ಸೇತುವೆ ಕಾಮಗಾರಿ ಮುಗಿಯದೆ ಗೋಳಾಡುತ್ತಿರುವ ಹೆಗ್ಗೇರಿ ಜನತೆ

ಸಿದ್ದಾಪುರ ಕ್ಯಾದಗಿ ಪಂಚಾಯತ್‌ ಹೆಗ್ಗೇರಿ ಗ್ರಾ.ಪಂ. ಕೇಂದ್ರದಿಂದ ಕೂಗಳತೆಯ ದೂರದ ಗ್ರಾಮ ಆದರೆ ಆ ಊರಿಗೆ ಅಭಿವೃದ್ಧಿಯೇ ಶಾಪವಾಗಿ ಪರಿಣಮಿಸಿದೆ.

ಸಿದ್ಧಾಪುರ, ಉತ್ತರ ಕನ್ನಡ ಜಿಲ್ಲೆಗೆ ನಿಗದಿತ ಸಮಯಕ್ಕಿಂತ ಮೊದಲೇ ಕಾಲಿಟ್ಟಿರುವ ಮಳೆ ಹಲವು ತೊಂದರೆಗಳಿಗೆ ಕಾರಣವಾಗಿದೆ. ರೈತರ ಕೆಲಸಗಳಾಗದೆ, ಕಾರು ಭತ್ತ ಮನೆ ಸೇರದೆ ರೈತರು ಚಿಂತೆಗೀಡಾಗಿರುವ ನಡುವೆ ಅಲ್ಲಲ್ಲಿ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳದ ಕಾಮಗಾರಿಗಳಿಂದ ಜನರು ಗೋಳಾಡುವಂತಾಗಿದೆ.

ಕ್ಯಾದಗಿ ಗ್ರಾಮ ಪಂಚಾಯತ್‌ ಬೇಗಾರಿನಲ್ಲಿ ಕಾಲು ಸೇತುವೆ ನೆಲಕ್ಕುರುಳಿದ್ದು ಆ ಬಗ್ಗೆ ಸಂಬಂಧಿಸಿದವರು ಗಮನ ಹರಿಸಿಲ್ಲ. ಕಳೆದ ಮಳೆಗಾಲದಲ್ಲಿ ಪ್ರವಾಹಕ್ಕೆ ಕೊಚ್ಚಿಹೋದ ಸಣ್ಣ ಸೇತುವೆ ಆಶ್ರಯಿಸಿದ್ದ ಜನರಿಗೆ ಈ ವರ್ಷದ ಮಳೆಗಾಲ ಶಾಪವಾಗಲಿದೆ.

ಕ್ಯಾದಗಿ ಗ್ರಾಮ ಪಂಚಾಯತ್‌ ಅಗಸರ ಹೊಳೆಗೆ ಸೇತುವೆ ನಿರ್ಮಿಸಿ ಕ್ಯಾದಗಿ ಮತ್ತು ಹೆಗ್ಗೇರಿಗೆ ಸಂಪರ್ಕ ಸುಗಮಗೊಳಿಸುವ ಉದ್ದೇಶದಿಂದ ಪ್ರಾರಂಭವಾದ ಲೋಕೋಪಯೋಗಿ ಇಲಾಖೆಯ ೩೩ ಲಕ್ಷ ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿ ಮುಗಿಯದೆ ಹೆಗ್ಗೇರಿ ಜನರು ಸಂಪರ್ಕ ಕೊರತೆ ಅನುಸರಿಸುತಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ವಿಳಂವಾಗೇ ಪ್ರಾರಂಭವಾದ ಕಾಮಗಾರಿ ಮುಗಿಯದೆ ಸ್ಥಳಿಯರಿಗೆ ವಾಹನ ಸಾಗಾಟಕ್ಕೆ ತೊಂದರೆ ಆಗಿದೆ. ಸ್ಥಳಿಯ ಗ್ರಾಮ ಪಂಚಾಯತ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ, ತಾಲೂಕಾ ಪಂಚಾಯತ್‌ ಮತ್ತು ಜಿ.ಪಂ. ಗಳಿಗೆ ಪ್ರತಿನಿಧಿಗಳೇ ಇಲ್ಲ, ಶಾಸಕ- ಸಂಸದರಂತೂ ಅಪರೂಪವಾಗಿದ್ದಾರೆ ಎನ್ನುವ ಸ್ಥಳೀಯರು ಈ ಕಾಮಗಾರಿ ವಿಳಂಬದಿಂದ ತಮ್ಮ ಸಂಪರ್ಕ ವ್ಯವಸ್ಥೆ ಸ್ಥಗಿತವಾಗಿದೆ ಎಂದು ದೂರಿದ್ದಾರೆ.

ಈ ಬಗ್ಗೆ ಸಮಾಜಮುಖಿ ಡಾಟ್‌ ನೆಟ್‌ ಪ್ರತಿನಿಧಿಗೆ ಮಾಹಿತಿ ನೀಡಿದ ಇಲಾಖೆಯ ಮೂಲಗಳು ಈ ಕಾಮಗಾರಿ ವಿಳಂಬಕ್ಕೆ ಗುತ್ತಿಗೆದಾರರ ಅಸಹಕಾರ ಕಾರಣ ಸದ್ಯದಲ್ಲೇ ಸೂಕ್ತ ವ್ಯವಸ್ಥೆಗೆ ಪ್ರಯತಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *