


ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಬಗ್ಗೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಪೋಸ್ಟ್ ಹಾಕಿದ ಕೇವಲ 15 ದಿನದಲ್ಲಿ 18 ಲಕ್ಷ ರೂ. ಸಂಗ್ರಹವಾಗಿ ಶಸ್ತ್ರಚಿಕಿತ್ಸೆಗೆ ಸಹಕಾರಿಯಾಗಿದೆ..

ಶಿವಮೊಗ್ಗ: ಮಾಹಿತಿ ಮತ್ತು ತಂತ್ರಜ್ಞಾನ ಹಾಗೂ ಸಾಮಾಜಿಕ ಜಾಲತಾಣವನ್ನು ಒಳ್ಳೆಯದಕ್ಕೆ ಹೇಗೆ ಬಳಸಿಕೊಳ್ಳಬಹುದು ಎಂಬುದಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಬಳಿಯ ದಾರಿಗದ್ದೆಯ ಮಹಿಳೆಯ ಕಥೆ ಸಾಕ್ಷಿಯಾಗಿದೆ.
ಶರಾವತಿ ಹಿನ್ನೀರಿನ ಪ್ರದೇಶವಾದ ದಾರಿಗದ್ದೆಯ ವಿಜಯ ಜೈನ್ ಎಂಬ ಅತಿಥಿ ಶಿಕ್ಷಕಿಗೆ ಕಳೆದ ಎರಡು ವರ್ಷಗಳಿಂದ ಕಿಡ್ನಿ ಸಮಸ್ಯೆ ಪ್ರಾರಂಭವಾಗಿತ್ತು. ಅವರು ಬದುಕಲು ಕಿಡ್ನಿ ಬದಲಾವಣೆ ಅನಿವಾರ್ಯ ಹಾಗೂ ಇದಕ್ಕೆ 15 ಲಕ್ಷ ರೂ. ಹಣ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು.
ಆದರೆ, ಬಡತನವನ್ನೇ ಹೊದ್ದು ಮಲಗಿದ್ದ ವಿಜಯ ಜೈನ್ ಅವರಿಗೆ ಇಷ್ಟೊಂದು ಹಣ ಸಂಗ್ರಹ ಕಷ್ಟಕರವಾಗಿತ್ತು. ಆಗ ಇವರ ನೆರವಿಗೆ ಬಂದಿದ್ದು ತುಮರಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ಕರೂರು. ಇವರು ತಮ್ಮ ಫೇಸ್ಬುಕ್ ಹಾಗೂ ವಾಟ್ಸ್ಆ್ಯಪ್ಗಳಲ್ಲಿ ವಿಜಯ್ ಆಪರೇಷನ್ ಕುರಿತು ಪೋಸ್ಟ್ ಮಾಡಿದ್ದರು.

ಮಗಳ ಜೀವ ಉಳಿಸಿಕೊಂಡ ಮಹಿಳೆ
ಅಂತೆಯೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ ಕೇವಲ 15 ದಿನದಲ್ಲಿ 18 ಲಕ್ಷ ರೂ. ಸಂಗ್ರಹವಾಗಿತ್ತು. ಈ ಹಣವನ್ನು ವಿಜಯ ಜೈನ್ ಅವರ ಕಿಡ್ನಿ ಬದಲಾವಣೆಗೆ ಬಳಸಲು ನೀಡಲಾಗಿದೆ. ಮಣಿಪಾಲದ ಆಸ್ಪತ್ರೆಯಲ್ಲಿ ಆಪರೇಷನ್ ನಡೆದಿದೆ.
ವಿಜಯ ಜೈನ್ ಅವರಿಗೆ ಅವರ ತಾಯಿಯೇ ಕಿಡ್ನಿ ನೀಡಿದ್ದು ವಿಶೇಷವಾಗಿದೆ. ಈ ಮೂಲಕ ತಾಯಿಗೆ ಮಗಳ ಜೀವ ಉಳಿಸಿಕೊಂಡಂತೆಯೂ ಆಗಿದ್ದು, ಸದ್ಯ ತಾಯಿ-ಮಗಳು ಇಬ್ಬರೂ ಆರೋಗ್ಯವಾಗಿದ್ದಾರೆ. (etbk)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
