ಸಾಮಾಜಿಕ ಜಾಲತಾಣದ ಒಂದು ಪೋಸ್ಟ್​ನಿಂದ 18 ಲಕ್ಷ ರೂ. ಸಂಗ್ರಹ : ಮಗಳ ಜೀವ ಉಳಿಸಿಕೊಂಡ ತಾಯಿ!

Thumbnail image

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಬಗ್ಗೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದರು. ಪೋಸ್ಟ್ ಹಾಕಿದ ಕೇವಲ 15 ದಿನದಲ್ಲಿ 18 ಲಕ್ಷ ರೂ. ಸಂಗ್ರಹವಾಗಿ ಶಸ್ತ್ರಚಿಕಿತ್ಸೆಗೆ ಸಹಕಾರಿಯಾಗಿದೆ..

ಶಿವಮೊಗ್ಗ: ಮಾಹಿತಿ ಮತ್ತು ತಂತ್ರಜ್ಞಾನ ಹಾಗೂ ಸಾಮಾಜಿಕ ಜಾಲತಾಣವನ್ನು ಒಳ್ಳೆಯದಕ್ಕೆ ಹೇಗೆ ಬಳಸಿಕೊಳ್ಳಬಹುದು ಎಂಬುದಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಬಳಿಯ ದಾರಿಗದ್ದೆಯ ಮಹಿಳೆಯ ಕಥೆ ಸಾಕ್ಷಿಯಾಗಿದೆ‌.

ಶರಾವತಿ ಹಿನ್ನೀರಿನ ಪ್ರದೇಶವಾದ ದಾರಿಗದ್ದೆಯ ವಿಜಯ ಜೈನ್ ಎಂಬ ಅತಿಥಿ ಶಿಕ್ಷಕಿಗೆ ಕಳೆದ ಎರಡು ವರ್ಷಗಳಿಂದ ಕಿಡ್ನಿ ಸಮಸ್ಯೆ ಪ್ರಾರಂಭವಾಗಿತ್ತು. ಅವರು ಬದುಕಲು ಕಿಡ್ನಿ ಬದಲಾವಣೆ ಅನಿವಾರ್ಯ ಹಾಗೂ ಇದಕ್ಕೆ 15 ಲಕ್ಷ ರೂ. ಹಣ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು.

ಆದರೆ, ಬಡತನವನ್ನೇ ಹೊದ್ದು ಮಲಗಿದ್ದ ವಿಜಯ ಜೈನ್​ ಅವರಿಗೆ ಇಷ್ಟೊಂದು ಹಣ ಸಂಗ್ರಹ ಕಷ್ಟಕರವಾಗಿತ್ತು. ಆಗ ಇವರ ನೆರವಿಗೆ ಬಂದಿದ್ದು ತುಮರಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ಕರೂರು. ಇವರು ತಮ್ಮ ಫೇಸ್​ಬುಕ್ ಹಾಗೂ ವಾಟ್ಸ್​ಆ್ಯಪ್​ಗಳಲ್ಲಿ ವಿಜಯ್ ಆಪರೇಷನ್ ಕುರಿತು ಪೋಸ್ಟ್ ಮಾಡಿದ್ದರು.

ಮಗಳ ಜೀವ ಉಳಿಸಿಕೊಂಡ ಮಹಿಳೆ

ಮಗಳ ಜೀವ ಉಳಿಸಿಕೊಂಡ ಮಹಿಳೆ

ಅಂತೆಯೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ ಕೇವಲ 15 ದಿನದಲ್ಲಿ 18 ಲಕ್ಷ ರೂ. ಸಂಗ್ರಹವಾಗಿತ್ತು. ಈ ಹಣವನ್ನು ವಿಜಯ ಜೈನ್ ಅವರ ಕಿಡ್ನಿ ಬದಲಾವಣೆಗೆ ಬಳಸಲು ನೀಡಲಾಗಿದೆ. ಮಣಿಪಾಲದ ಆಸ್ಪತ್ರೆಯಲ್ಲಿ ಆಪರೇಷನ್ ನಡೆದಿದೆ.

ವಿಜಯ ಜೈನ್ ಅವರಿಗೆ ಅವರ ತಾಯಿಯೇ ಕಿಡ್ನಿ ನೀಡಿದ್ದು ವಿಶೇಷವಾಗಿದೆ. ಈ ಮೂಲಕ ತಾಯಿಗೆ ಮಗಳ ಜೀವ ಉಳಿಸಿಕೊಂಡಂತೆಯೂ ಆಗಿದ್ದು, ಸದ್ಯ ತಾಯಿ-ಮಗಳು ಇಬ್ಬರೂ ಆರೋಗ್ಯವಾಗಿದ್ದಾರೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *