ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ಗಲಾಟೆ, ಕಲ್ಲುತೂರಾಟ, ಹಿಂಸಾಚಾರ: ಶನಿವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ ಏನಾಯ್ತು?

ಕಳೆದ ಶನಿವಾರ ತಡರಾತ್ರಿ ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಆರೋಪಿಸಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ನಡೆಸಿದ ಕಲ್ಲು ತೂರಾಟ ಹಿಂಸಾರೂಪಕ್ಕೆ ತಿರುಗಿದ ಘಟನೆಯಲ್ಲಿ 12 ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಏಳು ಪೊಲೀಸ್ ವಾಹನಗಳು ಜಖಂ ಆಗಿವೆ. 

A damaged police vehicle after riots broke out in Old Hubballi late on Saturday night

ಹುಬ್ಬಳ್ಳಿ: ಕಳೆದ ಶನಿವಾರ ತಡರಾತ್ರಿ ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಆರೋಪಿಸಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ನಡೆಸಿದ ಕಲ್ಲು ತೂರಾಟ ಹಿಂಸಾರೂಪಕ್ಕೆ ತಿರುಗಿದ ಘಟನೆಯಲ್ಲಿ 12 ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಏಳು ಪೊಲೀಸ್ ವಾಹನಗಳು ಜಖಂ ಆಗಿವೆ. 

ಘಟನೆಗೆ ಸಂಬಂಧಪಟ್ಟಂತೆ ಇದುವರೆಗೆ 88 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಷ್ಟು ಬಂಧನವಾಗುವ ಸಾಧ್ಯತೆ ಕೂಡ ಇದೆ. ಹುಬ್ಬಳ್ಳಿಯಾದ್ಯಂತ ಏಪ್ರಿಲ್ 20ವರೆಗೆ ಸೆಕ್ಷನ್ 144 ಹಾಕಲಾಗಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. 

ಹುಬ್ಬಳ್ಳಿಯಲ್ಲಿ ಕಳೆದ ಶನಿವಾರ ತಡರಾತ್ರಿ ಏನಾಯ್ತು?: ಯಾವಾಗಲೂ ವ್ಯಾಪಾರ ವಹಿವಾಟುಗಳಿಂದ, ಜನರಿಂದ ತುಂಬಿ ತುಳುಕುತ್ತಿದ್ದ ಹುಬ್ಬಳ್ಳಿಯಲ್ಲಿ ಮೊನ್ನೆ ಶನಿವಾರ ತಡರಾತ್ರಿ ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿತ್ತು. ಉದ್ರಿಕ್ತ ಗುಂಪು ರಾತ್ರೋರಾತ್ರಿ ಪೊಲೀಸರ ಮೇಲೆ ದಾಳಿ ಮಾಡಿತ್ತು. ಇದರಲ್ಲಿ ಪೊಲೀಸ್ ವಾಹನಗಳು, ಸಾರ್ವಜನಿಕ ವಾಹನಗಳು ಮತ್ತು ಖಾಸಗಿ ಆಸ್ತಿಪಾಸ್ತಿ ಕೂಡ ನಷ್ಟವಾಗಿದೆ. ಅಭಿಷೇಕ್ ಹೀರೇಮಠ್ ಎನ್ನುವ 24 ವರ್ಷದ ಯುವಕ ತನ್ನ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದೇ ಇದಕ್ಕೆಲ್ಲಾ ನೆಪಕಾರಣ. 

ಸಮುದಾಯವೊಂದರ ಸದಸ್ಯರು ಕೂಡಲೇ ದೂರು ದಾಖಲಿಸಿ, ಪೊಲೀಸರು ಅಭಿಷೇಕ್ ನನ್ನು ಆನಂದ್ ನಗರದಲ್ಲಿರುವ ಆತನ ನಿವಾಸದಿಂದ ಬಂಧಿಸಿ ಕರೆದುಕೊಂಡು ಹೋಗಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದರು. ಕೂಡಲೇ ಪೊಲೀಸ್ ಠಾಣೆಯ ಹೊರಗೆ ಜನರ ಗುಂಪು ದೊಡ್ಡ ಸಂಖ್ಯೆಯಲ್ಲಿ ಸೇರಿ ಪೊಲೀಸರು ಆರೋಪಿಯನ್ನು ತಮ್ಮ ಮುಂದೆ ಕರೆತರಬೇಕೆಂದು ಒತ್ತಾಯಿಸಿದ್ದರು.

ಕಾನೂನು ಪ್ರಕಾರ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ಹೇಳಿದಾಗ ಕೇಳದೆ ಪ್ರತಿಭಟನಾಕಾರರು ಮುನ್ನುಗ್ಗಿ ಮನಬಂದಂತೆ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದರು. ಪೊಲೀಸ್ ವಾಹನಗಳನ್ನು ಧ್ವಂಸ ಮಾಡಿದರು. ಬೀದಿದೀಪಗಳನ್ನು ಕೂಡ ನಾಶ ಮಾಡಿದರು, ಒಟ್ಟಿನಲ್ಲಿ ಪೊಲೀಸ್ ಠಾಣೆ ಮುಂದೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

ಪೊಲೀಸ್ ಠಾಣೆ ಹತ್ತಿರವಿರುವ ಧಾರ್ಮಿಕ ಕೇಂದ್ರ ಮತ್ತು ಆಸ್ಪತ್ರೆಯೊಂದನ್ನು ಕೂಡ ಧ್ವಂಸ ಮಾಡಿದ್ದಾರೆ. ವಿವಿಧ ಸ್ಥಳಗಳಿಂದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ. ಹಿಂಸಾಚಾರಪೀಡಿತ ಗುಂಪನ್ನು ಚದುರಿಸಲು ಪೊಲೀಸರು 9 ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆಶ್ರುವಾಯು ಸಿಡಿಸಿದರು. ರಬ್ಬರ್ ಬುಲೆಟ್ ಗಳನ್ನು ಕೂಡ ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಹರಸಾಹಸಪಟ್ಟಿದ್ದರು.

ಪ್ರತಿಭಟನೆ ವೇಳೆ ಇಷ್ಟೊಂದು ಕಲ್ಲುಗಳು ಹೇಗೆ ಸಂಗ್ರಹವಾದವು ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ. ಇನ್ನಷ್ಟು ಬಂಧನವಾಗುವ ಸಾಧ್ಯತೆ ಇದೆ. ಖಾಸಗಿ ವಾಹನಗಳು ಹಾನಿಗೊಳಗಾದ ಮತ್ತು ಸಾರ್ವಜನಿಕರು ಗಾಯಗೊಂಡಿರುವ ವರದಿಗಳನ್ನು ಪಡೆಯುತ್ತೇವೆ ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತ ಲಬು ರಾಮ್ ತಿಳಿಸಿದ್ದಾರೆ.

ಪೊಲೀಸರಿಂದ ಪಥ ಸಂಚಲನ: ಯಾವುದೇ ಘಟನೆಗಳು ನಡೆಯದಂತೆ ತಡೆಯಲು ಇತರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ನಿನ್ನೆ ಭಾನುವಾರ, ಆರ್‌ಎಎಫ್ ಮತ್ತು ಸಶಸ್ತ್ರ ಪೊಲೀಸ್ ಸಿಬ್ಬಂದಿಯ ತುಕಡಿಗಳು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಮಾರ್ಗದಲ್ಲಿ ಪಥ ಸಂಚಲನ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗುತ್ತಿದೆ ಎಂದು ನಿತೇಶ್ ಪಾಟೀಲ್ ಹೇಳಿದರು. “ಪರಿಸ್ಥಿತಿ ನಿಯಂತ್ರಣದಲ್ಲಿದೆ, ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಅವರು ಹೇಳಿದರು.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *