ಹಿಂದೂ ಸಂಘಟನೆಗಳಿಗೆ ಕ್ಯಾರೆ ಎನ್ನದೆ ಸೌಹಾರ್ಧತೆ ಮೆರೆದ ಕಲಕರಡಿ ಜನತೆ

Thumbnail image

ಹಿಂದೂ-ಮುಸ್ಲಿಂರು ಒಡಗೂಡಿ ಮೀನು ಹಿಡಿದ್ರು.. ಪರ್ಯಾಯವಾಗಿ ದೇವಸ್ಥಾನಕ್ಕೆ ಕಾಣಿಕೆ ಕೊಟ್ರು..

ಶ್ರೀ ಸಿದ್ಧೇಶ್ವರ ದೇವಸ್ಥಾನದ ಅಭಿವೃದ್ಧಿ ಸಹಾಯಾರ್ಥ ಪ್ರತಿ ವರ್ಷ ನಡೆಯುವ ಕೆರೆಬೇಟೆಯಲ್ಲಿ ಮುಸ್ಲಿಂ ಸಮುದಾಯದ ಹೆಚ್ಚು ಜನರು ಪಾಲ್ಗೊಳ್ಳುತ್ತಾರೆ. ಹಿಂದೂ-ಮುಸ್ಲಿಂರು ಒಡಗೂಡಿ ಮೀನು ಹಿಡಿಯುತ್ತಾರೆ. ಪರ್ಯಾಯವಾಗಿ ದೇವಸ್ಥಾನಕ್ಕೆ ಕಾಣಿಕೆ ಕೊಡುತ್ತಾರೆ..

ಕಾರವಾರ : ಹಿಂದೂ-ಮುಸ್ಲಿಂ ಸಮುದಾಯದ ಜನರು ಜಾತಿ, ಧರ್ಮ ಮರೆತು ಕೆರೆಯಲ್ಲಿ ಮೀನು ಹಿಡಿದ ಅಪರೂಪದ ಘಟನೆಯಿದು. ತಾವು ಹಿಡಿದ ಅದೇ ಮೀನಿಗೆ ಪರ್ಯಾಯವಾಗಿ ಮುಸ್ಲಿಂರು ದೇವರಿಗೆ ಕಾಣಿಕೆ ರೂಪದಲ್ಲಿ ಹಣ ನೀಡುವ ವಿಶಿಷ್ಟ ಸಂಪ್ರದಾಯ ಶಿರಸಿ ತಾಲೂಕಿನ ಕಲಕರಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಶ್ರೀ ಸಿದ್ಧೇಶ್ವರ ದೇವಸ್ಥಾನದ ಅಭಿವೃದ್ಧಿ ಸಹಾಯಾರ್ಥ ಪ್ರತಿ ವರ್ಷ ನಡೆಯುವ ಕೆರೆಬೇಟೆಯಲ್ಲಿ ಮುಸ್ಲಿಂ ಸಮುದಾಯದ ಹೆಚ್ಚು ಜನರು ಪಾಲ್ಗೊಳ್ಳುತ್ತಾರೆ. ಮುಸ್ಲಿಂಮರೇ ದೇವರಿಗೆ ಸೇವೆ ರೂಪದಲ್ಲಿ ಕಾಣಿಕೆ ನೀಡ್ತಾರೆ.

ಶಿರಸಿ ಕೆರೆಬೇಟೆಯಲ್ಲಿ ಭಾಗಿಯಾದ ಹಿಂದೂ ಮುಸ್ಲಿಂ-ಬಾಂಧವರು..

ಈ ದೇವಸ್ಥಾನದ ಆಚರಣೆಯಲ್ಲಿ ಹಿಂದೂಗಳನ್ನು ಹೊರತುಪಡಿಸಿ ಅನ್ಯಧರ್ಮೀಯರು ಭಾಗವಹಿಸದಂತೆ ಹಿಂದೂಪರ ಸಂಘಟನೆ ಮನವಿ ಮಾಡಿತ್ತು. ಆದರೆ, ದೇವಸ್ಥಾನದ ಆಡಳಿತ ಮಂಡಳಿ ತಾವೆಲ್ಲಾ ಸೌಹಾರ್ದಯುತವಾಗಿದ್ದೇವೆ ಎಂದು ಈ ಬಾರಿ ವಿವಾದಗಳ ನಡುವೆಯೂ ಮುಸ್ಲಿಂ ಬಾಂಧವರಿಗೆ ಮತ್ಸ್ಯ ಭೇಟೆಗೆ ಅವಕಾಶ ನೀಡಿದೆ. ನೂರಾರು ಮುಸ್ಲಿಂರು ಇದರಲ್ಲಿ ಭಾಗವಹಿಸಿದ್ದರು.

ಶ್ರೀ ಸಿದ್ಧೇಶ್ವರ ದೇವಾಲಯದ ಅಭಿವೃದ್ಧಿಗೆ ದೇಣಿಗೆ ಸಲುವಾಗಿ ಪ್ರತಿ ವರ್ಷ ಕೆರೆಬೇಟೆ ಎನ್ನುವ ಕಾರ್ಯಕ್ರಮ ಆಯೋಜಿಸಲಾಗುತ್ತದೆ‌. ಈ ಕೆರೆಬೇಟೆಯಲ್ಲಿ ದೇವಸ್ಥಾನಕ್ಕೆ ಸಹಾಯವಾಗಲು ಕೆರೆಯಲ್ಲಿ ಮೀನು ಹಿಡಿಯುವವರಿಗೆ ಪ್ರತಿ ಕೂಣಿಗೆ ದರ ನಿಗದಿಪಡಿಸಲಾಗುತ್ತದೆ. ಈ ಬಾರಿ 340ಕ್ಕೂ ಹೆಚ್ಚು ಜನರು ಕೆರೆಬೇಟೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿ ಕೂಣಿಗೆ ತಲಾ 500 ರೂ. ನಿಗದಿಪಡಿಸಲಾಗಿದೆ. ದೇವಸ್ಥಾನಕ್ಕೆ ಸುಮಾರು 1.70 ಲಕ್ಷದಷ್ಟು ಆದಾಯ ಸಂಗ್ರಹಿಸಲಾಯ್ತು. ಇದನ್ನು ದೇವಸ್ಥಾನದ ವಿವಿಧ ಅಭಿವೃದ್ಧಿ ಕೆಲಸಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *