ಪ್ರಥಮ ಚುಂಬನಂ ದಂತಭಗ್ನಂನಂತಾದ ಹೋಬಳಿಮಟ್ಟದ ಕುಂದುಕೊರತೆಗಳ (ಜಿಲ್ಲಾಧಿಕಾರಿಗಳ) ಪರಿಶೀಲನಾ ಕಾರ್ಯಕ್ರಮ


ಸರ್ಕಾರದ ಕಾರ್ಯಕ್ರಮಗಳಿಗೆ ಸ್ಫಷ್ಟತೆ ಇದ್ದರೆ ಅವುಗಳಿಂದ ಸಾರ್ವಜನಿಕರಿಗೆ ನೆರವಾಗುತ್ತದೆ. ಆದರೆ ಸರ್ಕಾರಿ ಕಾರ್ಯಕ್ರಮಗಳು ಕಾಟಾಚಾರಕ್ಕೆ ಎಂಬಂತೆ ನಡೆದರೆ ಅವುಗಳಿಂದ ಸಾರ್ವಜನಿಕರಿಗೆ ಲಾಭವೂ ಆಗುವುದಿಲ್ಲ,ಸರ್ಕಾರದ ಉದ್ದೇಶವೂ ಈಡೇರಿದಂತಾಗುವುದಿಲ್ಲ. ಇದೇ ವರ್ಷ ಪ್ರಾರಂಭವಾದ ಹೋಬಳಿ ಮಟ್ಟದಲ್ಲಿ ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕ ಕುಂದುಕೊರತೆಗಳ ಪರಿಶೀಲನಾ ಸಭೆ ಇಂಥ ವಿಫಲ ಕಾರ್ಯಕ್ರಮಗಳಿಗೊಂದು ಉದಾಹರಣೆ. ಉತ್ತರ ಕನ್ನಡ ಜಿಲ್ಲಾ ಮಟ್ಟದ ಜಿಲ್ಲಾಧಿಕಾರಿಗಳ ಹೋಬಳಿ ಮಟ್ಟದ ಸಾರ್ವಜನಿಕ ಕುಂದು ಕೊರತೆಗಳ ಪ್ರಗತಿ ಪರಶೀಲನಾ ಸಭೆ ಪ್ರಥಮ ಚುಂಬನಂ,ದಂತಭಗ್ನಂ ಎಂಬಂತಾಯಿತು.


ಸಿದ್ಧಾಪುರ ತಾಲೂಕಿನ ಹಲಗೇರಿ ಗ್ರಾಮ ಪಂಚಾಯತ್‌ ನಲ್ಲಿ ನಡೆದ ಈ ಸಭೆಗಾಗಿ ಸ್ಥಳಿಯಾಡಳಿತ ಎಲ್ಲಾ ವ್ಯವಸ್ಥೆಗಳನ್ನು ಮಾಡಿತ್ತು. ಸ್ವಾಗತಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಕುಂಬಮೇಳ! ಜಿಲ್ಲಾಧಿಕಾರಿಗಳ ಸ್ವಾಗತಕ್ಕೆ ಯಕ್ಷಗಾನ ವೇಶಧಾರಿ ಹೀಗೆ ಬಾಹ್ಯ ಆಕರ್ಷಣೆಯಾಗಿ ಕಾರ್ಯಕ್ರಮ ಜಿಲ್ಲೆಯ ಗಮನ ಸೆಳೆದಂತಿತ್ತು. ಜಿಲ್ಲಾಡಳಿತದ ಪೂರ್ವತಯಾರಿಯಿಂದ ಸಾಕಷ್ಟು ಜನರೂ ಆಗಮಿಸಿದ್ದರು. ಆದರೆ ವಿಶಿಷ್ಟ ತಯಾರಿಯಿಂದ ಪ್ರಾರಂಭವಾದ ಕಾರ್ಯಕ್ರಮಕ್ಕೆ ತಕ್ಕಂತೆ ಸಾರ್ವಜನಿಕರ ಅಹವಾಲು ಹೇಳಲು ಅವಕಾಶವಾಗಲಿಲ್ಲ. ಜಿಲ್ಲಾಧಿಕಾರಿಗಳನ್ನು ಮುತ್ತಿಕೊಂಡ ಸಾರ್ವಜನಿಕರು ತಮ್ಮ ಅಹವಾಲು ಹೇಳಲು ಗೋಳಾಡಿದರು. ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲು  ತಂದ ಅರ್ಜಿಗಳನ್ನು ನೀಡಿ ವೇದಿಕೆಯಲ್ಲಿ ಏನಾಗುತ್ತಿದೆ ಎಂದು ತಿಳಿಯದ ಸಾರ್ವಜನಿಕರು ಪರದಾಡಿದರು.

ಹೋಬಳಿಮಟ್ಟದ ಕುಂದುಕೊರತೆ ಕೇಳಲು ಬಂದ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದರಾದರೂ ಸಾರ್ವಜನಿಕರಿಗೆ ತಮ್ಮ ಅಹವಾಲುಗಳ ಬಗ್ಗೆ ಜಿಲ್ಲಾಧಿಕಾರಿಗಳು ನೀಡಿದ ಉತ್ತರ ಸಮಧಾನ ತರಲಿಲ್ಲ. ಪೂರ್ಣಕುಂಭ ಸ್ವಾಗತ ನೀಡಿದ ಅಂಗನವಾಡಿ ಕಾರ್ಯಕರ್ತೆಯರು ಬಿಸಿಲಲ್ಲಿ ನಿಂತು ಹೆಣಗಿದ್ದು, ಕೆಲವು ಪ್ರಮುಖ ಅಹವಾಲುಗಳನ್ನಾದರೂ ಸಾರ್ವಜನಿಕರಿಗೆ ಕೇಳುವಂತೆ ಧ್ವನಿವರ್ಧಕದ ಮೂಲಕ ಹೇಳಿಸಿ ಅವುಗಳಿಗೆ ಜಿಲ್ಲಾಧಿಕಾರಿಗಳೂ ಮೈಕ್‌ ನಲ್ಲೇ ಉತ್ತರಿಸಿದ್ದರೆ ಸೇರಿದ್ದ ಸಾರ್ವಜನಿಕರಿಗೆ ಈ ಕುಂದುಕೊರತೆಗಳ ಪರಿಶೀಲನೆ ಅರ್ಥವಾಗುತಿತ್ತೇನೋ. ಒಟ್ಟಾರೆ ಬಹುನಿರೀಕ್ಷೆಯ ಜಿಲ್ಲಾಮಟ್ಟದ ಕಾರ್ಯಕ್ರಮ ಹೋಬಳಿಮಟ್ಟದ ಕುಂದುಕೊರತೆಗಳ ಪರಿಶೀಲನಾ ಸಭೆಯ ಪ್ರಾರಂಭೋತ್ಸವ ಸರ್ಕಾರದ ಅಗ್ಗದ ಕಾರ್ಯಕ್ರಮ ಎನ್ನುವ ಟೀಕೆಗೆ ಒಳಗಾಗುವಂತಾಯಿತು. ಹೋಬಳಿ ಮಟ್ಟದ ವೈಯಕ್ತಿಕ ಸಮಸ್ಯೆಗಳಷ್ಟೇ ಅಲ್ಲದೆ ಸಾರ್ವಜನಿಕ ಅಹವಾಲುಗಳಿಗೂ ಸರಿಯಾದ ಉತ್ತರ ಪರಿಹಾರದ ಭರವಸೆ ದೊರೆಯದಿರುವುದು ಈ ಕಾರ್ಯಕ್ರಮದ ವಿಫಲತೆಯ ವಿಷಯ ವೈರಲ್‌ ಆಗುವುದಕ್ಕೆ ಸೀಮಿತವಾದಂತಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *