ಕಾರವಾರದಲ್ಲಿ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ : ಆಸಕ್ತರಿಗೆ ಆಹ್ವಾನ

etv comment image
Thumbnail image

ಕಾರವಾರ ತಾಲೂಕು ಯುವ ಮೀನುಗಾರರ ಸಂಘರ್ಷ ಸಮಿತಿ ಏ.17ರಂದು ಗಾಳ ಹಾಕಿ ‘ಮೀನು ಹಿಡಿಯುವ ಸ್ಪರ್ಧೆ’ ಆಯೋಜಿಸಿದೆ. ಆಸಕ್ತರು 250 ರೂ. ಪ್ರವೇಶ ಶುಲ್ಕದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು..

ಕಾರವಾರ : ಸಾಂಪ್ರದಾಯಿಕ ಮೀನುಗಾರಿಕೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಾಲೂಕು ಯುವ ಮೀನುಗಾರರ ಸಂಘರ್ಷ ಸಮಿತಿ ಏ.17ರಂದು ಗಾಳ ಹಾಕಿ ‘ಮೀನು ಹಿಡಿಯುವ ಸ್ಪರ್ಧೆ’ ಆಯೋಜಿಸಿದೆ. ಕಾರವಾರದ ಸಚಿನ್ ಜುವೆಲ್ಲರ್ಸ್ ಸ್ಪರ್ಧೆಯ ಪಾಯೋಜಕತ್ವ ವಹಿಸಿದೆ. ಬೈತಖೋಲ ಮೀನುಗಾರಿಕೆ ಬಂದರು ಸಮೀಪವಿರುವ ಬ್ರೇಕ್‍ ವಾಟರ್​​ನ ಎರಡೂ ದಂಡೆಯಲ್ಲಿ ಈ ಸ್ಪರ್ಧೆ ನಡೆಯಲಿದೆ.

ಸಾಮಾನ್ಯ ಗಾಳ ಮತ್ತು ರೇಡಿಯಂ ಗಾಳ ಎರಡು ವಿಭಾಗದಲ್ಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಆಸಕ್ತರು 250 ರೂ. ಪ್ರವೇಶ ಶುಲ್ಕದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧಾಳುಗಳಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಇದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಗಾಳ ಹಾಕುವ ಸ್ಫರ್ಧೆ ನಡೆಯಲಿದೆ. ಮೀನುಗಳ ಸಂಖ್ಯೆ, ತೂಕದ ಆಧಾರದ ಮೇಲೆ ವಿವಿಧ ಬಹುಮಾನಗಳನ್ನು ನೀಡಲಾಗುತ್ತದೆ.

ಸಾಮಾನ್ಯ ಗಾಳ ಹಾಕಿ ಮೀನು ಹಿಡಿಯುವವರಿಗೆ ಮೊದಲ ಬಹುಮಾನ-5 ಸಾವಿರ ರೂ., ಎರಡನೇ ಬಹುಮಾನ 2,500 ರೂ. ಮತ್ತು ಮೂರನೇ ಬಹುಮಾನ 1200 ರೂ. ಮತ್ತು ಟ್ರೋಫಿ. ರೇಡಿಯಂ ಗಾಳ ಹಾಕಿ ಮೀನು ಹಿಡಿಯುವ ವಿಭಾಗದಲ್ಲಿ ಮೊದಲ ಬಹುಮಾನ- 4 ಸಾವಿರ ರೂ., ಎರಡನೇ ಬಹುಮಾನ 2 ಸಾವಿರ ಮತ್ತು ಮೂರನೇ ಬಹುಮಾನ ಸಾವಿರ ರೂ. ಹಾಗೂ ಟ್ರೋಫಿ. ಸ್ಪರ್ಧೆಗೆ ಭಾಗವಹಿಸುವ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುತ್ತದೆ.

ಆಸಕ್ತರು ಅವಿನಾಶ್ 8970194985, ಸಚಿನ್ 9741247750, ಶ್ರೀನಿವಾಸ ಅಂಬಿಗ+918431397983 ವಿಕ್ರಾಂತ ಅವರ್ಸೆಕರ +919844997738‌ ಇವರ ಬಳಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಸಂಘದ ಅಧ್ಯಕ್ಷ ವಿನಾಯಕ ಹರಿಕಂತ್ರ ಕೋರಿದ್ದಾರೆ. (etbk)

ಸಿದ್ದಾಪುರ: ಬಿಜೆಪಿ ತಾಲ್ಲೂಕು ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನ ದಿನ ಆಚರಣೆ ಹಾಗೂ ಕಾರ್ಯಕಾರಿಣಿ ಸಭೆ ಬುಧವಾರ ನಡೆಯಿತು.

ಪಟ್ಟಣದ ಶ್ರೀ ಗಂಗಾಂಬಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮಂಡಲದ ಅಧ್ಯಕ್ಷ ನಾಗರಾಜ ನಾಯ್ಕ ಬೇಡ್ಕಣಿ ಅವರ ನೇತೃತ್ವದಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶೋಭಾಯಾತ್ರೆ ನಡೆಸಿದರು. ಸಂಸ್ಥಾಪನ ದಿನಾಚರಣೆಯ ಅಂಗವಾಗಿ ಮಂಡಲ ವ್ಯಾಪ್ತಿಯಲ್ಲಿ ಬರುವ ಬೂತ್ ಅಧ್ಯಕ್ಷರುಗಳ ಮನೆ ಮೇಲೆ ಪಕ್ಷದ ಧ್ವಜ ಹಾರಿಸಿ ಸಂಭ್ರಮಾಚರಣೆ ಮಾಡಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಂತರ ಪಟ್ಟಣದ ಬಾಲಭವನದಲ್ಲಿ ಕಾರ್ಯಕಾರಿಣಿ ಸಭೆಯನ್ನು ಅಧ್ಯಕ್ಷ ನಾಗರಾಜ ನಾಯ್ಕ ಬೇಡ್ಕಣಿ ಅವರು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲದ ಪ್ರಭಾರಿ ಕುಮಾರ ಮಾರ್ಕಂಡೆ ಅವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ರಾಜ್ಯ ಕಾರ್ಯಕಾರಣಿ ಸದಸ್ಯ ಕೆ.ಜಿ.ನಾಯ್ಕ ಹಣಜೀಬೈಲ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಮೇಸ್ತ, ಪ್ರಸನ್ನ ಹೆಗಡೆ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಚಂದ್ರಕಲಾ ಸುರೇಶ ನಾಯ್ಕ, ಉಪಾಧ್ಯಕ್ಷ ರವಿಕುಮಾರ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ವಿನಯ ಹೊನ್ನೆಗುಂಡಿ, ಸದಸ್ಯರಾದ ಮಾರುತಿ ನಾಯ್ಕ, ನಂದನ ಬೋರ್ಕರ್, ಸುಧೀರ್ ನಾಯ್ಕ, ರಾಧಿಕಾ ಕಾನಗೋಡ, ಜಿಲ್ಲಾ ಕಾರ್ಯದರ್ಶಿಗಳಾದ ಗುರುಪ್ರಸಾದ ಹೆಗಡೆ ಹಾಗೂ ಕೃಷ್ಣಮೂರ್ತಿ ಮಡಿವಾಳ ಕಡಕೇರಿ, ನೇತ್ರಾವತಿ ನಾಯ್ಕ, ಹರೀಶ ಗೌಡರ್, ಸುಮನಾ ಕಾಮತ್, ಮಹಾಬಲೇಶ್ವರ ಹೆಗಡೆ, ತೋಟಪ್ಪ ನಾಯ್ಕ, ಶಿವಕುಮಾರ್ ನಾಯ್ಕ, ಸಚೀನ ಶೇಟ್ ಇತರರು ಹಾಜರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *