

ಮೇ 7ರಂದು ಅರಣ್ಯ ಹಕ್ಕಿಗಾಗಿ ಹೊನ್ನಾವರದಲ್ಲಿ ಬೃಹತ್ ಹೋರಾಟ ಕೈಗೊಂಡಿದ್ದು ರಾಜ್ಯ ಸರ್ಕಾರ ಮೇ 30ರೊಳಗೆ ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಬೇಕು. ಅಲ್ಲದೇ ಶರಾವತಿ ಅಭಯಾರಣ್ಯಕ್ಕೆ ಉತ್ತರಕನ್ನಡ ಜಿಲ್ಲೆಯ ಪ್ರದೇಶಗಳನ್ನು ಸೇರಿಸುವುದರಿಂದ ಈ ಭಾಗದ ಜನರು ಮೂಲ ಸೌಕರ್ಯಗಳಿಂದ ವಂಚಿತವಾಗಲಿದ್ದು ಇದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ವಾಸಿಗಳ ಆತಂಕ ದಿನೇ ದಿನೆ ಹೆಚ್ಚಾಗತೊಡಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳ ಬಳಿ ಮಾಡಿದ ಮನವಿಗಳು ವ್ಯರ್ಥವಾಗಿವೆ. ಅರಣ್ಯ ಹಕ್ಕಿಗಾಗಿ ನಿರಂತರ ಹೋರಾಟ ನಡೆಸಿದರೂ ಸರ್ಕಾರ ಮಾತ್ರ ಅರಣ್ಯವಾಸಿಗಳಿಗೆ ಕಿಂಚಿತ್ತೂ ಸ್ಪಂದನೆ ನೀಡುತ್ತಿಲ್ಲ. ಇದೇ ಕಾರಣಕ್ಕೆ ರೊಚ್ಚಿಗೆದ್ದಿರುವ ಅರಣ್ಯವಾಸಿಗಳು ಇದೀಗ ಹೋರಾಟ ತೀವ್ರಗೊಳಿಸಿದ್ದಾರೆ.
ಉತ್ತರ ಕನ್ನಡ ರಾಜ್ಯದಲ್ಲಿಯೇ ಭೌಗೋಳಿಕವಾಗಿ ವಿಶಾಲವಾಗಿರುವ ಜಿಲ್ಲೆಗಳಲ್ಲೊಂದು. ಮಾತ್ರವಲ್ಲದೇ ಬಹುಭಾಗ ಅರಣ್ಯ ಪ್ರದೇಶದಿಂದಲೇ ಕೂಡಿರುವ ಜಿಲ್ಲೆ ಇದಾಗಿದ್ದು, ಬಹುಸಂಖ್ಯಾತರು ಅರಣ್ಯ ಭೂಮಿಯನ್ನೇ ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಅರಣ್ಯ ಹಕ್ಕು ಕಾಯ್ದೆಯಡಿ ಸಾಗುವಳಿ ಭೂಮಿಯ ಹಕ್ಕು ಪಡೆಯಲು ಜಿಲ್ಲಾದ್ಯಂತ ಸುಮಾರು 89 ಸಾವಿರಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದರು. ಆದರೆ, 69 ಸಾವಿರ ಅರ್ಜಿಗಳನ್ನು ತಿರಸ್ಕಾರ ಮಾಡಲಾಗಿದೆ. ಉಳಿದಂತೆ 398 ಪಾರಂಪರಿಕ ಅರಣ್ಯವಾಸಿಗಳು, 1,126 ಸಮುದಾಯದ ಉದ್ದೇಶಕ್ಕೆ ಸೇರಿ ಶೇ.3.2ರಷ್ಟು ಮಾತ್ರ ಹಕ್ಕು ನೀಡಲಾಗಿದೆ.
ಪಟ್ಟಾ ಹಕ್ಕಿಗಾಗಿ ಹೋರಾಟ ತೀವ್ರಗೊಳಿಸಿದ ಅರಣ್ಯ ವಾಸಿಗಳು
ಹೊನ್ನಾವರದಲ್ಲಿ ಬೃಹತ್ ಹೋರಾಟ: ಕಾಯ್ದೆ ಸರಿಯಾಗಿ ತಿಳಿಯದೇ ಅಧಿಕಾರಿಗಳು ಸಾರಾಸಗಟಾಗಿ ಅರ್ಜಿಗಳನ್ನು ತಿರಸ್ಕರಿಸುತ್ತಿರುವುದರ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಸದಸ್ಯರು ಕಳೆದೊಂದು ತಿಂಗಳಿಂದ 500 ಗ್ರಾಮಗಳಿಗೆ ಹೋರಾಟ ವಾಹಿನಿ ಮೂಲಕ ಸಂಚಾರ ಮಾಡಿ ಜಾಗೃತಿ ಜಾಥಾ ಕೈಗೊಂಡಿದ್ದಾರೆ.
ಮಾತ್ರವಲ್ಲದೇ ಇದೇ ಮೇ 7ರಂದು ಅರಣ್ಯ ಹಕ್ಕಿಗಾಗಿ ಹೊನ್ನಾವರದಲ್ಲಿ ಬೃಹತ್ ಹೋರಾಟ ಕೈಗೊಂಡಿದ್ದು, ರಾಜ್ಯ ಸರ್ಕಾರ ಮೇ 30ರೊಳಗೆ ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಬೇಕು. ಅಲ್ಲದೇ ಶರಾವತಿ ಅಭಯಾರಣ್ಯಕ್ಕೆ ಉತ್ತರಕನ್ನಡ ಜಿಲ್ಲೆಯ ಪ್ರದೇಶಗಳನ್ನು ಸೇರಿಸುವುದರಿಂದ ಈ ಭಾಗದ ಜನರು ಮೂಲ ಸೌಕರ್ಯಗಳಿಂದ ವಂಚಿತವಾಗಲಿದ್ದು, ಇದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಅರಣ್ಯ ಭೂಮಿ ಹಕ್ಕು ಸಿಗದಿರುವುದಕ್ಕೆ ಅಧಿಕಾರಿಗಳಿಗೆ ಕಾಯ್ದೆ ಬಗೆಗಿನ ಮಾಹಿತಿ ಕೊರತೆಯೇ ಕಾರಣ ಎನ್ನಲಾಗುತ್ತಿದೆ. ಕಾಯ್ದೆಯನ್ನು ಸರಿಯಾಗಿ ಅರಿಯದ ಕಾರಣ ಅರ್ಜಿ ತಿರಸ್ಕಾರ ಮಾಡಲಾಗುತ್ತಿದೆ. ಅಧಿಕಾರಿಗಳ ಕಿವಿಹಿಂಡಿ ಸಮಸ್ಯೆ ಬಗೆಹರಿಸಬೇಕಿದ್ದ ಜನಪ್ರತಿನಿಧಿಗಳು ಕೂಡ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳದೇ ಇದ್ದಲ್ಲಿ ಮುಂದೆ ಜನತೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಸರ್ಕಾರ ಕೂಡಲೇ ಅರಣ್ಯವಾಸಿಗಳಿಗೆ ಪಟ್ಟಾ ಕಲ್ಪಿಸಲು ಮುಂದಾಗಬೇಕೆಂಬ ಹಕ್ಕೊತ್ತಾಯ ಮಂಡಿಸಲಾಗಿದೆ. (etbk)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
