್ಲಿ, ಮನ ಶಾಂತಿಯಲ್ಲಿ ಶ್ರೀಮಂತರಾಗಿದ್ದಾರೆ. ಮುಂಬರುವ ಪೀಳಿಗೆಗೆ ಒಳ್ಳೆಯ ಸಂಸ್ಕೃತಿ ಮತ್ತು ಮೌಲ್ಯಾಧಾರಿತ ಶಿಕ್ಷಣ ದೊರೆತಾಗ ಮಾತ್ರ ಭಾರತದ ಭಾರತೀಯತೆ ಉಳಿಯುತ್ತದೆ ಎಂದರು.


ಸಭೆಯಲ್ಲಿ ಉಪಸ್ಥಿತರಿದ್ದ ಸ್ಥಳೀಯ ಮುಖಂಡರು ಕೋಟೆ ಆಂಜನೇಯ ದೇವಸ್ಥಾನದ ಅಧ್ಯಕ್ಷರೂ ಆದ ವಿ.ಎನ್. ನಾಯ್ಕ ಬೇಡ್ಕಣಿ ಮಾತನಾಡಿ ಊರಿನ ಜನರು ಅನ್ಯೋನ್ಯವಾಗಿದ್ದರೆ ಎಂತಹ ಮಹತ್ಕಾರ್ಯವನ್ನಾದರೂ ಸಾಧಿಸಬಹುದು ಎಂಬುದನ್ನು ಈ ಪುಟ್ಟ ಊರಿನ ಜನರು ತೋರಿಸಿಕೊಟ್ಟಿದ್ದಾರೆ. ದೇವಾಲಯಗಳು ಮನಃ ಶಾಂತಿಯ, ಉತ್ತಮ ಸಂಸ್ಕಾರದ ಕೇಂದ್ರವಾಗಬೇಕು. ಹಾಗಿದ್ದಲ್ಲಿ ಮಾತ್ರ ಊರಿನ ಜನರು ಸಂಸ್ಕಾರವಂತರಾಗುತ್ತಾರೆ. ಭಗವಂತನ ಇಚ್ಛೆಯಂತೆ ಶ್ರೀರಾಮನ ದೇವಾಲಯವನ್ನು ನಿರ್ಮಿಸಿದ್ದೇವೆ. ಇನ್ನು ಶ್ರೀರಾಮನಂತೆ ಆದರ್ಶ ಬದುಕನ್ನು ನಡೆಸುತ್ತೇವೆ ಎಂಬ ಸಂಕಲ್ಪವನ್ನು ಮಾಡೋಣ ಎಂದು ಹೇಳಿದರು.
ಪ್ರಾಚಾರ್ಯರಾದ ಎಮ್.ಕೆ.ನಾಯ್ಕ ಹೊಸಳ್ಳಿ ಪ್ರಾಸ್ತಾವಿಕ ಮಾತನಾಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ನೂತನ ವಿಗ್ರಹಗಳನ್ನು ನಿರ್ಮಿಸಿದ ಪ್ರಸಿದ್ಧ ಶಿಲ್ಪಕಾರರು, ಶಿಲ್ಪಕಲಾ ಅಕಾಡೆಮಿಯ ಸದಸ್ಯರೂ ಆದ ಚಂದ್ರಶೇಖರ್ ನಾಯ್ಕ ದಂಪತಿಗಳನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಹರೀಶ್ ನಾಯ್ಕ, ಕಟ್ಟಡ ಸಮಿತಿಯ ಅಧ್ಯಕ್ಷರಾದ ಮಹಾಬಲೇಶ್ವರ ರಾಮಾ ನಾಯ್ಕ, ಕಡ್ಲೆ ಹನುಮಂತ ದೇವಾಲಯದ ಅಧ್ಯಕ್ಷರಾದ ವಿ.ಎಮ್.ಭಟ್ಟ ಡೊಂಬೆಕೈ, ಕುಂಬ್ರಿಗದ್ದೆ ವೀರಭದ್ರೇಶ್ವರ ದೇವಸ್ಥಾನ ಅಧ್ಯಕ್ಷರಾದ ಉಮೇಶ.ವಿ. ನಾಯ್ಕ , ಕಳೂರಿನ ಕಲ್ಲೇಶ್ವರ ದೇವಾಲಯದ ಅಧ್ಯಕ್ಷರಾದ ಈಶ್ವರ ಮಾರ್ಯಾ ನಾಯ್ಕ ಮತ್ತು ಗ್ರಾ.ಪಂ. ಸದಸ್ಯರಾದ ಗೋವಿಂದ ನಾಯ್ಕ ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *