


ಬೀದಿ ಫೋಕರಿಯೊಬ್ಬ ನಾಡಿನ ಮಕ್ಕಳ ಶಿಕ್ಷಣ ನಿರ್ಧರಿಸುವುದು ಕರ್ನಾಟಕದ ದೌರ್ಭಾಗ್ಯ- ಕಾಂಗ್ರೆಸ್ ಟೀಕೆ
ಶುದ್ಧ ಬೀದಿ ಫೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಬೆಂಗಳೂರು: ಶುದ್ಧ ಬೀದಿ ಫೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹಾ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು, ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ.ಕುವೆಂಪು ಅಂತವರಿಗೆ, ನಾಡಗೀತೆಗೆ, ನಾಡು ನುಡಿಗೆ ಅವಮಾನಿಸುವ ಈತ ಮಕ್ಕಳ ಕಲಿಕೆಯನ್ನು ನಿರ್ಧರಿಸುವುದಕ್ಕಿಂತ ಬೇರೆ ಅವಮಾನವಿದೆಯೇ? ಎಂದು ಪ್ರಶ್ನಿಸಿದೆ.
ಕನಿಷ್ಠ ಪ್ರಜ್ಞಾವಂತಿಕೆ, ಪ್ರಬುದ್ಧತೆ ಇಲ್ಲದಿರುವ ಈತ ಇನ್ನೆಂತಹಾ ಪಠ್ಯ ಸೇರಿಸಬಹುದು. ಸರ್ಕಾರ ಕೂಡಲೇ ಈತನನ್ನು ಕಿತ್ತು ಹಾಕಬೇಕು ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಒತ್ತಾಯಿಸಿದೆ. ಸುಳ್ಳು ತಜ್ಞ, ಬಿಜೆಪಿಯ ಬಾಡಿಗೆ ಭಾಷಣಕಾರನೊಬ್ಬನ ಬರಹವನ್ನು ಪಠ್ಯ ಪುಸ್ತಕದಲ್ಲಿ ಸೇರಿಸಿದ ಸರ್ಕಾರಕ್ಕೆ ಕನಿಷ್ಠ ಮಾರ್ಯಾದೆಯೂ ಇಲ್ಲದಾಗಿದೆ. ಬಿಜೆಪಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಅವರಿಂದ ದೇಶದ್ರೋಹಿ ಬಿರುದು ಪಡೆದವನ ಬರಹವನ್ನು ಪಠ್ಯದಲ್ಲಿ ಅಳವಡಿಸುವುದು ದೇಶದ್ರೋಹವಲ್ಲವೇ?ಎಂದು ಪ್ರಶ್ನಿಸಿದೆ.
ಶಿಕ್ಷಣ ಸಚಿವರು, ಪಠ್ಯ ಪುಸ್ತಕ ಸಮಿತಿಯ ಫೋಕರಿ ಅಧ್ಯಕ್ಷನನ್ನು ಸಮರ್ಥಿಸುತ್ತಾ ಸಿಇಟಿ ಪ್ರೊಫೆಸರ್ ಆಗಿದ್ದರು ಎಂದಿದ್ದಾರೆ. ಸಿಇಟಿ ಯೂನಿರ್ವಸಿಟಿ ಇದೆಯೇ?ಎಲ್ಲಿದೆ? ಅಥವಾ ವಾಟ್ಸಾಪ್ ಯೂನಿವರ್ಸಿಟಿ ರೀತಿ ಅದೂ ನಿಮ್ಮ ಪ್ರೊಫೆಗಂಡಾ ಯೂನಿವರ್ಸಿಟಿಯೇ? ಎಂಬುದನ್ನು ಸ್ಪಷ್ಪಪಡಿಸಿದೆ. ಇಲ್ಲದಲ್ಲಿ ಶಿಕ್ಷಣ ಇಲಾಖೆ ಶತಮೂರ್ಖರ ಕೈಯಲ್ಲಿದೆ ಎಂದು ಒಪ್ಪಿಕೊಳ್ಳಿ ಎಂದು ಕಾಂಗ್ರೆಸ್ ಕಿಡಿಕಾರಿದೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
