ಅವಘಡದ ಸಂದರ್ಭದಲ್ಲಿ ಬೆಂಕಿ ಆರಿಸುವಾಗ ಎಚ್ಚರಿಕೆ ಅಗತ್ಯ


ಸಿದ್ದಾಪುರ; ಬೆಂಕಿಯ ಅನಾಹುತಗಳು ಘಟಿಸಿದಾಗ ತಕ್ಷಣದಲ್ಲಿ ತೆಗೆದುಕೊಳ್ಳುವ ಕ್ರಮ ತೀರಾ ಮುಖ್ಯವಾಗುತ್ತದೆ. ಎಲ್ಲಾ ಬೆಂಕಿಯನ್ನು ಕೇವಲ ನೀರಿನಿಂದ ಆರಿಸಲು ಸಾಧ್ಯವಿಲ್ಲ.ಅವುಗಳಲ್ಲಿಯೂ ನಾಲ್ಕು ವಿಧಗಳಿವೆ. ಬೆಂಕಿ ಅವಘಡದ ಸಂದರ್ಭದಲ್ಲಿ ಅದನ್ನು ಆರಿಸುವಾಗ ಎಚ್ಚರಿಕೆ ಅಗತ್ಯ ಎಂದು ಸ್ಥಳೀಯ ಅಗ್ನಿಶಾಮಕದಳದ ಠಾಣಾಧಿಕಾರಿ ಗುರುನಾಥ ಐ.ನಾಯ್ಕ ಹೇಳಿದರು.
ಅವರು ತಾಲೂಕಿನ ಕೋಲಶಿರ್ಸಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನೆ ಕಚೇರಿ, ಆಧಾರ ಸಂಸ್ಥೆ(ರಿ) ಸಿದ್ದಾಪುರ, ಇವುಗಳ ಆಶ್ರಯದಲ್ಲಿ ನಡೆಯುತ್ತಿರುವ ಮಕ್ಕಳ ಬೇಸಿಗೆ ಶಿಬಿರದಲ್ಲಿ ಮಾಹಿತಿಯನ್ನು ನೀಡಿ ಮಾತನಾಡಿದರು.ಎಲ್ಲಾ ಬೆಂಕಿಗಳನ್ನು ನೀರನ್ನು ಸುರಿದು ಆರಿಸಲು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ನೀರನ್ನು ಹಾಕಿದರೆ ಬೆಂಕಿ ಸಿಡಿಯುತ್ತದೆ. ಎಣ್ಣೆ ಬಂಡಿಯಂತಹ ಅಡಿಗೆ ಪಾತ್ರಗೆ ಬೆಂಕಿ ಬಿದ್ದಾಗ ನೀರನ್ನು ಹಾಕಿದರೆ ಬೆಂಕಿ ಮೇಲಕ್ಕೆ ಬರುತ್ತದೆ. ಹಾಗೆ ವಿದ್ಯತ್ ಅವಘಡವಾದಾಗ ನೀರನ್ನು ಹಾಕುವಂತಿಲ್ಲ. ಅದಕ್ಕೆಲ್ಲ ಅದರದೇ ಆದ ರೀತಿಯಲ್ಲಿ ಬೇರೆಯ ಕ್ರಮಗಳನ್ನು ಬಳಸಿ ಬೆಂಕಿ ಆರಿಸಬೇಕು ಎಂದರು.


ಆಧಾರ ಸಂಸ್ಥೆಯ ಅಧ್ಯಕ್ಷ ನಾಗರಾಜ ನಾಯ್ಕ ಮಾಳ್ಕೋಡ ಮಾತನಾಡಿ ದೊಡ್ಡ ಬೆಂಕಿಯ ಅನಾಹುತಗಳು ಚಿಕ್ಕ ಕಿಡಿಯಿಂದಲ್ಲೆ ಹುಟ್ಟಿಕೊಳ್ಳುತ್ತವೆ. ಅದನ್ನು ಗಮನಿಸಿದ ತಕ್ಷಣದಲ್ಲಿ ಆರಿಸುವಂತಾಗಬೇಕು. ಆ ಕುರಿತು ನಮ್ಮಲ್ಲಿ ಅಗತ್ಯ ಜ್ಞಾನವನ್ನು ಮಾಹಿತಿಯ ಮೂಲಕ ಪಡೆದುಕೊಳ್ಳಬೇಕು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಬೇಸಿಗೆಯ ಕಾಲದಲ್ಲಿ ತೆಗೆದುಕೊಂಡರೆ ನಮ್ಮ ಸುತ್ತ ಆಗಬಹುದಾದ ದೊಡ್ಡ ಬೆಂಕಿ ಅನಾಹುತ ತಪ್ಪಿಸಲು ಸಾಧ್ಯ ಎಂದರು.
ಅಗ್ನಿಶಾಮಕ ಪ್ರಸಾದ ಎನ್.ನಾಯ್ಕ ಬೆಂಕಿಯ ಕುರಿತು ಮತ್ತು ಅದರ ವಿಭಾಗಗಳ ಕುರಿತಾಗಿ ವಿವರಿಸಿದರು. ಅಗ್ನಿಶಾಮಕದಳದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನೀಡಿದರು. ಶಿಬಿರದ ಮಕ್ಕಳೊಂದಿಗೆ ಸಂವಾದ ನಡೆಸಿದರು.
ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸ್ಮೀತಾ, ಜಾನಪದ ಕಲಾವಿದ ಗೋಪಾಲ ಕಾನಳ್ಳಿ, ಅಗ್ನಿಶಾಮಕ ಸಿಬ್ಬಂದಿಗಳಾದ ಮಾಸ್ತಿ ಎಂ.ಗೊಂಡ, ಚಂದ್ರ ನಾಯ್ಕ ಎಂ, ಬಾಳೇಶ ತಳವಾರ, ಬಸವಂತ ಜಗತಾಪ, ಜಗದೀಶ ಕಾಮತ ಉಪಸ್ಥಿತರಿದ್ದರು.

ಮಕ್ಕಳ ಸೃಜನಾತ್ಮಕ ಚಟುವಟಿಕೆಗಳಿಗೆ ಬೇಸಿಗೆ ಶಿಬಿರ ಪೂರಕ
ಸಿದ್ದಾಪುರ; ಇಂದಿನ ಮಕ್ಕಳು ಹೆಚ್ಚು ಕ್ರಿಯಾಶೀಲರಾಗಿರುತ್ತಾರೆ.ಪ್ರತಿಯೊಂದು ಮಗುವಿನಲ್ಲಿಯೂ ಒಂದು ಯಾವುದಾದರೂ ಪ್ರತಿಭೆ ಅಡಗಿರುತ್ತದೆ.ಅದನ್ನು ಬೆಳಕಿಗೆ ತರುವ ಕಾರ್ಯ ಆಗಬೇಕು. ಬೇಸಿಗೆ ಶಿಬಿರಗಳು ಮಕ್ಕಳ ಸೃಜನಾತ್ಮಕ ಚಟುವಟಿಕೆಗಳ ಬೆಳವಣಿಗೆಗಳಿಗೆ ಪೂರಕವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಶೀಲಾ ಮೊಗೆರ ಹೇಳಿದರು.
ಅವರು ತಾಲೂಕಿನ ಕೋಲಶಿರ್ಸಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನೆ ಕಚೇರಿ, ಆಧಾರ ಸಂಸ್ಥೆ(ರಿ) ಸಿದ್ದಾಪುರ, ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಕಳೆದ ಎರಡು ವರ್ಷಗಳಿಂದ ಇಲಾಖೆ ಕೋವಿಡ್ ಕಾರಣಕ್ಕೆ ಬೇಸಿಗೆ ಶಿಬಿರವನ್ನು ನಡೆಸಿರಲಿಲ್ಲ.ಶಿಬಿರದ ಪ್ರಯೋಜನವನ್ನು ಈ ಭಾಗದ ಮಕ್ಕಳು ಪಡೆದುಕೊಳ್ಳಬೇಕು. ಅಂಗಡಿಯ ತಿನಿಸುಗಳಿಗೆ ಆಕರ್ಷಿತರಾಗಿರದೆ ಪೌಷ್ಠಿಕ ಆಹಾರವನ್ನು ಹೆಚ್ಚು ಸೇವಿಸಬೇಕು. ಸದೃಢ ಆರೋಗ್ಯವನ್ನು ಹೊಂದುವಂತಾಗಬೇಕು ಎಂದರು.


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಿಕ್ಷಣ ಇಲಾಖೆಯ ಸಿ.ಆರ್.ಪಿ ರಾಮನಾಥ ನಾಯ್ಕ ಮಾತನಾಡಿ ಮಕ್ಕಳಿಗೆ ಪಠ್ಯದಿಂದ ಸಿಗುವುದು ಕೆಲವು ಮಾತ್ರ. ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ವಿವಿಧ ವಿಚಾರಗಳನ್ನು ಹೆಚ್ಚು ಅರಿಯಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿಯ ಸೂಪ್ತ ಪ್ರತಿಭೆ ಹೊರಬುರುವುದಕ್ಕೆ ವೇದಿಕೆಯಾಗುತ್ತದೆ ಎಂದರು. ಶಿಕ್ಷಕಿ ಸವಿತಾ ಹೆಗಡೆ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಫೇವಾರ್ಡ ಉತ್ತರ ಕನ್ನಡ ಅಧ್ಯಕ್ಷರಾದ ನಾಗರಾಜ ನಾಯ್ಕ ಮಾಳ್ಕೋಡ ಮಾತನಾಡಿ ಮಗುವಿನ ಮನಸ್ಸಿನಲ್ಲಿ ಕ್ರೀಯಾತ್ಮಕ ಸೃಜನಾತ್ಮಕ ಭಾವನೆಗಳನ್ನು ಬಿತ್ತುವ ಶಿಬಿರಗಳು ಮುಂದಿನ ಸರ್ವತೋಮುಖ ಬೆಳವಣಿಗೆಗಳಿಗೆ ಕಾರಣವಾಗುತ್ತದೆ. ವಾಸ್ತವ ಪ್ರಪಂಚದ ಅರಿವು ಮೂಡುವುದಕ್ಕೆ ಸಹಕಾರಿಯಾಗುತ್ತದೆ. ಅವರ ವ್ಯಕ್ತಿತ್ವ ವಿಕಸನಗೊಂಡು ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿಯನ್ನು ಹೆಚ್ಚಿಸುತ್ತದೆ ಎಂದರು.
ವೇದಿಕೆಯಲ್ಲಿ ಕರಾಠೆ ತರಬೇತಿ ಕೇಂದ್ರದ ಮುಖ್ಯಸ್ಥರಾದ ಆನಂದ ಕೆ.ನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಮೇಲ್ವಿಚಾರಕಿ ನಾಗರತ್ನ ನಾಯ್ಕ ಉಪಸ್ಥಿತರಿದ್ದರು.
ಶಿಬಿರಾರ್ಥಿಗಳಾದ ಕು.ಮಾನ್ಯ, ಪ್ರಾರ್ಥನಾ, ಹರ್ಷಿತ ಪ್ರಾರ್ಥಿಸಿದರು. ಕು.ಭುವನ ಹಾಗೂ ಕು. ಪ್ರಥಮ ನಾಡಗೀತೆ ಹಾಡಿದರು. ಕು.ಸುವಾಸ್ ಸ್ವಾಗತಿಸಿದರು. ಕು.ಹರ್ಷಿಣಿ ಕಾರ್ಯಕ್ರಮ ನಿರ್ವಹಿಸಿದರು.ಕು.ರಾಜೇಶ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *